ಈಗಲೂ ಗೆಲ್ಲುತ್ತೇವೆ, ಮುಂದೆಯೂ ಗೆಲ್ಲುತ್ತೇವೆ: ನಳಿನ್ ಕಟೀಲ್ ವಿಶ್ವಾಸ
Team Udayavani, Nov 20, 2020, 10:37 AM IST
ರಾಯಚೂರು: ಬಸಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸುವುದು ಶತಸಿದ್ಧ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಸಿಂಧನೂರು ಸೇರಿದಂತೆ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸಿಂಧನೂರಿನ ನಗರದ ಖಾಸಗಿ ರೆಸಿಡೆನ್ಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂತಕಾಲದ ಬಗ್ಗೆ ನಾವು ಯೋಚಿಸುವುದಿಲ್ಲ. ಭವಿಷದ್ಯದಲ್ಲೂ ಬಿಜೆಪಿಯೇ ಜಯಭೇರಿ ಬಾರಿಸುವಂತೆ ನೋಡಿಕೊಳ್ಳುತ್ತೇವೆ. ವಿಜಯೇಂದ್ರ ಅವರು ನಮ್ಮ ಪಕ್ಷದಲ್ಲಿ ಪ್ರಮುಖರು. ಯಡಿಯೂರಪ್ಪ ಅವರು ನಮ್ಮ ನಾಯಕರು. ಆಯಾ ಪ್ರದೇಶಗಳಲ್ಲಿ ಪ್ರಾಬಲ್ಯ ಆಧರಿಸಿ ವಿಜಯೇಂದ್ರ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಬಸವ ಕಲ್ಯಾಣ ಉಸ್ತುವಾರಿ ಕೊಟ್ಟರೆ, ರವಿಕುಮಾರ್ ಹಾಗೂ ಸಚಿವ ವಿ.ಸೋಮಣ್ಣ ಅವರಿಗೆ ಮಸ್ಕಿ ಚುನಾವಣೆಯ ಉಸ್ತುವಾರಿ ನೀಡಲಾಗಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಗೆಲುವಿಗಾಗಿ ಪಕ್ಷ ಎಲ್ಲರನ್ನೂ ಬಳಸಿಕೊಳ್ಳುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಸಿಎಂ ಹಾಗೂ ಕೇಂದ್ರ ನಾಯಕರು ಮಾತನಾಡಿದ್ದಾರೆ. ಅವರು ಏನು ಕೇಳಬೇಕೋ ಕೇಳಿದ್ದಾರೆ. ದೆಹಲಿಗೆ ಹೋದವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದರು.
ನಾಡಗೌಡ ಬಂದರೆ ಎಳೆದುಕೊಳ್ಳುತ್ತೇವೆ
ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಬಿಜೆಪಿಯೊಳಗೆ ಕಾಲಿಟ್ಟಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ನನಗೆ ಗೊತ್ತಿಲ್ಲ. ಯಾರೇ ಬಂದರೂ ನಮ್ಮ ಪಕ್ಷದೊಳಕ್ಕೆ ಎಳೆದುಕೊಳ್ಳುತ್ತೇವೆ. ಮುಂದಿನ ಚುನಾವಣೆಯಲ್ಲಿ ಸಿಂಧನೂರಲ್ಲಿ ಬಿಜೆಪಿಯೇ ಗೆಲ್ಲಲಿದೆ ಎಂದರು.
‘ಬಳ್ಳಾರಿ ಸಮಸ್ಯೆ ಸರಿಪಡಿಸುತ್ತೇವೆ’
ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಅವರ ಹೇಳಿಕೆಯನ್ನು ಗಮನಿಸಿರುವೆ. ಎಲ್ಲರನ್ನೂ ಕರೆದು ಮಾತನಾಡಿ ಸಮಸ್ಯೆ ಸರಿಪಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಗೊಂದಲಕ್ಕೆ ಆಸ್ಪದವಿಲ್ಲ. ಬಳ್ಳಾರಿಯ ಬೆಳವಣಿಗೆ ಗಮನಿಸಲಾಗಿದ್ದು, ಕರೆದು ಮಾತನಾಡಿಸುತ್ತೇವೆ. ರಾಜ್ಯದಲ್ಲಿ ನಮ್ಮದೇ ಸರ್ಕಾರ, ಪಕ್ಷ ಬಲಿಷ್ಠವಾಗಿದ್ದು, ಎಲ್ಲವನ್ನೂ ಸರಿಪಡಿಸುವ ಸಾಮರ್ಥ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