ಲಸಿಕಾ ಕರಣ: ಹಳ್ಳಿ ಗಳತ್ತ ಆರೋಗ್ಯ ಇಲಾಖೆ

1.80 ಲಕ್ಷಕ್ಕೂಅಧಿಕ ಗುರಿ; ನ್ಯಾಯಬೆಲೆಅಂಗಡಿ,ಬಸ್‌ ನಿಲ್ದಾಣ, ಸರ್ಕಾರಿ ಕಚೇರಿಯಲ್ಲಿ ಬೀಡುಬಿಟ್ಟ ಸಿಬ್ಬಂದಿ

Team Udayavani, Aug 29, 2021, 8:40 PM IST

ಲಸಿಕಾ ಕರಣ: ಹಳ್ಳಿ ಗಳತ್ತ ಆರೋಗ್ಯ ಇಲಾಖೆ

ದೇವದುರ್ಗ: ಕೋವಿಡ್‌ ಮೂರನೇ ಅಲೆ ಎಚ್ಚರಿಕೆ ನಡುವೆಯೇ ಆರೋಗ್ಯ ಇಲಾಖೆ ಲಸಿಕೆ ಮೇಳ ಕಾರ್ಯಕ್ರಮ ಮೂಲಕ ಕೋವಿಡ್‌ ಲಸಿಕೆ ಗುರಿ ಮುಟ್ಟಲು ಹಳ್ಳಿಗಳತ್ತ ದೌಡಾಯಿಸಿದೆ.

1.80 ಲಕ್ಷಕ್ಕೂ ಅಧಿಕ ಗುರಿ ಹೊಂದಿದೆ. ಈಗಾಗಲೇ 90 ಸಾವಿರ ಗಡಿದಾಟಿದೆ. ನ್ಯಾಯಬೆಲೆ ಅಂಗಡಿ, ಬಸ್‌ ನಿಲ್ದಾಣ, ಸರ್ಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಬೀಡು ಬಿಟ್ಟಿದ್ದಾರೆ.

ಲಸಿಕೆ ಗುರಿ: ಕೋವಿಡ್‌ ಎರಡನೇ ಅಲೆಯ ಭೀತಿಯಲ್ಲಿ ಅನೇಕರು ಕೋವಿಡ್‌ನಿಂದ ಪ್ರಾಣ ಕಳೆದುಕೊಂಡರು.ಮೂರನೇಅಲೆಯ ಎಚ್ಚರಿಕೆ ಮಧ್ಯೆಯೂ ಆರೋಗ್ಯ ಇಲಾಖೆ 18 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬರಿಗೂ ಲಸಿಕೆ ಹಾಕುವ ಸಕಲ ಸಿದ್ಧತೆ ನಡೆಸಿದೆ. ಇನ್ನು ಒಂದೂವರೆ ತಿಂಗಳಲ್ಲಿ ಅಂದುಕೊಂಡಂತೆ ಗುರಿ ಮುಟ್ಟಲು ಲಸಿಕೆ ಸಿದ್ಧತೆ ಜೋರಾಗಿದೆ. ಖಾಸಗಿ ಸಂಘ-ಸಂಸ್ಥೆಗಳು ಕೋವಿಡ್‌ ಲಸಿಕೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಿವೆ.

ಮೊದಲನೇ ಎರಡನೇ ಡೋಸ್‌: ಕೋವಿಡ್‌ ಲಸಿಕೆ ಗುರಿ ಬೆನ್ನತ್ತಿದ್ದ ಆರೋಗ್ಯ ಇಲಾಖೆ ಕಂದಾಯ, ತಾಪಂ, ಗ್ರಾಮ ಪಂಚಾಯಿತಿ,
ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿ ಇತರೆ ಇಲಾಖೆ ಸಹಕಾರದೊಂದಿಗೆ ಮೊದಲನೇ ಡೋಸ್‌ ಲಸಿಕೆ 80 ಸಾವಿರಕ್ಕೂ ಅಧಿಕ ಜನರಿಗೆ ಹಾಕಲಾಗಿದೆ. ಎರಡನೇ ಡೋಸ್‌ 18 ಸಾವಿರ ಅಸುಪಾಸಿನಲ್ಲಿ ಹಾಕಲಾಗಿದೆ. ಶುಕ್ರವಾರ ಲಸಿಕೆ ಮೇಳ ಕಾರ್ಯಕ್ರಮ ಮೂಲಕ ಒಂದೇ ದಿನದಲ್ಲಿ 5 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ.ಕೋವಿಡ್‌ ಲಸಿಕೆ ಹಾಕಲು ಪ್ರತಿ ಹಳ್ಳಿಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ನ್ಯಾಯಬೆಲೆ ಅಂಗಡಿ: ಪಟ್ಟಣ ಸೇರಿ ತಾಲೂಕಿನಾದ್ಯಂತನ್ಯಾಯಬೆಲೆಅಂಗಡಿಗಳಲ್ಲಿ ಕೋವಿಡ್‌ ಲಸಿಕೆ ಹಾಕಲಾಗುತ್ತಿದೆ. ಪ್ರತಿ ತಿಂಗಳ ಪಡಿತರ ಚೀಟಿ ಫಲಾನುಭವಿಗಳು ಆಹಾರ ಧ್ಯಾನ ತೆಗೆದುಕೊಂಡು ಹೋಗಲು ಬರುವಂತಹವರಿಗೆ ಲಸಿಕೆ ಹಾಕಿಸಿಕೊಳ್ಳದಂತಹ ಫಲಾನುಭವಿಗಳಿಗೆ
ಕಡ್ಡಾಯ ಲಸಿಕೆ ಪಡೆದ ನಂತರವೇ ಆಹಾರ ಪೂರೈಸಲಾಗುತ್ತದೆ. ಬಹುತೇಕರು ಲಸಿಕೆ ಸೌಲಭ್ಯ ಪಡೆಯಲು ಹಿಂದೇಟು ಹಾಕಿದ ಮಾಹಿತಿ ಕಲೆ ಹಾಕಿ ಪ್ರತಿಯೊಬ್ಬ ಫಲಾನುಭವಿಗಳಿಗೆ ಕೋವಿಡ್‌ ಲಸಿಕೆ ಹಾಕಲಾಗುತ್ತಿದೆ.

