40 ಸ್ಥಾನ ಗೆದ್ದು ಕೆಆರ್‌ಪಿಪಿ ಅಧಿಕಾರಕ್ಕೆ ತರುತ್ತೇನೆ: ಜನಾರ್ದನ ರೆಡ್ಡಿ

ರಾಷ್ಟ್ರೀಯ ಪಕ್ಷಗಳು ತಲೆಬಾಗುವಂತೆ ಪಕ್ಷ ಕಟ್ಟಿ ತೋರಿಸುವೆ

Team Udayavani, Jan 6, 2023, 10:15 PM IST

40 ಸ್ಥಾನ ಗೆದ್ದು ಕೆಆರ್‌ಪಿಪಿ ಅಧಿಕಾರಕ್ಕೆ ತರುತ್ತೇನೆ: ಜನಾರ್ದನ ರೆಡ್ಡಿ

ಸಿಂಧನೂರು: “ಜನಾರ್ದನ ರೆಡ್ಡಿ ಒಬ್ಬಂಟಿ, ಏನೂ ಮಾಡಕ್ಕಾಗಲ್ಲ ಅಂದವರೇ ಮೈ ಮುಟ್ಟಿ ನೋಡಿಕೊಳ್ಳುವಂತೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ಅ ಧಿಕಾರಕ್ಕೆ ತಂದು ತೋರಿಸುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಜಿ.ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ.

ನಗರದ ಸ್ತ್ರೀಶಕ್ತಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೆಆರ್‌ಪಿ ಪಕ್ಷದ ಮೊದಲ ಸಾರ್ವಜನಿಕ ಸಭೆ, ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಬ್ಬಂಟಿಯಾಗಿ ಪ್ರಸ್‌ಮೀಟ್‌ ಮಾಡಿದ್ದೆ. ರೆಡ್ಡಿ ಜತೆ ಯಾರು ಬರುತ್ತಾರೆಂದು ಕೆಲವರು ಮಾತಾಡುತ್ತಾರೆ. ನಾನು ಯಾವ ನಾಯಕರನ್ನೂ ನಂಬಿಕೊಂಡು ಪಕ್ಷ ಕಟ್ಟಿಲ್ಲ. ಜನರನ್ನು ನಂಬಿ ಪಕ್ಷ ಕಟ್ಟಿದ್ದೇನೆ. ನಾಲ್ಕೇ ದಿನಗಳಲ್ಲಿ ಚುನಾವಣೆ ಬರಲಿದ್ದು, ಕೆಆರ್‌ಪಿ ಪಕ್ಷ ಏನೆಂದು ತೋರಿಸಲಾಗುವುದು. ರಾಷ್ಟ್ರೀಯ ಪಕ್ಷಗಳೇ ತಲೆಬಾಗುವ ರೀತಿಯಲ್ಲಿ ಪ್ರಾದೇಶಿಕ ಪಕ್ಷ ಬೆಳೆಸುತ್ತೇನೆ ಎಂದರು.

ಬಿಎಸ್‌ವೈಗಾಗಿ ಪಕ್ಷ ಕಟ್ಟಲಿಲ್ಲ: ದಕ್ಷಿಣ ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರದ ಬಾಗಿಲು ತೆರೆಯಲು ಕಾರಣನಾಗಿದ್ದು ಜನಾರ್ದನ ರೆಡ್ಡಿ. ಅದು ಜನರಿಗೆ ಗೊತ್ತಿದೆ. 2018ರಲ್ಲೇ ಪಕ್ಷ ಕಟ್ಟಲು ನಿರ್ಧರಿಸಿದ್ದೆ. ಇಳಿವಯಸ್ಸಿನಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸಿಎಂ ಹುದ್ದೆ ತಪ್ಪಿಸಿದರೆಂಬ ಆರೋಪ ಬೇಡವೆಂದು ಕೈಬಿಟ್ಟೆ. ಜೈಲಿಗೆ ಹೋಗಿ ಬಂದ ನಂತರ ದೊಡ್ಡ ಲೀಡರ್‌ಗಳಿಗೆ ಬೇಡವಾದೆ. ಆದರೆ, ನಾನು ಕೈಲಾಗದೇ ಕುಳಿತಿಲ್ಲ. ಹುಲಿ ಬೇಟೆಗಾಗಿ ಕುಳಿತಿತ್ತು. ಈಗ ಕೆಆರ್‌ಪಿ ಕಟ್ಟುವ ಮೂಲಕ ಅಖಾಡಕ್ಕೆ ಇಳಿದಿದ್ದೇನೆ. ಉತ್ತರ ಕರ್ನಾಟಕ ಹಾಗೂ ಹಿಂದುಳಿದ 13 ಜಿಲ್ಲೆಗಳಲ್ಲಿ 2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ. 40 ಎಂಎಲ್‌ಎ ಗೆಲ್ಲಿಸುವ ಗುರಿಯಿದೆ ಎಂದರು.

