ಸಿದ್ದು ಬಗ್ಗೆ ವಿಶ್ವನಾಥ್ಗೆ ಅಸೂಯೆ: ಡಿಸೋಜಾ
Team Udayavani, Jul 5, 2019, 5:43 AM IST
ರಾಯಚೂರು: ಸಿದ್ದರಾಮಯ್ಯ ಅವರನ್ನು ಕಂಡರೆ ಎಚ್.ವಿಶ್ವನಾಥಗೆ ಅಸೂಯೆ ಇದೆ. ಅದೇ ಕಾರಣಕ್ಕೆ ಮೊದಲಿನಿಂದಲೂ ಅವರ ಬಗ್ಗೆ ಟೀಕೆ ಮಾಡುತ್ತಲೇ ಇದ್ದಾರೆ ಎಂದು ಸಿಎಂ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯರಿಂದ ಅಸ್ಥಿರವಾಗಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬರಲು ಸಿದ್ದರಾಮಯ್ಯನವರೇ ಕಾರಣ, ಅವರಿಂದಾಗಿಯೇ ಸರ್ಕಾರ ಸ್ಥಿರವಾಗಿ ಮುನ್ನಡೆ ಯುತ್ತಿದೆ. ಸಮನ್ವಯ ಸಮಿತಿಯಲ್ಲಿ ಜೆಡಿಎಸ್ನವರೂ ಇದ್ದಾರೆ ಎಂದರು. ಶಾಸಕ ಆನಂದಸಿಂಗ್ ಅವರ ರಾಜೀನಾಮೆಗೆ ವೈಯಕ್ತಿಕ ಕಾರಣವಿದೆ. ಅವರು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಇದರಿಂದ ರಾಜೀನಾಮೆ ಸ್ವೀಕೃತವಾಗುವುದಿಲ್ಲ. ಅವರ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಲಾಗಿದೆ. ರಮೇಶ ಜಾರಕಿಹೊಳಿ ಮೊದಲಿನಿಂದಲೂ ದೂರವಿದ್ದಾರೆ. ಈಗ ಹೊಸ ನಾಟಕ ಆರಂಭಿಸಿದ್ದಾರೆ ಎಂದರು. ಜಿ.ಟಿ.ದೇವೇಗೌಡರು ಬಿಜೆಪಿ ಪರ ಮಾತನಾಡುತ್ತಾರೆ ಎನ್ನುವುದು ಅವರ ಅಭಿಪ್ರಾಯ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್