ಬಸವಾಭಿಮಾನಿಗಳಿಂದ ವೈದಿಕ ಸಂಸ್ಕೃತಿ ಮುಂದುವರಿಕೆ: ದರ್ಗಾ


Team Udayavani, Aug 21, 2017, 2:51 PM IST

ray 3.jpg

ಸಿಂಧನೂರು: ಯಾವ ವೈದಿಕ ಸಂಸ್ಕೃತಿಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನು ಹುಟ್ಟು ಹಾಕಿದನೋ ಆಧರ್ಮಕ್ಕೆ ಅಪಚಾರವಾಗುವಂತೆ ಇಂದು ಲಿಂಗಾಯತರು ನಡೆದುಕೊಳ್ಳುತ್ತಿರುವುದು ದುರಂತವೇ ಸರಿ ಎಂದು ಖ್ಯಾತ
ಬಸವ ಚಿಂತಕ ರಂಜಾನ್‌ ದರ್ಗಾ ಕಳವಳ ವ್ಯಕ್ತಪಡಿಸಿದರು. ನಗರದ ಸತ್ಯಗಾರ್ಡನ್‌ನಲ್ಲಿ ಬಸವಕೇಂದ್ರದ ವಿವಿಧ
ಘಟಕಗಳ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಶ್ರಾವಣ ಮಾಸದ ವಚನ ಶ್ರವಣ ಸಮಾರೋಪ ಸಮಾರಂಭದಲ್ಲಿ
ಅವರು ಮಾತನಾಡಿದರು. ಸ್ಥಾವರಕ್ಕೆ ಅಳಿವುಂಟು ಜಂಗಮಕ್ಕಿಲ್ಲವೆಂದು ಬಸವಣ್ಣ ಹೇಳಿದ್ದನ್ನು ಮರೆತಿರುವ
ಅನೇಕ ಮಠಾಧಿಧೀಶರು ಕೋಟ್ಯಂತರ ರೂ. ಖರ್ಚು ಮಾಡಿ ಬಸವಣ್ಣನ ಮೂರ್ತಿಗಳನ್ನು ಸ್ಥಾಪನೆ ಮಾಡುತ್ತಿದ್ದಾರೆ.
ಅದರ ಬದಲಾಗಿ ಸಮಾಜದಲ್ಲಿ ಶೋಷಣೆಗೆ ಒಳಗಾದ ಎಲ್ಲ ಧರ್ಮಿಯರಿಗೆ ಆರ್ಥಿಕ ಸಹಾಯ ಮಾಡಿದರೆ ಆ
ಧರ್ಮಿಯರು ಉದ್ಧಾರವಾಗುತ್ತಿದ್ದರು ಎಂದು ಅವರು ಅಭಿಪ್ರಾಯಪಟ್ಟರು. ಬಸವಣ್ಣ 12ನೇ ಶತಮಾನದಲ್ಲಿ ತುಳಿತಕ್ಕೊಳಗಾದವರ, ಶೋಷಿತರ, ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಿ ಕಾರ್ಯ ನಿರ್ವಹಿಸಿದ. 770 ಅಮರಗಣಂಗಳ ಪೈಕಿ 70 ಮಹಿಳೆಯರು ಶರಣೆಯರಾಗಿ ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಮಹತ್ವದ ವಚನಗಳನ್ನು ರಚಿಸಿ ಸಮ ಸಮಾಜದ ಪರಿಕಲ್ಪನೆಗೆ ಮುಂದಾದರು ಎಂದು ದರ್ಗಾ ಬಣ್ಣಿಸಿದರು. “ಸ್ವಾಮಿ ನೀನು ಶಾಶ್ವತ ನಾನು’ ಎಂಬ ವಚನದ ಮೂಲಕ ಏಕದೇವೋಪಾಸನೆಯನ್ನು ನಿರ್ಮಿಸಿದ ಖ್ಯಾತಿ ಬಸವಣ್ಣನಿಗೆ
ಸಲ್ಲುತ್ತದೆ. ಇಸ್ಲಾಂ, ಯಹೂದಿ, ಸಿಖ್‌, ಕ್ರೈಸ್ತ್ ಧರ್ಮಗಳು ಸಹ ಏಕದೇವೋಪಾಸನೆಯನ್ನೆ ಮುಂದುವರಿಸಿವೆ. ಆದರೆ