ದೊಡ್ಡವರೇ ಈಗ ಮಾತ್ರೆ ತೆಗೆದುಕೊಳ್ಳುತ್ತಾರೆ: ಜನಾರ್ದನ ರೆಡ್ಡಿ ಮುಖ್ಯಮಂತ್ರಿ ಹುದ್ದೆಗೆ ಹೋಗುತ್ತಾರೆಂದು ನಮ್ಮ ದೊಡ್ಡವರೇ ಮೋಸ-ಮಸಲತ್ತು ಮಾಡಿದರು. ಇಂದು ಅದೇ ಹಿರಿಯರು ನನ್ನ ಪಕ್ಷಕ್ಕೆ ಸಿಗುತ್ತಿರುವ ಸ್ಪಂದನೆ ಗಮನಿಸಿ ದಿನಕ್ಕೆ 20 ಬಿಪಿ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ನನಗೆ ಯಾವುದೇ ಬಿಪಿ-ಶುಗರ್‌ ಇಲ್ಲ. ಆ ದೊಡ್ಡವರು ಈಗಲೂ ನನ್ನನ್ನು ಸಿಲುಕಿಸಲು ಪ್ಲ್ಯಾನ್ ಮಾಡ್ತಾ ಇರ್ತಾರೆ. ನಾನು ಒಬ್ಬಂಟಿ ಅಂದುಕೊಂಡ ಅವರಿಗೆ ಜನರೇ ಉತ್ತರ ಕೊಡಬೇಕು ಎಂದರು.

ಈ ವೇಳೆ ಸಿಂಧನೂರಿನ ಮಲ್ಲಿಕಾರ್ಜುನ ನೆಕ್ಕಂಟಿ, ವಿಜಯಪುರದ ಶ್ರೀಕಂಠ ಬಂಡಿ, ಲಿಂಗಸುಗೂರಿನ ಅಮರೇಶ ನಾಯ್ಕ, ಮಲ್ಲನಗೌಡ ನಾಗರಬೆಂಚಿ ಸೇರಿದಂತೆ ಇತರರು ಇದ್ದರು.

ಆಸ್ತಿ ಮುಟ್ಟುಗೋಲು ಅಸಾಧ್ಯ
ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಸಿಬಿಐ ನೋಟಿಸ್‌ ಜಾರಿ ಮಾಡಿದೆ ಎನ್ನುತ್ತಾರೆ. ಆದ್ರೆ, ನೂರು ಜನ್ಮ ಹೆತ್ತಿದರೂ ಅದು ಸಾಧ್ಯವಿಲ್ಲ. ನಾನು ಈಗಾಗಲೇ ಆಸ್ತಿ ವಿಚಾರಕ್ಕೆ ಸಂಬಂಧಿ ಸಿ ಎಲ್ಲವನ್ನೂ ಕೋರ್ಟ್‌ನಲ್ಲಿ ಹೇಳಿದ್ದೇನೆ. ಈಗ ಒಂದು ರೂ. ಇದ್ದ ಆಸ್ತಿ ಮುಂದೆ 10 ರೂ. ಆಗುತ್ತದೆ. ನಾನು ಅಡ್ಡಾದಿಡ್ಡಿಯಾಗಿ ಬೆಳೆದಿದ್ದರೆ ದೇಶದಲ್ಲೇ ಬದುಕಲು ಬಿಡುತ್ತಿರಲಿಲ್ಲ. ನಾನು ನ್ಯಾಯವಾಗಿ ಸಂಪಾದಿಸಿದ್ದೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಮಗಳು ಬ್ರಹ್ಮಿಣಿ ಪ್ರಚಾರಕ್ಕೆ ಬರ್ತಾಳೆ
ಒಳ್ಳೆಯ ಕೆಲಸ ಮಾಡಿದ್ದರೆ ಒಳ್ಳೆಯದೇ ಆಗುತ್ತದೆ. ಮಗಳು ಬ್ರಹ್ಮಿಣಿ ದೊಡ್ಡ ಕುಟುಂಬದ ಸೊಸೆ. ಸಿಂಧನೂರಿಗೆ ಪ್ರಚಾರಕ್ಕೆ ಬರಿ¤àನಿ ಅಂದಿದ್ದಳು. ಬಳ್ಳಾರಿ ಕಾರ್ಯಕ್ರಮಕ್ಕೆ ಬರುತ್ತಾಳೆ. ನನ್ನ ಮಗಳು ಕೂಡ ಭಾಷಣ ಕಲಿತಿದ್ದು, ನನಗಿಂತಲೂ ಚೆನ್ನಾಗಿ ಮಾತನಾಡುತ್ತಾಳೆ. ಪುತ್ರ ಕೀರಿಟಿಯ ಸಿನಿಮಾ ಎರಡು ತಿಂಗಳಲ್ಲೇ ಬಿಡುಗಡೆ ಆಗಬೇಕಿತ್ತು. ರಾಜಕೀಯ ಪಕ್ಷ ಮಾಡಿದ ಹಿನ್ನೆಲೆಯಲ್ಲಿ ನಾನೇ ಮುಂದಕ್ಕೆ ಹಾಕಿದ್ದೇನೆ. ಆತ ಉತ್ತಮ ನಟನಾಗಿ ಬೆಳೆಯಬೇಕು. ರಾಜಕೀಯ ತಳುಕು ಬೀಳಬಾರದು ಎಂದು ರೆಡ್ಡಿ ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.