ತೇವಾಂಶವಿಲದೆ ಬಾಡುತ್ಲಿದೆ ಬಿಳಿ ಜೋಳ


Team Udayavani, Dec 8, 2018, 12:52 PM IST

ray-1.jpg

ರಾಯಚೂರು: ಮುಂಗಾರು ಮತ್ತು ಹಿಂಗಾರಿನಿಂದ ಸಂಪೂರ್ಣ ವಂಚಿತಗೊಂಡಿರುವ ರೈತನೀಗ ಜೋಳದ ಬೆಳೆ ಉಳಿಸಿಕೊಳ್ಳಲು ತೋಳ್ಬಲ ನೆಚ್ಚಿಕೊಂಡಿದ್ದಾನೆ. ತೇವಾಂಶವಿಲ್ಲದೇ ಬೆಳೆ ಬಾಡಿ ಹೋಗುತ್ತಿದ್ದು, ಅದನ್ನು ಉಳಿಸಿಕೊಳ್ಳಲು “ಭಗೀರಥ’ ಪ್ರಯತ್ನವನ್ನೇ ನಡೆಸಿದ್ದಾನೆ.

ಪ್ರಸಕ್ತ ಸಾಲಿನಲ್ಲಿ ಮಳೆ ಸಂಪೂರ್ಣ ಕೈ ಕೊಟ್ಟ ಹಿನ್ನೆಲೆಯಲ್ಲಿ ಭೂಮಿಯಲ್ಲಿ ತೇವಾಂಶವೇ ಉಳಿದಿಲ್ಲ. ಇದರಿಂದ ಹಿಂಗಾರಿನಲ್ಲಿ ರೈತರು ಬಿತ್ತನೆ ಮಾಡಿರುವ ಜೋಳದ ಬೆಳೆ ಕೂಡ ಬಾಡುತ್ತಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ರೈತರು ಮೂರ್‍ನಾಲ್ಕು ಕಿಮೀ ದೂರದಿಂದ ಪೈಪ್‌ಲೈನ್‌ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇನ್ನೂ ಕೆಲ ರೈತರು ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸುತ್ತಿದ್ದಾರೆ.

ಹಿಂದೆಂದೂ ಕಾಣದಂಥ ಸೈನಿಕ ಹುಳು ಕಾಟ ಈ ಬಾರಿ ಜೋಳಕ್ಕೆ ತಗುಲಿದ್ದು, ಬೆಳವಣಿಗೆ ಕುಂಠಿತವಾಗಿದೆ. ಅದರ ಜತೆಗೆ ತೇವಾಂಶವಿಲ್ಲದೇ ಇಳುವರಿಯೇ ಬರುವುದು ಅನುಮಾನವಾಗಿದೆ. ಸಾಮಾನ್ಯವಾಗಿ ಭೂಮಿಯಲ್ಲಿನ ತೇವ ಹೀರಿಕೊಂಡು ಡಿಸೆಂಬರ್‌, ಜನವರಿಯಲ್ಲಿ ಚಳಿಗೆ ಜೋಳ
ಚೆನ್ನಾಗಿ ಬೆಳೆಯುತ್ತದೆ. ಈ ಬಾರಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಬೆಳವಣಿಗೆ ಕಂಡಿಲ್ಲ.

ಸಾವಿರಾರು ಖರ್ಚು: ಖರ್ಚಿಲ್ಲದ ಬೆಳೆ ಎಂದು ನಂಬಿದ್ದ ಜೋಳಕ್ಕೆ ನಿತ್ಯ ಸಾವಿರಾರು ಖರ್ಚು ಮಾಡಲಾಗುತ್ತಿದೆ. ಸುಮಾರು ನಾಲ್ಕೈದು ಕಿಮೀ ದೂರದಿಂದ ಪೈಪ್‌ಲೈನ್‌ ಮಾಡಿಸಲು ಸಾವಿರಾರು ಖರ್ಚು ಮಾಡಿರುವ ರೈತರು ಡೀಸೆಲ್‌ ಎಂಜಿನ್‌ ಮೂಲಕ ನೀರು ಹಾಯಿಸುತ್ತಿದ್ದಾರೆ. ನಿತ್ಯ ಏನಿಲ್ಲ ಎಂದರೂ 7-8 ಲೀಟರ್‌ ಡೀಸೆಲ್‌ ಬೇಕಾಗುತ್ತಿದೆ. ಅದರ ಜತೆಗೆ ಕೆಲಸಗಾರರನ್ನು ನೇಮಿಸಬೇಕಿದೆ.

