ಅರಣ್ಯ ಇಲಾಖೆಯಲ್ಲಿ ಹುದ್ದೆ ಖಾಲಿ ಖಾಲಿ

ಒಬ್ಬ ಅಧಿಕಾರಿಗೆ ಮೂರು ಇಲಾಖೆ ಹೊಣೆ ,ಅರಣ್ಯದಲ್ಲಿನ ಮರಗಳಿಗೆ ಬೀಳುತ್ತಿದೆ ಕೊಡಲಿಪೆಟ್ಟು

Team Udayavani, Oct 5, 2020, 5:42 PM IST

ಅರಣ್ಯ ಇಲಾಖೆಯಲ್ಲಿ ಹುದ್ದೆ  ಖಾಲಿ ಖಾಲಿ

ದೇವದುರ್ಗ: ಪಟ್ಟಣದ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ವಲಯ ಅರಣ್ಯಾಧಿಕಾರಿ ಸೇರಿ ಇತರೆ ಅಧಿಕಾರಿ, ಸಿಬ್ಬಂದಿ ಹುದ್ದೆ ಖಾಲಿ ಇದ್ದು, ಇರುವ ಸಿಬ್ಬಂದಿಯೇ ಅರಣ್ಯ ಸಂರಕ್ಷಣೆ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಹರಸಾಹಸಪಡುವಂತಾಗಿದೆ.

ಹುದ್ದೆಗಳು ಖಾಲಿ ಖಾಲಿ: ಪಟ್ಟಣದ ವಲಯ ಅರಣ್ಯ ಇಲಾಖೆ ಅಧಿಕಾರಿ ಸೇರಿ ಎರಡು ಉಪ ವಲಯ ಅಧಿಕಾರಿ, ಅರಣ್ಯ ರಕ್ಷಣೆ, ಎಫ್‌ಡಿಎ ಸೇರಿ ವಿವಿಧ ಹುದ್ದೆಗಳು ಖಾಲಿ ಇವೆ. ಹೀಗಾಗಿ ಕಚೇರಿಯಲ್ಲಿ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಿವೆ. ರಾಜ್ಯ ಸರಕಾರ ಸುಮಾರು ವರ್ಷಗಳಿಂದ ಖಾಲಿ ಹುದ್ದೆ ಭರ್ತಿಗೆ ಮುಂದಾಗದ್ದರಿಂದ ಇರುವ ಸಿಬ್ಬಂದಿ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಪಟ್ಟಣ ಮತ್ತು ಮಸರಕಲ್‌ ಉಪ ವಲಯ ಅಧಿಕಾರಿ ಹುದ್ದೆ ಖಾಲಿ ಇದೆ. ಅರಣ್ಯ ರಕ್ಷಕರ ಹುದ್ದೆಯೂ ಖಾಲಿರುವ ಕಾರಣ ಅರಣ್ಯ ಸಂರಕ್ಷಣೆಗೆ ಇಲ್ಲಿನ ಅಧಿ ಕಾರಿಗಳು ಸಮಸ್ಯೆ ಎದುರಿಸುವಂತಾಗಿದೆ. ಪರಿಚಾರ ಹುದ್ದೆ ಖಾಲಿ ಇದ್ದು, ಗುತ್ತಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ.

ಮೂರು ಇಲಾಖೆ ಹೊಣೆ: ಇಲ್ಲಿನ ವಲಯ ಅರಣ್ಯ ಅಧಿಕಾರಿಗೆ ರಾಯಚೂರು, ಮಾನ್ವಿ, ದೇವದುರ್ಗ ಪ್ರಭಾರಿ ವಹಿಸಲಾಗಿದೆ. ವಾರದಲ್ಲಿ ಎರಡ್ಮೂರು ದಿನ ಕಚೇರಿಗೆ ಆಗಮಿಸುತ್ತಿದ್ದು, ಕಚೇರಿ ಕಡತಗಳ ವಿಲೇವಾರಿ ವಿಳಂಬವಾಗುತ್ತಿದೆ. ದಿನಗೂಲಿ ಸಿಬ್ಬಂದಿ ವೇತನ ಪಾವತಿ ಕೂಡ ವಿಳಂಬವಾಗುತ್ತಿದೆ. ಎಫ್‌ ಡಿಎ ಹುದ್ದೆ ಖಾಲಿ ಇದ್ದು ಗುತ್ತಿಗೆ ಸಿಬ್ಬಂದಿ ಕಚೇರಿ, ಕೆಲಸ ಕಾರ್ಯ ನೋಡಿಕೊಳ್ಳಬೇಕಿದೆ.

