ಖಾಸಗಿ ಶಾಲಾ-ಕಾಲೇಜುಗಳ ಸಮಸ್ಯೆ ನಿವಾರಣೆಗೆ ಒತ್ತಾಯ
Team Udayavani, Jul 7, 2022, 5:32 PM IST
ರಾಯಚೂರು: ಖಾಸಗಿ ಅನುದಾನ, ಅನುದಾನ ರಹಿತ ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ಸಮಸ್ಯೆಗಳ ನಿವಾರಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿನಾಗೇಶರಿಗೆ ಮನವಿ ಸಲ್ಲಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲ ಅನುದಾನರಹಿತ ಶಾಲಾ- ಕಾಲೇಜುಗಳನ್ನು ಸಂವಿಧಾನ 371(ಜೆ) ಅಡಿ ವೇತನಾನುದಾನಕ್ಕೆ ಒಳಪಡಿಸಬೇಕು. ಸರ್ಕಾರ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು 2015ರ ಮುಂಚೆ ನಿವೃತ್ತಿ ಹಾಗೂ ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿಗೆ ಅನುಮತಿಸಿದೆ. ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದ ಕಾರಣ 2021ರವರೆಗೆ ತೆರವಾದ ಬೋಧಕ ಹುದ್ದೆಗಳ ಭರ್ತಿ ಮಾಡಲು ಆದೇಶಿಸಬೇಕು ಎಂದು ಒತ್ತಾಯಿಸಿದರು.
ಖಾಸಗಿ ಶಾಲಾ-ಕಾಲೇಜುಗಳಲ್ಲಿ ಓದುವ ಮಕ್ಕಳಿಗಾಗಿ ಕುಡಿಯುವ ನೀರು ಹಾಗೂ ಶೌಚಾಲಯಗಳನ್ನು ಸರ್ಕಾರ ಅಥವಾ ಕೆಕೆಆರ್ಡಿಬಿಯಿಂದ ನಿರ್ಮಿಸಬೇಕು ಎಂಬುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಹೈ.ಕ ಹೋರಾಟ ಸಮಿತಿ ಮುಖಂಡ ಡಾ| ರಜಾಕ್ ಉಸ್ತಾದ್, ಕೇಶವರೆಡ್ಡಿ, ಬಸವರಾಜ ಪಾಟೀಲ್ ದರೂರು ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’