ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Aug 21, 2019, 2:01 PM IST
ರಾಯಚೂರು: ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ಬಲದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿರಿವಾರ ಸಮೀಪ ನಡೆದಿದೆ.
ನಸೀಮಾ ಅತ್ತನೂರು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಗಂಡನ ಮನೆಯಲ್ಲಿ ಕಿರುಕಿಳ ತಾಳಲಾರದೆ ನಸೀಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಆಸ್ಪತ್ರೆಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ನಸೀಮಾ ಅಚರು ಸಿರವಾರಕ್ಕೆ ತೆರಳಿದ್ದರು. ಬಳಿಕ ಸಮೀಪದಲ್ಲಿದ್ದ ಕೃಷ್ಣಾ ಬಲದಂಡೆ ಕಾಲುವೆಗೆ ಬಂದು ಅಲ್ಲಿ ಮಕ್ಕಳೊಂದಿಗೆ ನೀರಿಗೆ ಹಾರಿದ್ದಾರೆ.
ನಸೀಮಾ (28) ಮತ್ತು ಆಕೆಯ ಮಕ್ಕಳಾದ ಮಹ್ಮದ್ ಅನೀಫ್( 5), ಐಯಾನ್ (3) ಹಾಗೂ ರೀಗಾನ್ (1) ಮೃತದೇಹಗಳು ದೇವದುರ್ಗ ತಾಲೂಕಿನ ಕೊತ್ತದೊಡ್ಡಿಯಲ್ಲಿ ಕಾಲುವೆಯಲ್ಲಿ ಮಂಗಳವಾರ ಸಂಜೆ ದೊರೆತಿವೆ. ಘಟನೆಯ ಕುರಿತಾಗಿ ನಸೀಮಾ ಸಹೋದರ ನೀಡಿದ ದೂರಿನ ಮೇರೆಗೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!