ಮಹಿಳೆಯರು-ಹಿರಿಯರು ಸಮಾಜದ ಆಧಾರ


Team Udayavani, Mar 17, 2022, 5:10 PM IST

20elders

ರಾಯಚೂರು: ಹಿರಿಯರು ಮತ್ತು ಮಹಿಳೆಯರು ಸಮಾಜದ ಆಧಾರಸ್ತಂಭಗಳಿದ್ದಂತೆ. ಅವರನ್ನು ಗೌರವದಿಂದ ಕಂಡಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆದರೆ, ಇಂದು ಹೆತ್ತವರನ್ನು ಅಗೌರವದಿಂದ ಕಾಣುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಡಾ| ಜಿ.ಜಿ.ನಂದೂರಕರ್‌ ಕಳವಳ ವ್ಯಕ್ತಪಡಿಸಿದರು.

ನಗರದ ಲಲಿತ ಹಿರಿಯ ನಾಗರಿಕರ ಮನೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಾಮಾಜಿಕ ಸೈನಿಕರು, ಐಕ್ಯೂಎಸಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಲಿಂಗ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಸಮಸಮಾಜ ನಿರ್ಮಿಸುವ ಹೊಣೆ ಎಲ್ಲರ ಮೇಲಿದೆ. ಎಲ್ಲರಿಂದಲೇ ಈ ವ್ಯವಸ್ಥೆ ರೂಪುಗೊಂಡಿದ್ದು, ಪ್ರತಿಯೊಬ್ಬರಿಗೂ ತಮ್ಮದೇ ಹಕ್ಕಗಳಿರುತ್ತವೆ ಎಂದರು.

ಕೆಆರ್‌ಐಡಿಎಲ್‌ನ ಸಹಾಯಕ ಕಾರ್ಯನಿರ್ವಹಕ ಇಂಜನಿಯರ್‌ ಅನಿಲ್‌ ಕುಮಾರ ಗೋಗಲೆ ಮಾತನಾಡಿ, ಸಮಾಜದಲ್ಲಿ ಹೆತ್ತವರನ್ನು ದೇವರೆಂದು ಪೂಜಿಸುವ ದೇಶ ನಮ್ಮದು. ಕಾಲ ಬದಲಾದಂತೆ ಸಮಾಜದಲ್ಲಿ ಹಿರಿಯರು ಎನ್ನುವ ಗೌರವ ಕ್ಷೀಣಿಸುತ್ತಿದೆ. ಹಿರಿಯರಲ್ಲಿ ಅನಾಥ ಪ್ರಜ್ಞೆ ಹೆಚ್ಚುವಂತೆ ಮಾಡುತ್ತಿರುವುದು ದುಃಖದ ವಿಷಯ. ಯುವ ಪೀಳಿಗೆ ಹಿರಿಯರ ಶ್ರಮಕ್ಕೆ ತಕ್ಕೆ ಗೌರವ ನೀಡಬೇಕು ಎಂದರು.

ಉಪನ್ಯಾಸಕ ಡಾ| ಜೆ.ಎಲ್‌. ಈರಣ್ಣ ಮಾತನಾಡಿ, ಕಾಲ ಬದಲಾದಂತೆ ಸಂಬಂಧಗಳು ಬದಲಾಗುತ್ತಿವೆ. ಹಿಂದಿನ ಕಾಲದಲ್ಲಿ ಜನ ನಾವು ಎನ್ನುತ್ತಿದ್ದರು. ಇಂದಿನ ಜನರು ನಾನು ಎನ್ನುತ್ತೇವೆ ಎಂದು ವಾತಾವರಣ ಸೃಷ್ಟಿಯಾಗಿದೆ ಎಂದರು. ಪ್ರಾಚಾರ್ಯ ಡಾ| ಯಂಕಣ್ಣ ಮಾಥನಾಡಿ ಅಧ್ಯಕ್ಷತೆ ವಹಿಸಿದ್ದರು. ಲಲಿತ ಹಿರಿಯ ನಾಗರಿಕ ಮನೆಯ ಎಲ್ಲ ಹಿರಿಯರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ಹನುಮಂತು ಕೋರಾಪುರ್‌, ಐಕ್ಯೂಎಸಿ ಸಂಚಾಲಕ ಮಹಾಂತೇಶ್‌ ಅಂಗಡಿ, ಮಹದೇವಪ, ರಾಜಶೇಖರ್‌, ಲಕ್ಷ್ಮಣ ಯಾದವ್‌, ಮನೆಯ ಮೇಲ್ವಿಚಾರಕ ವಿನೋದ ರಾಜ್‌, ಮರಿಯಪ್ಪ, ಸುನಿಲ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.