ತಗ್ಗದ ಜನರ ಸಂಚಾರ; ವಾಹನ ದಟ್ಟಣೆ
Team Udayavani, May 29, 2021, 9:00 PM IST
ರಾಯಚೂರು: ಜನತಾ ಕಫೂÂì ಕಟ್ಟುನಿಟ್ಟಾಗಿ ಜಾರಿ ಮಾಡಿದ್ದಾಗ್ಯೂ ನಗರದಲ್ಲಿ ದಿನೇ-ದಿನೇ ವಾಹನ ದಟ್ಟಣೆ ಮಾತ್ರ ಹೆಚ್ಚುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಎಸ್ಪಿ, ಹೆಚ್ಚುವರಿ ಎಸ್ಪಿಯೇ ಲಾಠಿ ಹಿಡಿದು ಸಂಚಾರ ನಿಯಂತ್ರಣದಲ್ಲಿ ತೊಡಗಿದ್ದು ಕಂಡು ಬಂತು.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ತುರ್ತು ಕೆಲಸಗಳಿದ್ದರೆ ಮಾತ್ರ ಓಡಾಡುವಂತೆ ತಿಳಿಸಲಾಗಿದೆ. ಆದರೆ, ನಿತ್ಯ ನಾನಾ ಕಾರಣ ಹೇಳಿ ಓಡಾಡುವವರ ಸಂಖ್ಯೆ ಹೆಚ್ಚಾಗಿರುವುದು ಪೊಲೀಸರ ತಾಳ್ಮೆ ಪರೀಕ್ಷೆ ಮಾಡುವಂತಾಗಿದೆ.
ಇದೇ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಪ್ರಕಾಶ ನಿಕ್ಕಂ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಶ್ರೀಹರಿಬಾಬು ನೇತೃತ್ವದಲ್ಲಿ ಸಂಚಾರ ನಿಯಂತ್ರಣಕ್ಕೆ ಒತ್ತು ನೀಡಲಾಗಿತ್ತು. ಸಣ್ಣ ಪುಟ್ಟ ಕಾರಣ ಹೇಳುವವರನ್ನು ಮುಲಾಜಿಲ್ಲದೇ ಹಿಂದಕ್ಕೆ ಕಳುಹಿಸಿದರೆ, ಅನೇಕರ ವಾಹನ ವಶಕ್ಕೆ ಪಡೆದು ದಂಡ ಹಾಕಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್