ಪ್ರಧಾನಿ ಮೋದಿ ಜತೆ ಚಂದ್ರಯಾನ-2 ವೀಕ್ಷಣೆಗೆ ರಾಯಚೂರಿನ ವಿದ್ಯಾರ್ಥಿನಿ ಆಯ್ಕೆ
Team Udayavani, Sep 2, 2019, 3:58 PM IST
ರಾಯಚೂರು: ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ಮೋದಿ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಸೆ.7 ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾ ಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ವೈಷ್ಣವಿ ಆಯ್ಕೆಯಾಗಿದ್ದಾಳೆ.
ಆನ್ ಲೈನ್ ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ, ವೈಷ್ಣವಿ 5 ನಿಮಿಷದಲ್ಲಿ ಉತ್ತರಿಸಿದ್ದಳು. ಪ್ರತೀ ರಾಜ್ಯದಿಂದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳಲ್ಲಿ ಸಿಂಧನೂರಿನ ವೈಷ್ಣವಿ ಕೂಡ ಒಬ್ಬರು ಎನ್ನುವುದು ವಿಶೇಷ.