ನೀರು-ಮೇವಿಗಾಗಿ ಅಲೆದಾಟ

• ನೀರು-ಮೇವು ಸಿಗುವ ಕಡೆ ಕುರಿಗಾಹಿಗಳ ಪಯಣ • ಬತ್ತಿದ ಬಾವಿ-ಅಂತರ್ಜಲ ಕುಸಿತ

Team Udayavani, May 28, 2019, 11:53 AM IST

rc-tdy-1..

ಮುದಗಲ್ಲ: ಮೇವು-ನೀರು ಅರಸಿ ಹೊರಟ ಜಾನುವಾರುಗಳು

ಮುದಗಲ್ಲ: ನೀರು ಪೂರೈಕೆಯಲ್ಲಿ ಒಂದೆರಡು ದಿನ ವ್ಯತ್ಯಾಸವಾದರೆ ಜನತೆ ಖಾಲಿ ಕೊಡಗಳನ್ನು ಹಿಡಿದು ಸರಕಾರಿ ಕಚೇರಿಗಳ ಎದುರಿಗೆ ಪ್ರತಿಭಟನೆ, ಧರಣಿ, ಗಲಾಟೆ ಮಾಡುತ್ತಾರೆ. ಆದರೆ ಬೇಸಿಗೆ ಬಿಸಿಲಲ್ಲಿ ನೀರು, ಮೇವಿಗಾಗಿ ಜಾನುವಾರುಗಳು ಅಲೆದಾಡುತ್ತಿವೆ.

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಜಾನುವಾರುಗಳು ಮೇವು, ನೀರಿಗಾಗಿ ಪರದಾಡುತ್ತಿವೆ. ಎಲ್ಲಿ ನೋಡಿದರೂ ಬರೀ ಬರಡು ನೆಲ ಕಾಣಿಸುತ್ತಿದೆ. ಇಲ್ಲಿನ ಕುರಿಗಾರರು ನೀರು, ಮೇವು ಅರಸುತ್ತಾ ಕಿ.ಮೀ.ಗಟ್ಟಲೇ ದೂರ ಅಲೆದಾಡುವಂತಾಗಿದೆ. ಬಿಸಿಲಿನ ತಾಪಕ್ಕೆ ಭೂಮಿ ಕಾದು ಕಾವಲಿಯಂತಾಗಿದೆ. ಎತ್ತ ನೋಡಿದರು ಬರಡು ಭೂಮಿ ಎದ್ದು ಕಾಣುತ್ತಿದೆ. ಕುರಿಗಳಿಗೆ, ದನ-ಕರುಗಳಿಗೆ ತೊಟ್ಟು ನೀರು ಕುಡಿಸಲು ಕುರಿಗಾಹಿಗಳು ನಿತ್ಯ ಹರ ಸಾಹಸಪಡಬೇಕಾಗಿದೆ. ಕುರಿಗಾರರು ತಮ್ಮ ಹಿಂಡುಗಳೊಂದಿಗೆ ನೀರಾವರಿ ಪ್ರದೇಶಗಳಾದ ಸಿಂಧನೂರ, ಮಾನ್ವಿ, ಸುರಪುರ ಕಡೆ ಗುಳೆ ಹೋಗಿ ಅಲ್ಲಿ ಸಿಗುವ ನೀರು, ಮರಗಿಡಗಳ ತಪ್ಪಲು, ಹಸಿರು ಮೇವು ತಿನ್ನಿಸಿ ಕುರಿಗಳ ಜೀವ ಉಳಿಸಿಕೊಳ್ಳುತ್ತಿದ್ದಾರೆ. ಇನ್ನು ಮನೆಯಲ್ಲಿ ಅನಾನುಕೂಲ ಇರುವ ಕೆಲ ಕುರಿಗಾಹಿಗಳು ಇಲ್ಲಿಯೇ ಖಾಸಗಿ ವ್ಯಕ್ತಿಗಳ ತೋಟ, ಬಾವಿಗಳ ಹತ್ತಿರ ತಮ್ಮ ಕುರಿಗಳಿಗೆ, ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮೊದಲಿಗೆ ಮೂರು-ನಾಲ್ಕು ಕಿ.ಮೀ.ದೂರದವರೆಗೆ ಹೋಗಿ ಮೇಯಿಸಿಕೊಂಡು ಸಂಜೆ ಮನೆಗೆ ಮರಳುತ್ತಿದ್ದವು. ಆದರೆ ಈಗ ಬಿಸಿಲಿನ ಧಗೆಗೆ ಗಿಡಮರಗಳು ಒಣಗುತ್ತಿವೆ. ಎಲ್ಲಿಯೂ ಹಲ್ಲು ಸಿಗದೇ ಬರಿ ಕೆಂಪು, ಕಪ್ಪು ನೆಲ ಕಾಣಿಸುತ್ತಿದೆ. 8-10ಕಿ.ಮೀ. ದೂರ ಹೋದರೂ ಹಸಿರು ಹುಲ್ಲು-ನೀರು ಸಿಗುತ್ತಿಲ್ಲ. ಕುರಿಗಳನ್ನು ಮೇಯಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಕುರಿಗಾಹಿಗಳಾದ ಮೀಟಪ್ಪ, ಗನಕಪ್ಪ, ಬಾಳಪ್ಪ ಅಳಲು ತೋಡಿಕೊಂಡರು.

