ಏಕಾಏಕಿ ಉಪ ಕಾಲುವೆಗಳಿಗೆ ನೀರು; ರಸ್ತೆ-ಮನೆಗಳು ಜಲಾವೃತ
Team Udayavani, Jul 30, 2018, 12:34 PM IST
ಸಿರವಾರ: ತುಂಗಭದ್ರಾ ಎಡದಂಡೆ ನಾಲೆಯ 91ನೇ ಉಪ ಕಾಲುವೆಗಳಿಗೆ ರವಿವಾರ ಏಕಾಏಕಿ ನೀರು ಬಿಟ್ಟಿದ್ದರಿಂದ ಮತ್ತು ಕಾಲುವೆಯಲ್ಲಿ ಕಸ ಮತ್ತು ಹೂಳು ತುಂಬಿದ್ದರಿಂದ ಪಟ್ಟಣದ ಮುಖ್ಯ ರಸ್ತೆ ಪಕ್ಕದ ಮನೆಗಳಿಗೆ ನೀರು ನುಗ್ಗಿ, ರಸ್ತೆಗಳು ಜಲಾವೃತವಾಗಿ ನಿವಾಸಿಗಳು ಪರದಾಡುವಂತಾಯಿತು.
91ನೇ ವಿತರಣಾ ಉಪಕಾಲುವೆಗಳ ಪಕ್ಕದಲ್ಲಿರುವ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳ ಆದೇಶದ ಮೇರೆಗೆ ವಿತರಣಾ ಕಾಲುವೆಗಳಿಗೆ ರವಿವಾರ ನೀರು ಬಿಡಲಾಗಿತ್ತು. ಪಟ್ಟಣದಲ್ಲಿ ಹಾದು ಹೋಗುವ ಉಪ ಕಾಲುವೆಯಲ್ಲಿ ಹೂಳು ತುಂಬಿದ್ದರಿಂದ ಮತ್ತು ಕಾಲುವೆಗಳಲ್ಲಿ ಬೆಳೆದ ಮುಳ್ಳಿನ ಗಿಡ, ಕಸಕಡ್ಡಿಗಳನ್ನು ತೆರವು ಮಾಡದ ಕಾರಣ ನೀರು ಪಕ್ಕದಲ್ಲಿರುವ ಮನೆಗಳಿಗೆ ನುಗ್ಗಿ ಮುಖ್ಯರಸ್ತೆ ಮತ್ತು ಮನೆಗಳು ಸಂಪೂರ್ಣ ಜಲಾವೃತಗೊಂಡು ಎರಡು ಗಂಟೆಗೂ ಅಧಿಕ ಕಾಲ ಜನರು ಪರದಾಡುವಂತಾಯಿತು.
ನಂತರ ಸಾರ್ವಜನಿಕರೇ ಮುಂದೆ ನಿಂತು ನಾಲೆಯ ಪೈಪ್ನಲ್ಲಿ ತುಂಬಿದ್ದ ಕಸ ಮತ್ತು ಹೂಳನ್ನು ತೆಗೆದ ನಂತರ ನೀರಿನ ಪ್ರಮಾಣ ಕಡಿಮೆಯಾಯಿತು. ಇಷ್ಟಾದರೂ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ಜನರ ಆಕ್ರೋಶಕ್ಕೆ ಕಾರಣವಾಯಿತು.
ಕಾರ್ಮಿಕರ ಧರಣಿ: ತುಂಗಭದ್ರಾ ಎಡದಂಡೆ ನಾಲೆಯ ಹಂಗಾಮಿ ಕಾರ್ಮಿಕರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಅದಕ್ಕಾಗಿ ಕಾಲುವೆಗಳ ಕಾರ್ಯದಲ್ಲಿ ಯಾವೊಬ್ಬ ಕಾರ್ಮಿಕರಿಲ್ಲದಿರುವುದರಿಂದ ಇಷ್ಟೆಲ್ಲ ಅನಾಹುತಕ್ಕೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು