ಕಿಮ್ಮತ್ತಿಲ್ಲದ ಬಜೆಟ್ ಎಂದಾದರೂ ಇರುತ್ತದೆಯೇ?
Team Udayavani, Feb 19, 2018, 6:50 AM IST
ಮಸ್ಕಿ/ಸಿಂಧನೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಚುನಾವಣೆ ಬಜೆಟ್ ಆಗಿದ್ದು ಇದಕ್ಕೆ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಇವರಿಗೆ ಸಂವಿಧಾನದ ಅರಿವಿಲ್ಲ.
ಸಂವಿಧಾನದಲ್ಲಿ ಕಿಮ್ಮತ್ತಿಲ್ಲದ ಬಜೆಟ್ ಎಂದಾದರೂ ಇರುತ್ತದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭಾನುವಾರ ಮಾತನಾಡಿದ ಅವರು, “ನಾನು ಸಂವಿಧಾನ ಓದಿದ್ದೇನೆ. ಜಾರಿಗೆ ತರುವ ಬಜೆಟ್ ಮಂಡಿಸಿದ್ದೇನೆ. ಇದು ಚುನಾವಣೆ ಬಜೆಟ್ ಅಲ್ಲ. ಇದನ್ನೇ ಜಾರಿಗೆ ತರುತ್ತೇವೆ. ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದರು.
ರಾಜ್ಯದಲ್ಲಿ ಸುಸ್ಥಿರ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದೇವೆ. ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಆಶ್ವಾಸನೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಆದರೆ, ಬಿಜೆಪಿಯವರೇ ಬರುತ್ತಿಲ್ಲ. ಅಭಿವೃದ್ಧಿ ಬಗ್ಗೆ ಟೀಕೆ ಮಾಡುವ ಬಿಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಬರುವ ಧಮ್ ಇಲ್ಲ. ಬಿಜೆಪಿಗೆ ಜನ ಅ ಧಿಕಾರ ನೀಡಿದಾಗ ಅವರೇನು ಮಾಡಿದ್ದಾರೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ಸಂಗತಿ ಎಂದು ಟೀಕಿಸಿದರು.
ಬಳಿಕ ಮಸ್ಕಿಯಲ್ಲಿ ಮಾತನಾಡಿ, ಮೋದಿ ವಿರುದ್ಧ ಹರಿಹಾಯ್ದರು. ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಮಂತ್ರಿ ಮೋದಿಯವರು ರಾಜ್ಯ ಸರಕಾರವನ್ನು ಭ್ರಷ್ಟ ಸರಕಾರವೆಂದು ನಿರಾಧಾರವಾಗಿ ಟೀಕೆ ಮಾಡಿದ್ದಾರೆ. ಪಕ್ಕದಲ್ಲಿ ಜೈಲಿಗೆ ಹೋಗಿ ಬಂದಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯಂ ನಾಯ್ಡು ಮುಂತಾದವರನ್ನು ಕುಳ್ಳಿರಿಸಿಕೊಂಡು ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ನಾನು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ಸಿಂಧನೂರು ಕ್ಷೇತ್ರದಿಂದ ಅತಿ ಹೆಚ್ಚು ಮತಗಳನ್ನು ಪಡೆದಿದ್ದೆ. ಆ ಋಣವನ್ನು ನಾನು ಎಂದಿಗೂ ಮರೆಯುವುದಿಲ್ಲ. ಅದಕ್ಕಾಗಿ ಸಿಂಧನೂರು ಕ್ಷೇತ್ರಕ್ಕಾಗಿ ಎಷ್ಟು ಅನುದಾನ ನೀಡಿದರೂ ಕಡಿಮೆಯೇ.
– ಸಿದ್ದರಾಮಯ್ಯ, ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