ವೈದಿಕ ಪರಂಪರೆಯಲ್ಲಿ 33 ಕೋಟಿ ದೇವತೆಗಳನ್ನು ಹುಟ್ಟು ಹಾಕಿ ಮನು ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಅದರ ಫಲವಾಗಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ. ಶೂದ್ರ ಎಂಬ ವರ್ಣಾಧಾರಿತ ಪಂಗಡಗಳನ್ನು ಹುಟ್ಟುಹಾಕುವ ಮೂಲಕ ಸಮಾಜದಲ್ಲಿ ಅಸಮಾನತೆ ಬೆಳೆಸಲಾಯಿತು ಎಂದು ವಿಶ್ಲೇಷಿಸಿದರು. ಬಸವಣ್ಣ ವೈದಿಕ ಪರಂಪರೆಯನ್ನು ವಿರೋಧಿಸಿ ಕಾಯಕ ಜೀವಿಗಳನ್ನು ಒಂದುಗೂಡಿಸಿ ಜಾತಿ ಬೇಧವನ್ನು ತೊಡೆದುಹಾಕಿ ಬಸವ ಧರ್ಮವನ್ನು ಪ್ರಚಾರಕ್ಕೆ ತಂದರು. ಬಸವಾಭಿಮಾನಿಗಳು ವಿಜಯನಗರ ಸಾಮ್ರಾಜ್ಯದ ಕಾಲಘಟ್ಟದಲ್ಲಿ ಬ್ರಾಹ್ಮಣ ಸಂಸ್ಕೃತಿಯನ್ನು ಮುಂದುವರಿಸಲು ಪ್ರಯತ್ನಿಸಿ ಅನೇಕರು ಲಿಂಗಿ ಬ್ರಾಹ್ಮಣರಾದರು. ಮೇಲ್ನೊಟಕ್ಕೆ
ಲಿಂಗವಂತರಾದರು. ಒಳಗೆ ಬಸವಣ್ಣನ ಬದಲಾಗಿ ಮನುವಿನ ಅಭಿಮಾನಿಗಳಾದರು. ಇದರ ಫಲವಾಗಿ
ಇಂದು ವೀರಶೈವ-ಲಿಂಗಾಯತ ಎಂದು ಬೀದಿಕಾಳಗ ನಡೆಸುವ ಪರಿಸ್ಥಿತಿ ಉದ್ಭವಿಸಿದೆ ಎಂದು ಮಾರ್ಮಿಕವಾಗಿ
ಹೇಳಿದರು. ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ಮಕ್ಕಳ ತಜ್ಞ ಡಾ| ಕೆ.ಶಿವರಾಜ ಮಾತನಾಡಿದರು. ಕೃಷಿ ಬೆಲೆ ಆಯೋಗದ ಸದಸ್ಯ ಹನುಮನಗೌಡ ಬೆಳಗುರ್ಕಿ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಜೆಡಿಎಸ್‌ ತಾಲೂಕು ಘಟಕ ಅಧ್ಯಕ್ಷ ಎಂ.ಲಿಂಗಪ್ಪ, ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ಮುಖಂಡರಾದ ಕರೇಗೌಡ ಕುರಕುಂದಿ, ನಾಗಭೂಷಣ ನವಲಿ, ಎಚ್‌.ಎನ್‌.ಬಡಿಗೇರ, ಸುಮಂಗಲಾ ಚಿಂಚರಕಿ ಇತರರು ಉಪಸ್ಥಿತರಿದ್ದರು. ಬಸವ ಕೇಂದ್ರದ ಗೌರವಾಧ್ಯಕ್ಷ ವೀರಭದ್ರಪ್ಪ ಕುರಕುಂದಿ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ಪಗಡದಿನ್ನಿ ನಿರೂಪಿಸಿದರು. ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಬಸವಾಭಿಮಾನಿಗಳು ಆಗಮಿಸಿದ್ದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.