ಕಾದಿಟ್ಟ ಅರಣ್ಯ: ಪಟ್ಟಣ ಸೇರಿ ತಾಲೂಕಿನಾದ್ಯಂತ ಸಾವಿರಾರು ಹೆಕ್ಟೇರ್‌ ಕಾದಿಟ್ಟ ಅರಣ್ಯ ಪ್ರದೇಶವಿದೆ. ಈ ಭಾಗದಲ್ಲಿ ಬೆಟ್ಟಗಳು, ವನ್ಯ ಸಂಪತ್ತು ಇದೆ. ಇದೀಗ ಸತತ ಮಳೆಯಿಂದ ಕಾದಿಟ್ಟ ಅರಣ್ಯ ಪ್ರದೇಶ ಹಸಿರು ಹೊದ್ದು ನಿಂತಿದೆ. ಇಲ್ಲಿನ ಮರಗಳಿಗೆ ಆಗಾಗ ಕೊಡಲಿ ಪೆಟ್ಟು ಬೀಳುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಇವುಗಳ ಸಂರಕ್ಷಣೆ ಸವಾಲಾಗಿದೆ. ಸಾವಿರಾರು ಸಸಿಗಳು: ಜಾಲಹಳ್ಳಿ, ತಳವರದೊಡ್ಡಿ,ಸಮುದ್ರ, ಜಾಗೀರ ಜಾಡಲದಿನ್ನಿ ಸೇರಿ ಇತರೆ ಗ್ರಾಮಗಳ ವ್ಯಾಪ್ತಿಯ ಅರಣ್ಯ ಇಲಾಖೆಯ ನಿವೇಶನದಲ್ಲಿ 20 ಸಾವಿರಕ್ಕೂ ಹೆಚ್ಚು ವಿವಿಧ ಗಿಡಗಳನ್ನು ಬೆಳೆಸಲಾಗಿದೆ. ಒಂದು ಗ್ರಾಮದಲ್ಲಿ 5 ಸಾವಿರದಂತೆ ಸಸಿಗಳನ್ನು ನೆಡಲಾಗಿದೆ. ಪಟ್ಟಣದಲ್ಲಿ 900 ಗಿಡಗಳು, ರಾಜ್ಯ ಹೆದ್ದಾರಿ ರಸ್ತೆ ಪಕ್ಕದಲ್ಲಿ 900 ಗಿಡಗಳನ್ನು ಬೆಳೆಸಲಾಗಿದೆ. ರಸ್ತೆ ಬದಿ ಬೆಳೆಸಿದಗಿಡಗಳು ಆಗಾಗ ಜಾನುವಾರುಗಳಿಗೆ ಆಹಾರಆಗುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಯಲ್ಲಿನ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಬೇಕಿದೆ.

ರಾಯಚೂರು, ಮಾನ್ವಿ ಇಲಾಖೆ ಜತೆ ದೇವದುರ್ಗ ವಲಯ ಅರಣ್ಯ ಇಲಾಖೆ ಕಚೇರಿ ಜವಾಬ್ದಾರಿ ನೀಡಲಾಗಿದೆ. ಕೆಲ ಹುದ್ದೆಗಳು ಖಾಲಿರುವ ಕಾರಣ ಇರುವಂತಹ ಅ ಧಿಕಾರಿಗಳು ಅರಣ್ಯ ಸಂರಕ್ಷಣೆ ಮಾಡಬೇಕಾಗಿದೆ.  -ರಾಜೇಶ, ಪ್ರಭಾರಿ ವಲಯ ಅರಣ್ಯಾಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.