ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ


Team Udayavani, Mar 22, 2021, 7:16 PM IST

nbcncgbn

ಸಿಂಧನೂರು : ಮಸ್ಕಿಯಲ್ಲಿ ಉಪಚುನಾವಣೆ ಪ್ರಚಾರಕ್ಕೆ ಹೋದಾಗ 30 ಸಾವಿರ ಜನ ಭವ್ಯವಾಗಿ ಸ್ವಾಗತಿಸಿದ್ದು, ಪ್ರತಾಪ್‌ಗೌಡರು 20 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಅವರು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಸ್ಕಿ ಕ್ಷೇತ್ರಕ್ಕೆ ಮತ್ತೂಮ್ಮೆ ಬಂದು ಪ್ರಚಾರ ನಡೆಸುವೆ. ಬಸವ ಕಲ್ಯಾಣದಲ್ಲಿ ಈಗಾಗಲೇ ನಾವು ಗೆದ್ದಾಗಿದೆ. ಬೆಳಗಾವಿಯಲ್ಲೂ ನಾವೇ ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ದೆಹಲಿಗೆ ಕಳಿಸಲಾಗಿದ್ದು, ಶೀಘ್ರವೇ ಹೆಸರು ಪ್ರಕಟಿಸಲಾಗುವುದು ಎಂದರು.

ಸ್ಪರ್ಧೆಯಿಲ್ಲ, ಮೈಸೂರಲ್ಲಿ ಮನೆ: ಬಸವಕಲ್ಯಾಣದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪರ್ಧೆ ಮಾಡುತ್ತಾರೆನ್ನುವುದರಲ್ಲಿ ಯಾವುದೇ ಹುರುಳಿಲ್ಲ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಮೈಸೂರಿನಲ್ಲಿ ಮನೆ ಮಾಡಿ, ವಿಜಯೇಂದ್ರ ಅವರು ಅಲ್ಲಿ ಬಿಡಾರ ಹೂಡಲಿದ್ದಾರೆ. ಅಲ್ಲಿದ್ದುಕೊಂಡು ಐದಾರು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಮಾಡಲಿದ್ದಾರೆ.

ಸುತ್ತಮುತ್ತಲಿನ ಜಿಲ್ಲೆಗಳಿಗೂ ಇದರಿಂದ ಅನುಕೂಲವಾಗಲಿದೆ. ಅವರಿಗೆ ಏನು ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷವೇ ನಿರ್ಧರಿಸುತ್ತದೆ. ವರುಣಾ ಕ್ಷೇತ್ರಕ್ಕೆ ಮುಂದಿನ ಬಾರಿ ಯಾರು ಸ್ಪರ್ಧಿಸಲಿದ್ದಾರೆಂಬುದು ಕೂಡ ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

 ನೀರಾವರಿಗೆ ಆದ್ಯತೆ :  5ಎ ಕಾಲುವೆಗೆ ಸಂಬಂಧಿಸಿದ ಬೇಡಿಕೆಯನ್ನು ಗಮನಿಸಿದ್ದು, ಅಲ್ಲಿ ಅನುಕೂಲವಾಗುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಅವಶ್ಯವಿರುವ ಯೋಜನೆಗಳನ್ನು ಮಾಡಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್‌ 10ರ ತನಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ತೆರಿಗೆ ಹೊರೆಯಿಲ್ಲದ ಬಜೆಟ್‌: ಕೋವಿಡ್‌ ನಂತಹ ಕ್ಲಿಷ್ಟ ಸಮಯದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತೆರಿಗೆ ಹೊರೆ ಇಲ್ಲದ ಐತಿಹಾಸಿಕ ಬಜೆಟ್‌ನ್ನು ಮಂಡಿಸಲಾಗಿದೆ. ಅಭಿವೃದ್ಧಿಗೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಬದ್ಧವಿದ್ದು, ಯಾವುದೇ ಹೆಚ್ಚಿನ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕಿಲ್ಲ.

ನಮ್ಮ ಸರಕಾರದ ಕೆಲಸಗಳನ್ನು ಜನ ಮೆಚ್ಚಿಕೊಂಡಿದ್ದು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಪಕ್ಷ 130 ಸ್ಥಾನಗಳಲ್ಲಿ ಗೆಲುವು ಸಾಧಿ ಸಲಿದೆ ಎಂದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್‌, ಸಂಸದ ಸಂಗಣ್ಣ ಕರಡಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಜಿಪಂ ಸದಸ್ಯರಾದ ಎನ್‌.ಶಿವನಗೌಡ ಗೋರೆಬಾಳ, ಅಮರೇಗೌಡ ವಿರೂಪಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ್‌ ಇದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.