ಅಕ್ರಮ ಮದ್ಯ ನಿಷೇಧಕ್ಕಾಗಿ ಒನಕೆ ಚಳವಳಿ
Team Udayavani, Feb 21, 2021, 5:41 PM IST
ರಾಯಚೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿ ಸುವಂತೆ ಆಗ್ರಹಿಸಿ ಕಳೆದ 10 ದಿನಗಳಿಂದ ನಡೆದಿರುವ ಹೋರಾಟ ಶನಿವಾರ ತೀವ್ರಗೊಂಡಿದ್ದು, ಮಹಿಳೆಯರು ಒನಕೆ ಚಳವಳಿ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.
ನಗರದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ಹೋರಾಟ ನಡೆಸಲಾಗುತ್ತಿದೆ. ಅದರ ಭಾಗವಾಗಿ ನೂರಾರು ಮಹಿಳೆಯರು ಒನಕೆಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳ ಮೂಲಕ ಅಬಕಾರಿ ಇಲಾಖೆ ಕಚೇರಿವರೆಗೂ ರ್ಯಾಲಿ ನಡೆಸಿದರು.
ಜಿಲ್ಲೆಯ 69 ಗ್ರಾಪಂಗಳಲ್ಲಿ 178ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತ, ಅಬಕಾರಿ ಇಲಾಖೆಗೆ ಅಂಕಿ ಸಂಖ್ಯೆ ಸಮೇತ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಅಕ್ರಮಕ್ಕೆ ಸಾಥ್ ನೀಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಮಾರಾಟಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಪ್ರತಿ ಹಳ್ಳಿಯಲ್ಲಿ ಐವರು ಮಹಿಳೆಯರ ಕಾವಲು ಸಮಿತಿ ರಚಿಸಿ ಸಮಿತಿಗೆ ಅರೆ ನ್ಯಾಯಾಂಗ ವ್ಯವಸ್ಥೆ ಕಲ್ಪಿಸಬೇಕು, ಆಯಾ ಹಳ್ಳಿಗಳ ಸರಹದ್ದಿನಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ನೀಡಬಾರದು. ಈ ವಿಚಾರವಾಗಿ ತಕ್ಷಣ ಮುಖ್ಯಮಂತ್ರಿ ಸಂಘಟನೆಯ ನಿಯೋಗದ ಜತೆಗೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿದರು.
ಮುಖಂಡರಾದ ವಿದ್ಯಾ ಪಾಟೀಲ್, ಅಭಯ್, ಮೋಕ್ಷಮ್ಮ, ವಿರುಪಮ್ಮ, ಗುರುರಾಜ, ಮಾರೆಪ್ಪ, ಶರಣಮ್ಮ, ಬಸವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