ಬೂದಿಬಸವೇಶ್ವರ ಮಠದ ಕಾರ್ಯ ಮಾದರಿ


Team Udayavani, Jan 26, 2018, 4:40 PM IST

ray-2.jpg

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ಶ್ರೀ ಬೂದಿಬಸವೇಶ್ವರ ಸಂಸ್ಥಾನಮಠ ಆವರಣದಲ್ಲಿ ಗುರುವಾರ ಶ್ರೀಮಠದಿಂದ 151 ಜೋಡಿಗಳ ಸಾಮೂಹಿಕ ವಿವಾಹ, ಅಯ್ನಾಚಾರ ದೀಕ್ಷೆ ಹಾಗೂ ಶ್ರೀ ಬೂದಿಬಸವೇಶ್ವರ ಶಿವಾಚಾರ್ಯರ ತುಲಾಭಾರ, ಧಾರ್ಮಿಕ ಸಭೆ ಸಮಾರಂಭ ಅದ್ಧೂರಿಯಾಗಿ ನಡೆಯಿತು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೋಸರಾಜು, ಯಾವುದೇ ಸರ್ಕಾರಗಳು ಮಾಡದ ಸಾಮಾಜಿಕ ಕಾರ್ಯಗಳನ್ನು ಮಠ, ಮಾನ್ಯಗಳು ಮಾಡುತ್ತಿವೆ. ಮಠಗಳು ನಡೆಸುವ ಇಂತಹ ಕಾರ್ಯಗಳಿಂದ ಸಮಾಜ ಬದಲಾವಣೆಗೆ ಹಾಗೂ ದುಂದು ವೆಚ್ಚಗಳಿಗೆ ಕಡಿವಾಣ, ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು. 

ಪ್ರತಿ ವರ್ಷ ಬೂದಿ ಬಸವೇಶ್ವರ ಸಂಸ್ಥಾನ ಮಠದಿಂದ 151 ಜೋಡಿಗಳ ಸಮೂಹಿಕ ವಿವಾಹ ಆಯೋಜಿಸುವ ಮೂಲಕ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯರು ಬಡವರು, ಹಿಂದುಳಿದವರು ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವರಿಗೆ ನೆರವಾಗಿದ್ದಾರೆ ಎಂದರು. 

ನೀಲಗಲ್‌ ಬೃಹನ್ಮಠದ ಶ್ರೀ ಡಾ| ಪಂಚಾಕ್ಷರಿ ಶಿವಾಚಾರ್ಯರು ಮಾತನಾಡಿ, ಬೂದಿಯಿಂದ ಬಹುರೋಗ ಕಳೆದ ಬೂದಿ ಬಸವೇಶ್ವರ ಶಿವಾಚಾರ್ಯರು ಭಕ್ತರ ಮನ ಮನೆಯ ದೇವರಾಗಿದ್ದಾರೆ. ಇಂದು ಗೃಹಸ್ಥಾಶ್ರಮಕ್ಕೆ ಕಾಲಿಡುತ್ತಿರುವ ನವದಂಪತಿಗಳು ಹೊಂದಾಣಿಕೆ ಜೀವನ ಸಾಗಿಸಬೇಕು. ದುಶ್ಚಟಗಳಿಂದ ದೂರವಿದ್ದು ಒಳ್ಳೆಯ ಸಂಸ್ಕಾರವಂತರಾಗಬೇಕು ಎಂದು ಕಿವಿಮಾತು ಹೇಳಿದರು.

ಸಂಸದ ಸದಸ್ಯರಾದ ಭಂಗವಂತ್ರಾಯ ಮಾತನಾಡಿ ಶ್ರೀಮಠದ ಸಾಮಾಜಿಕ, ಧಾರ್ಮಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಹನುಮಾಪುರದ ಚಂದ್ರಮ್ಮ ಮಲ್ಲನಗೌಡ ಮಾಲಿಪಾಟೀಲ್‌, ಬುದ್ದಿನ್ನಿಯ ಅಯ್ಯಮ್ಮ ಸೂಗಪ್ಪ ಸಾಹುಕಾರ, ಶಾವಂತಗೇರಾದ ಶಿವಬಸಮ್ಮ ಶಂಕ್ರಪ್ಪ ಸಾಹುಕಾರ ಕುಟುಂಬದಿಂದ ಶ್ರೀ ಬೂದಿಬಸವೇಶ್ವರ ಶಿವಾಚಾರ್ಯರ ತುಲಾಭಾರ ನೆರವೇರಿಸಲಾಯಿತು.

ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯರು, ಗೆಜ್ಜೆಬಾವಿ-ನಿಡಶೇಷಿ ಸಂಸ್ಥಾನ ಮಠದ ಚನ್ನಬಸವ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಶ್ರೀ ಮಹಾಂತ ಶಿವಾಚಾರ್ಯರು, ನೀಲಗಲ್‌, ಎನ್‌.ಗಣೇಕಲ್‌ ಬೃಹನ್ಮಠದ ಡಾ| ಪಂಚಾಕ್ಷರಿ ಶಿವಾಚಾರ್ಯರು, ರಾಯಚೂರು ಅತ್ತನೂರು ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯರು, ಕೆಂಬಾವಿ ಚನ್ನಬಸವ ಶಿವಾಚಾರ್ಯರು, ನವಲಕಲ್‌ ಬೃಹನ್ಮಠದ ಅಭಿನವ ಶ್ರೀ ಸೋಮನಾಥ ಶಿವಾಚಾರ್ಯರು, ಸುಯಲ್ತಾನಪುರ ಬೃಹನ್ಮಠದ ಶ್ರೀ ಶಂಭು ಸೋಮನಾಥ ಶಿವಾಚಾರ್ಯರು, ಆರ್‌ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ರಾಜಶೇಖರ ನಾಯಕ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.