ಹೊಲ, ಗುಡ್ಡಗಾಡು ಪ್ರದೇಶದಲ್ಲಿನ ಒಣ ಮೇವು ತಿಂದು, ಕಲುಷಿತ ನೀರು ಕುಡಿದು ಕುರಿ, ಆಡುಗಳು ಹಾಗೂ ದನ-ಕರಗಳು ಅನಾರೋಗ್ಯಕ್ಕೆ ತುತ್ತಾಗುತ್ತಿವೆ. ತಾಪಮಾನ ಏರಿಕೆಯಿಂದ ನಾಲಿಗೆ ಬೇನೆ, ಕಾಲು ಬೇನೆ ಅತಿಯಾದ ಜ್ವರ, ಭೇದಿ ಕಾಣಿಸಿಕೊಂಡು ಜಾನುವಾರುಗಳು ಸಾಯುತ್ತಿವೆ. ಹಡಗಲಿ ತಾಂಡಾದ ಲಿಂಬೆಪ್ಪ ರಾಠೊಡ ಎಂಬುವರ 40 ಸಾವಿರ ಮೌಲ್ಯದ ಎತ್ತು ಮೃತಪಟ್ಟಿದೆ. ವೇಣ್ಯಪ್ಪನ ತಾಂಡಾದ ಹನುಮಂತಪ್ಪ ಗುಡದಪ್ಪ ಎಂಬುವರ 2 ಎತ್ತುಗಳು ಅನಾರೋಗ್ಯದಿಂದ ಬಳಲುತ್ತಿವೆ. ಗೊಲ್ಲರಹಟ್ಟಿಯಲ್ಲಿ ಹನುಮಂತಪ್ಪ ಎಂಬವರಿಗೆ ಸೇರಿದ 4 ಕುರಿಗಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿದರೂ ಪಶು ಇಲಾಖೆ ಅಧಿಕಾರಿಗಳು ಕುರಿಗಾಹಿಗಳ ಕಷ್ಟಕ್ಕೆ ದಾವಿಸಿಲ್ಲ ಎಂದು ಗ್ರಾಪಂ ಸದಸ್ಯ ಗ್ಯಾನಪ್ಪ ರಾಠೊಡ ದೂರಿದ್ದಾರೆ. ಮೇವು-ನೀರಿನ ಕೊರತೆಯಿಂದಾಗಿ ಜಾನುವಾರು ಸಾಕಲು ಸಾಧ್ಯವಾಗದೇ ಅಗ್ಗದ ದರದಲ್ಲಿ ಮಾರುವಂತಾಗಿದೆ ಎಂದು ಜಾನುವಾರು ಸಾಕಾಣಿಕೆದಾರರು ಅಳಲು ತೋಡಿಕೊಂಡಿದ್ದಾರೆ.

ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲಿಯೇ 15 ದಿನ ಹಿಂದೆ ಕಾಟಾಚಾರಕ್ಕೆ ಮೇವು ಬ್ಯಾಂಕ ತೆರೆದಿರುವುದನ್ನು ಬಿಟ್ಟರೆ ಪಾಲನೆ ಪೋಷಣೆಗೆ ಬೇರೆ ಯೋಜನೆಗಳನ್ನು ಜಾರಿಗೆ ತರದಿರುವುದು ಇಲಾಖೆಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

•ದೇವಪ್ಪ ರಾಠೊಡ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.