ಅಧಿಕ ಬೆಲೆಗೆ ಯೂರಿಯಾ ಮಾರಾಟ: ಕ್ರಮಕ್ಕೆ ಒತ್ತಾಯ
Team Udayavani, Aug 23, 2020, 2:00 PM IST
ಸಾಂದರ್ಭಿಕ ಚಿತ್ರ
ಮಾನ್ವಿ: ರಸಗೊಬ್ಬರ ಅಂಗಡಿಗಳ ಮಾಲೀಕರು ದುಬಾರಿ ಬೆಲೆಗೆ ಯೂರಿಯಾ ಮಾರಾಟ ಮಾಡುತ್ತಿದ್ದು, ಕೃಷಿ ಅಧಿಕಾರಿಗಳು ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕಾಧ್ಯಕ್ಷ ಕೆ.ವೈ. ಬಸವರಾಜ ನಾಯಕ ಒತ್ತಾಯಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ರೈತರು ಹತ್ತಿ, ತೊಗರಿ, ಸಜ್ಜೆ, ಸೂರ್ಯಕಾಂತಿ ಬೆಳೆದಿದ್ದಾರೆ. ಈ ಬಾರಿ 20 ಸಾವಿರ ಹೆಕ್ಟೇರ್ನಲ್ಲಿ ಹತ್ತಿ ಬೆಳೆದಿದ್ದಾರೆ. ಆದರೆ ಪ್ರಸ್ತುತ ರೈತರಿಗೆ ಅವಶ್ಯಕವಿರುವ ಔಷ ಧ ಮತ್ತು ಯೂರಿಯಾ ಗೊಬ್ಬರ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುತ್ತಿಲ್ಲ. ಅನಿವಾರ್ಯವಾಗಿ ರೈತರು ಖಾಸಗಿ ಅಂಗಡಿಗಳಲ್ಲಿ ದುಬಾರಿ ಬೆಲೆಗೆ ಖರೀದಿಸುವಂತಾಗಿದೆ. ಕೂಡಲೇ ಕೃಷಿ ಅಧಿಕಾರಿಗಳು ಅಗತ್ಯ ಔಷಧ, ಯೂರಿಯಾ ಗೊಬ್ಬರ ಪೂರೈಕೆಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎಪಿಎಂಸಿ, ಭೂ ಸುಧಾರಣೆ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಿರುವುದುರೈತ ವಿರೋಧಿಯಾಗಿದೆ. ರೈತರನ್ನು ದಿವಾಳಿ ಎಬ್ಬಿಸಿ ಬೀದಿಗೆ ತರುವ ಹುನ್ನಾರವಾಗಿದೆ. ರೈಲ್ವೆ ಖಾಸಗೀಕರಣ, ಎಪಿಎಂಸಿ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆಗಳನ್ನು ಕಾರ್ಪೋರೇಟ್ ಕಂಪನಿಗಳಿಗೆ ಆನುಕೂಲವಾಗುವಂತೆ ರೂಪಿಸಲಾಗಿದೆ. ಕೂಡಲೇ ಈ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಯೂರಿಯಾ ಗೊಬ್ಬರ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