ಬೇಸಿಗೆ ಮುನ್ನವೇ ನೀರಿನ ಬವಣೆ ಆರಂಭ

ಲಿಂಗಖಾನದೊಡ್ಡಿಯಲ್ಲಿ ನೀರಿಗಾಗಿ ಪರದಾಟ! ­ಕಳೆದ 6 ವರ್ಷದಿಂದ ನೀರಿನದ್ದೇ ಸ‌ಮಸ್ಯೆ

Team Udayavani, Mar 14, 2021, 5:53 PM IST

water problem

ರಾಯಚೂರು: ಬಿಸಿಲ ನಾಡಾದ ಜಿಲ್ಲೆಯಲ್ಲಿ ಬೇಸಿಗೆ ಬಂದರೆ ಮೊದಲು ಶುರವಾಗುವ ಸಮಸ್ಯೆ ನೀರಿನದ್ದು. ಆದರೆ, ಇನ್ನೂ ಬೇಸಿಗೆ ಶುರುವಾಗುವ ಮುನ್ನವೇ ತಾಲೂಕಿನ ಲಿಂಗಖಾನದೊಡ್ಡಿಯಲ್ಲಿ ನೀರಿನ ಬವಣೆ ಶುರುವಾಗಿದ್ದು, ಗ್ರಾಮದ ಮಹಿಳೆಯರು ಪರದಾಡುವಂತಾಗಿದೆ.

ಗ್ರಾಮಸ್ಥರು ಕುಡಿವ ನೀರಿಗಾಗಿ ಕಿ.ಮೀ ದೂರ ಸಾಗಿ ನೀರು ತರುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ವರ್ಷದಿಂದ ಈ ಗ್ರಾಮಸ್ಥರಿಗೆ ಕುಡಿವ ನೀರಿನದ್ದೇ ಸಮಸ್ಯೆ. ಅದರಲ್ಲೂ ಬೇಸಿಗೆ ಬಂದರೆ ಇಲ್ಲಿನ ಜನರಿಗೆ ಆತಂಕ ಇಮ್ಮಡಿಗೊಳ್ಳುತ್ತದೆ. ಅನೇಕ ವರ್ಷಗಳಿಂದ ಗ್ರಾಮದ ಸಮಸ್ಯೆ ಹೇಳಿಕೊಂಡರೂ ಸಂಬಂಧಿ ಸಿದವರು ಮಾತ್ರ ಸ್ಪಂದನೆ ನೀಡುತ್ತಿಲ್ಲ. ಇಂದಿಗೂ ಗ್ರಾಮದಲ್ಲೇ ಇದೇ ಪರಿಸ್ಥಿತಿ ಇದೆ. ಈ ಮುಂಚೆ ಗ್ರಾಮದಲ್ಲಿ ನೀರಿನ ಸೌಲಭ್ಯವಿತ್ತು. ಆದರೆ, ಈಗ ನೀರೇ ಬರುತ್ತಿಲ್ಲ. ಇದರಿಂದ ಬಳಕೆಗೂ ನೀರು ತರಲು ಪರದಾಡುವಂತಾಗಿದೆ.

ಕುಡಿವ ನೀರಿನದ್ದೇ ಸಮಸ್ಯೆಯಾಗಿದೆ. ನಲ್ಲಿಗಳ ಸೌಲಭ್ಯ ಇದ್ದರೂ ಸರಿಯಾಗಿ ನೀರು ಬರುತ್ತಿಲ್ಲ. ಕೆಲವರು ಬೈಕ್‌ ಗಳ ಮೇಲೆ ನಾಲ್ಕು ಕೊಡಗಳನ್ನು ತೆಗೆದುಕೊಂಡು ಬರುತ್ತಾರೆ. ಆದರೆ, ಬೈಕ್‌ ಇಲ್ಲದವರು, ಮನೆಯಲ್ಲಿ ಪುರುಷರಿಲ್ಲದವರಿಗೆ ಮಾತ್ರ ಸಮಸ್ಯೆ ತಪ್ಪದು. ಅದರಲ್ಲೂ ಕೂಲಿ ಕೆಲಸ ಮಾಡಿಕೊಂಡು ಬರುವ ಮಹಿಳೆಯರಿಗೆ ನೀರಿನದ್ದೇ ತಲೆನೋವು. ಈ ಮುಂಚೆ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಈವರೆಗೂ ಸಮಸ್ಯೆಗೆ ಇತಿ ಹಾಡಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯಡಿ ಮನೆ ಮನೆಗೆ ನಲ್ಲಿಗಳ ಸಂಪರ್ಕ ಮಾಡುವ ಯೋಜನೆ ಶುರುವಾಗಿದೆ. ಆದರೆ, ಅದಿನ್ನೂ ಗ್ರಾಮಕ್ಕೆ ಕಾಲಿಟ್ಟಿಲ್ಲ.

ಈ ಹಿಂದೆ ನಲ್ಲಿಗಳ ಸಂಪರ್ಕ ಕಲ್ಪಿಸಿದ್ದು, ನೀರು ಕೂಡ ಬರುತ್ತಿತ್ತು. ಕೆಲ ವರ್ಷಗಳಿಂದ ಅದು ನಿಂತು ಹೋಗಿದೆ. ಬೇಸಿಗೆ ಶುರುವಾದರೆ ಇಲ್ಲಿನ ಮಹಿಳೆಯರಿಗೆ ಹೊಣೆ ಹೆಚ್ಚಾಗಲಿದೆ. ಕಿಮೀಗಟ್ಟಲೇ ಸಾಗಿ ಬೋರ್‌ವೆಲ್‌ಗ‌ಳಿಂದ ನೀರು ತರಬೇಕಿದೆ. ಗ್ರಾಮದಲ್ಲಿ ಎರಡು ಬೋರ್‌ಗಳಿದ್ದು ನೀರು ಬರುತ್ತಿಲ್ಲ. ಇರುವ ಒಂದೇ ಬೋರ್‌ವೆಲ್‌ನಲ್ಲಿ ಸಾಲುಗಟ್ಟಿ ನೀರು ಪಡೆಯಬೇಕು. ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚಿನ ಜನರು ವಾಸಿಸುತ್ತಿದ್ದು, ಕೃಷಿಕರು, ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಕೂಲಿ ಕೆಲಸ ಮಾಡುವುದಲ್ಲದೇ ನೀರಿಗೂ ಪರದಾಡುವುದೇ ನಿತ್ಯ ಕಾಯಕವಾಗಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.