ಎಲ್ಲ ಸೇರಿ ನಿತ್ಯ ಸಾವಿರದಿಂದ ಹದಿನೈದು ನೂರು ಖರ್ಚಾಗುತ್ತಿದೆ. ಇನ್ನು ಒಂದು ಟ್ಯಾಂಕರ್‌ಗೆ 600 ದರ ಇದ್ದು, ನೀರು ತುಂಬಿಸಲು 200 ಕೊಡಬೇಕು. ಚಾಲಕರಿಗೆ 300 ನೀಡಬೇಕಿದೆ.

ನಿಯಂತ್ರಣಕ್ಕೆ ಬಾರದ ಲದ್ದಿ ಹುಳು: ಈ ಬಾರಿ ಕಾಣಿಸಿಕೊಂಡ ಸೈನಿಕ ರೋಗಕ್ಕೆ ಈಗಾಗಲೇ ರೈತರು ಕ್ರಿಮಿನಾಶಕ ಸಿಂಪರಣೆ ಮಾಡಿದ್ದಾರೆ. ಆದರೂ ಲದ್ದಿ ಹುಳು ನಿಯಂತ್ರಣಕ್ಕೆ ಬರುತ್ತಿಲ್ಲ. ರೈತರು ಹೇಳುವ ಪ್ರಕಾರ ಇದಕ್ಕೆ ಭೂಮಿಯಲ್ಲಿ ತೇವಾಂಶ ಇಲ್ಲದಿರುವುದು ಕಾರಣವಾಗಿದೆ.

ದರ ಹೆಚ್ಚಳ: ಮಾರುಕಟ್ಟೆಯಲ್ಲಿ ಈಗ ಜೋಳದ ದರ ಹೆಚ್ಚಾಗಿದೆ. ಇದು ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಹಿಂದೆ ಎಕರೆಗೆ ಏನಿಲ್ಲ ಎಂದರೂ 7-8 ಕ್ವಿಂಟಲ್‌ ಜೋಳ ಬರುತ್ತಿತ್ತು. ಆದರೆ, ಈ ಬಾರಿ 3-4 ಕ್ವಿಂಟಲ್‌ ಬರುವುದು ಕಷ್ಟವಾಗಿದೆ. ಇಂಥ ವೇಳೆ ಉತ್ತಮ ಬೆಲೆ ಸಿಕ್ಕರೆ ರೈತನಿಗೆ ಅನುಕೂಲವಾಗಲಿದೆ. ಸದ್ಯಕ್ಕೆ ಮಾರುಕಟ್ಟೆಯಲ್ಲಿ ದರವೇನೋ ಇದೆ. ಆದರೆ, ಜೋಳ ಮಾರುಕಟ್ಟೆಗೆ ಬರುವ ವೇಳೆ ಅದು ಕುಸಿದರೆ ಎಂಬ ಆತಂಕವೂ ಇದೆ. ಈ ಕಾರಣಕ್ಕೆ ರೈತರು ಜೋಳವನ್ನು ಬೆಂಬಲ ಬೆಲೆಗೆ ಖರೀದಿಸಲಿ ಎಂಬ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ.

ಜೋಳದ ಬೆಳೆಗೆ ಇಷ್ಟೊಂದು ಖರ್ಚು ಮಾಡುತ್ತಿರುವುದು ಇದೇ ಮೊದಲು. ಖರ್ಚಿಲ್ಲದ ಬೆಳೆ ಎಂದು ಹಾಕಿದರೆ ಈಗ ನಷ್ಟ ಎದುರಾಗುವ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ರೋಗ, ಮತ್ತೂಂದೆಡೆ ಮಳೆ ಕೊರತೆ. ಹೀಗಾಗಿ ಇರುವ ಬೆಳೆಯನ್ನಾದರೂ ಉಳಿಸಿಕೊಳ್ಳಲು ಸಾವಿರಾರು ಖರ್ಚು ಮಾಡಿ ನೀರು ಹರಿಸುತ್ತಿದ್ದೇವೆ. ಮಾರುಕಟ್ಟೆಯಲ್ಲಿ ಉತ್ತಮ ಸಿಕ್ಕರೆ ಅನುಕೂಲ ಇಲ್ಲವಾದರೆ ನಷ್ಟ ತಪ್ಪಿದ್ದಲ್ಲ.
 ಪ್ರಕಾಶ ಪಾಟೀಲ, ರೈತ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.