ವಟಗಲ್‌ ಏತ ನೀರಾವರಿ ಜಾರಿಗೆ ಹೋರಾಟ

ಈ ಪ್ರಕ್ರಿಯೆಯನ್ನು ಬೇಗ ಮುಗಿಸಿ ರೈತರ ಜಮೀನಿಗೆ ನೀರೊದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Team Udayavani, Feb 5, 2021, 4:11 PM IST

ವಟಗಲ್‌ ಏತ ನೀರಾವರಿ ಜಾರಿಗೆ ಹೋರಾಟ

ರಾಯಚೂರು: ಮಸ್ಕಿ ಕ್ಷೇತ್ರದ ವಟಗಲ್‌ ಬಸವೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ಕೈ ಬಿಡಬಾರದು ಎಂದು
ಆಗ್ರಹಿಸಿ ವಟಗಲ್‌ ಬಸವೇಶ್ವರ ಏತ ನೀರಾವರಿ ಹೋರಾಟ ಸಮಿತಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿತು.

ನಗರದ ರಂಗಮಂದಿರದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ
ಸಲ್ಲಿಸಿದರು. ಈ ವೇಳೆ ಮನವಿ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿ ದುರಗೇಶ ಆಗಮಿಸಿದಾಗ ಒಪ್ಪದ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾರಿಯೇ
ಬರಲಿ ಎಂದು ಪಟ್ಟು ಹಿಡಿದರು. ಪೊಲೀಸರು ಮನವೊಲಿಸಲು ಮುಂದಾದರೂ ಕೇಳದೆ ಧರಣಿ ಕುಳಿತು ಘೋಷಣೆ ಕೂಗಿದರು.

ಮಸ್ಕಿ ಕ್ಷೇತ್ರದ ಅಮಿನಘಡ, ಪಾಮನಕಲ್ಲೂರು, ವಟಗಲ್‌ ಮತ್ತು ಅಂಕುಶದೊಡ್ಡಿ ಗ್ರಾಮ ವ್ಯಾಪ್ತಿಯ ಸುಮಾರು 24 ಹಳ್ಳಿಗಳಿಗೆ ಈ ಯೋಜನೆ ಅನುಕೂಲವಾಗಲಿದೆ. ಅಕ್ಕಪಕ್ಕದಲ್ಲಿ ತುಂಗಭದ್ರಾ, ಕೃಷ್ಣ ನದಿಗಳು ಹರಿಯುತ್ತಿದ್ದರೂ ನೀರಾವರಿ ಸೌಲಭ್ಯದಿಂದ ವಂಚಿತವಾಗಿದ್ದೇವೆ. ಸತತ ಬರಕ್ಕೆ ತುತ್ತಾಗಿ ಈ ಭಾಗದ ರೈತರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂಥ ವೇಳೆ ವಟಗಲ್‌ ಬಸವೇಶ್ವರ ಏತ ನೀರಾವರಿ ಯೋಜನೆ ರೈತರಿಗೆ ಅನುಕೂಲವಾಗಲಿದ್ದು, ಯಾವುದೇ ಕಾರಣಕ್ಕೂ ಯೋಜನೆ ಜಾರಿ ಕೆಬಿಜೆಎನ್‌ಎಲ್‌ ಕರೆದ ಟೆಂಡರ್‌ ಪ್ರಕ್ರಿಯೆ ಕೈ ಬಿಡದೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ನೀರಿನ ಕೊರತೆಯಿಂದ 5ಎ ನಾಲೆ ಯೋಜನೆ ಅನುಷ್ಠಾನ ಕಷ್ಟವಾಗಲಿದೆ. ನದಿ ಜೋಡಣೆಯಿಂದ ಲಭ್ಯವಾಗಬಹುದಾಗ ನೀರಿನಲ್ಲಿ ಯೋಜನೆ ಪ್ರಸ್ತಾಪಿಸಬಹುದು ಎಂದು ನೀರಾವರಿ ಇಲಾಖೆ ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ. ನದಿ ಜೋಡಣೆ ಪ್ರಕ್ರಿಯೆಗೆ ಕಾಲಮಿತಿ ನಿಗದಿಯಾಗಿಲ್ಲವಾದ ಕಾರಣ ಅದು ಕೂಡಲೇ ಈಡೇರುವ ಸಾಧ್ಯತೆ ಇಲ್ಲದ ಕಾರಣ ಹನಿ ನೀರಾವರಿ ಬದಲು ಹರಿ ನೀರಾವರಿ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆಗ್ರಹಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಮೇಲ್ಭಾಗದ ರೈತರು ಅಕ್ರಮವಾಗಿ ನೀರು ಬಳಸಿಕೊಂಡರೆ ಕೆಳಭಾಗದ ರೈತರು ಶಾಶ್ವತ ನೀರಾವರಿಯಿಂದ ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಎಲ್ಲ ಗ್ರಾಮಗಳಿಂದ 500ಕ್ಕೂ ರೈತರು ಬೆಂಗಳೂರಿಗೆ ತೆರಳಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ನೀರಾವರಿ ಸೌಲಭ್ಯಕ್ಕಾಗಿ ಆಗ್ರಹಿಸಲಾಗಿದೆ. ಸರ್ಕಾರ ನಂದವಾಡಗಿ ಎರಡನೇ ಹಂತದಲ್ಲಿ ಲಭ್ಯವಿರುವ 2.25 ಟಿಎಂಸಿ ಅಡಿ ನೀರು ಬಳಸಿಕೊಂಡು ಹನಿ ನೀರಾವರಿ ಬದಲಿಗೆ ಹನಿ ನೀರಾವರಿ ಸೌಲಭ್ಯದ ಕುರಿತು ಆಲೋಚಿಸಿ ನಮ್ಮ ರೈತರಿಗೆ ಸ್ಪಂದಿಸಿ ವಟಗಲ್‌ ಬಸವೇಶ್ವರ ಏತ ನೀರಾವರಿ ಯೋಜನೆ ಸರ್ವೇ ಕಾರ್ಯಕ್ಕೆ ಟೆಂಡರ್‌
ಕರೆದಿದ್ದು, ಈ ಪ್ರಕ್ರಿಯೆಯನ್ನು ಬೇಗ ಮುಗಿಸಿ ರೈತರ ಜಮೀನಿಗೆ ನೀರೊದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿ ಸಂಚಾಲಕ ಚಂದ್ರಶೇಖರ ಜಾಗಿರದಾರ್‌, ಶಿವಕುಮಾರ ವಟಗಲ್‌, ಮಹಾದೇವಪ್ಪ, ಚಂದ್ರಶೇಖರ ಸೇರಿದಂತೆ ಅನೇಕ ಗ್ರಾಮಗಳ ರೈತರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.