ಪಶು ವೈದ್ಯರು ಶೀಘ್ರ ಮರಳಿ ಮಾತೃ ಇಲಾಖೆಗೆ
Team Udayavani, Jun 28, 2018, 7:05 AM IST
ರಾಯಚೂರು: ಪಶು ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆಗೊಂಡ ಎಲ್ಲ ವೈದ್ಯರನ್ನು ಮರಳಿ ಮಾತೃ ಇಲಾಖೆಗೆ ಕರೆತರಲಾಗುವುದು. ಅದರ ಜತೆಗೆ 500 ಪಶು ವೈದ್ಯರ ನೇಮಕಕ್ಕೆ ಶೀಘ್ರವೇ ಅಧಿಸೂಚನೆ
ಹೊರಡಿಸಲಾಗುವುದು ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ
ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾತೃ ಇಲಾಖೆಗೆ ಬರಲು ಒಪ್ಪದ ವೈದ್ಯರ ವಿರುದಟಛಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಹೈ-ಕ ಭಾಗದಲ್ಲಿ 120 ಹುದ್ದೆಗಳಲ್ಲಿ 60 ವೈದ್ಯರು ಮಾತ್ರ ಇದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಯಲ್ಲಿಯೇ ಹೆಚ್ಚು ಹುದ್ದೆಗಳ ಕೊರತೆ ಇದೆ ಎಂದರು.
ರೈತರ ಸಾಲಮನ್ನಾದಂತಹ ಮಹತ್ತರ ಸಮಸ್ಯೆ ಸರ್ಕಾರದೆದುರು ಇರುವ ಕಾರಣ ಹೊಸ ಉತ್ಸವಗಳ ಆಚರಣೆಗೆ ಮುಂದಾಗುವ ಸಾಧ್ಯತೆ ಕಡಿಮೆ. ಅದರ ಬದಲು ಮುಂಗಾರು ಸಾಂಸ್ಕೃತಿಕ ಹಬ್ಬವನ್ನೇ ಸರ್ಕಾರದಿಂದ ಆಚರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈಗಿರುವ ಗೋಶಾಲೆಗಳನ್ನೇ ಬಲಪಡಿಸುವ ಮೂಲಕ ನಿರುಪಯುಕ್ತ ಜಾನುವಾರುಗಳನ್ನು ಅಲ್ಲಿ ಬಿಡುವ ವ್ಯವಸ್ಥೆ ಮಾಡಲಾಗುವುದು.
– ವೆಂಕಟರಾವ್ ನಾಡಗೌಡ, ಪಶು ಸಂಗೋಪನಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