ಇದನ್ನೂ ಓದಿ:ಪ್ರೇಮಿಗಳೆ ಟಾರ್ಗೆಟ್| ಮೈಸೂರು ವಿದ್ಯಾರ್ಥಿನಿ ಅತ್ಯಾಚಾರಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗ

ಬಸ್‌ ನಿಲ್ದಾಣ-ಸರ್ಕಾರಿ ಕಚೇರಿ: ಕೋವಿಡ್‌ ಜಾಗೃತಿ ನಡುವೆಯೇ ಆರೋಗ್ಯ ಇಲಾಖೆ ಬಸ್‌ ನಿಲ್ದಾಣ,ಮಿನಿ ವಿಧಾನಸೌಧ ಸರ್ಕಾರಿ ಕಚೇರಿ ಯಲ್ಲಿ ಜನರಿಗೆ ಕೋವಿಡ್‌ ಲಸಿಕೆ ಹಾಕಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಳ್ಳಿಗಳಿಗೆ ಮತ್ತು ನಗರ ಪ್ರದೇಶಗಳಿಗೆ ಹೋಗುವಂತಹ ಪ್ರಯಾಣಿಕರಿಗೆ ಬಸ್‌ ಏರುವ ಮುನ್ನ ಲಸಿಕೆ ಹಾಕಲಾಗುತ್ತಿದೆ. ಮಿನಿವಿಧಾನಸೌಧ ಒಳಗಿರುವ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವ ಜನರಿಗೆ ಲಸಿಕೆ ಹಾಕಿದ ನಂತರವೇ ಕಚೇರಿ ಒಳಗೆ ಪ್ರವೇಶವಿದೆ.

ಮನೆ-ಮನೆಗೆ ಆರೋಗ್ಯ ಸಿಬ್ಬಂದಿ: ನಿಗದಿತ ಗುರಿ ಮುಟ್ಟಲು ಜನರ ಆರೋಗ್ಯ ಸಂರಕ್ಷಣೆ ಉದ್ದೇಶ ಹಿನ್ನೆಲೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಹೋಗಿ ಕೋವಿಡ್‌ ಲಸಿಕೆ ಹಾಕಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡಿದ್ದೇವೆಂದು ಸುಳ್ಳು ಹೇಳಿ ತಪ್ಪಿಸಿಕೊಳ್ಳುವ ಜನರ ಮಾಹಿತಿ ಕಲೆ ಹಾಕಿ ಅಂತಹವರಿಗೂ ಲಸಿಕೆ ಹಾಕಲಾಗುತ್ತಿದೆ. ಹೋಟೆಲ್‌ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಮಾಲೀಕರಿಗೆ ಲಸಿಕೆ ಹಾಕಲಾಗುತ್ತಿದೆ. ಹೊಲಗದ್ದೆ ಕೆಲಸ ಹೋಗಿ ತಡವಾಗಿ ಬರುವ ಕೂಲಿ ಕಾರರಿಗೆ ಲಸಿಕೆ ಹಾಕಲು ಆರೋಗ್ಯ ಇಲಾಖೆ ಒಂದು ಹೆಜ್ಜೆ ಮುಂದಿಟ್ಟಿದೆ.

ಪ್ರತಿ ಮನೆ, ನ್ಯಾಯಬೆಲೆ ಬಸ್‌ ನಿಲ್ದಾಣ, ಸರ್ಕಾರಿ ಕಚೇರಿಯಲ್ಲಿ ಲಸಿಕೆ ಹಾಕಲಾಗುತ್ತಿದೆ. ಒಂದೂವರೆ ತಿಂಗಳಲ್ಲಿ ನಿಗದಿತ ಗುರಿ ಮುಟ್ಟಲು ಸಿದ್ಧತೆ ನಡೆದಿದೆ. ಲಸಿಕೆ ಮೇಳಕಾರ್ಯಕ್ರಮ ಮೂಲಕ ಶುಕ್ರವಾರ ಒಂದೇ ದಿನ 5 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ.ಕೆಲ ಇಲಾಖೆಗಳು ಸಹಕರಿಸುತ್ತಿವೆ.
-ಡಾ|ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ

ಎಲ್ಲಾ ಹಂತದ ಕಾರ್ಯಕ್ರಮಗಳ ಮೂಲಕ ಕೋವಿಡ್‌ ಲಸಿಕೆ ಕುರಿತು ಜಾಗೃತಿ ಮೂಡಿಸಲಾಗಿದೆ. 90 ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆಹಾಕಲಾಗಿದೆ.ನ್ಯಾಯಬೆಲೆ ಪಡಿತರ ಫಲಾನುಭವಿಗಳಿಗೆ ಕಡ್ಡಾಯವಾಗಿ ಲಸಿಕೆಹಾಕುವಂತೆ ಸೂಚನೆ ನೀಡಲಾಗಿದೆ.
-ಶ್ರೀನಿವಾಸಚಾಪಲ್‌, ಪ್ರಭಾರ ತಹಶೀಲ್ದಾರ್‌

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.