ಹಿಂದೂ ಸಂಘಟನೆಗೆ ಶ್ರಮಿಸಿದ ಮಹಾತ್ಮರು
Team Udayavani, Apr 6, 2022, 10:34 AM IST
ಮಾನ್ವಿ: ಹಿಂದೂ ಸಮಾಜ ಅಭಿವೃದ್ಧಿಗೊಳಿಸಲು, ಸಂಘಟಿಸಲು ಎಲ್ಲಾ ಮಹಾತ್ಮರು ಶ್ರಮಿಸಿದ್ದಾರೆಂದು ಮೂಡಲಗಿ ಧ್ಯಾನ ಯೋಗ ಪೀಠದ ಅಧ್ಯಕ್ಷ ದಯಾನಂದ ಸವದಿ ತಿಳಿಸಿದರು.
ಪಟ್ಟಣದ ಬಸವ ವೃತ್ತದಲ್ಲಿ ಆಗಮಿಸಿದ ಶಿವಜ್ಯೋತಿ ರಥಯಾತ್ರೆಯಲ್ಲಿ ಮಾತನಾಡಿದ ಅವರು, ಇಂದು ಅಗತ್ಯವಿರುವ ಸೌಲಭ್ಯ, ಮೀಸಲಾತಿ ಹೆಸರಿನಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನಮಾಡಲಾಗುತ್ತಿದೆ. ಅಖಂಡ ಸಮಾಜ ಒಡೆದು ರಾಜಕೀಯ ಲಾಭ ಪಡೆಯಲು ಕೆಲವರು ಹೊರಟಿದ್ದಾರೆ ಎಂದು ಹೇಳಿದರು.
ಆಧ್ಯಾತ್ಮಿಕತೆ ಅಡಿಯಲ್ಲಿ ಮೂಲ ಪರಂಪರೆಯನ್ನು ಉಳಿಸಿಕೊಂಡು ಸಮಾಜ ಬಲಪಡಿಸುವ ಉದ್ದೇಶದಿಂದ ಯುಗಾದಿ ಹಬ್ಬದ ಪ್ರಯುಕ್ತ ನಾಡಿನಲ್ಲಿ ಭಕ್ತಿ-ಸಂಸ್ಕಾರ ಜಾಗೃತಿ ಮತ್ತು ನಾಡಿನಲ್ಲಿ ಸುಖ-ಶಾಂತಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಿಂದ ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನವರೆಗೆ 11 ದಿನಗಳವರೆಗೆ ಶಿವಜ್ಯೋತಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಿವಜ್ಯೋತಿ ರಥಯಾತ್ರೆಯನ್ನು ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಬರಮಾಡಿಕೊಂಡು ನೀರಮಾನ್ವಿ ಗ್ರಾಮ ಮಾರ್ಗದ ಮೂಲಕ ನೂರಾರು ಭಕ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಅಖೀಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಅರುಣ ಚಂದಾ, ರಾಜೇಶ ಮಲ್ಲಟ್, ಶಿವಕುಮಾರ, ಸುವರ್ಣಗಿರಿ ಮಠದ ಶ್ರೀ ಚಂದ್ರಶೇಖರಯ್ಯ ಸ್ವಾಮಿ, ಡಾ|ಚಂದ್ರಶೇಖರಯ್ಯ ಸ್ವಾಮಿ, ಡಾ|ಶರಣಪ್ಪ ಬಲಟ್ಟಗಿ, ಡಾ|ಬಸವಪ್ರಭು ಪಾಟೀಲ್ ಬೆಟ್ಟದೂರು, ನಯೋಪ್ರಾ ಅಧ್ಯಕ್ಷ ಶರಣಪ್ಪ ನಕ್ಕುಂದಿ, ಸಂತೋಷ ಹೂಗಾರ, ವೀರನಗೌಡ, ಶ್ರೀಕಾಂತ ಗೂಳಿ, ಗುರುಸಿದ್ದನಗೌಡ ಕಣ್ಣೂರು, ಸೂಗೂರಯ್ಯಸ್ವಾಮಿ, ತಿಮ್ಮರೆಡ್ಡಿ ಭೋಗವತಿ, ಸಿದ್ದನಗೌಡ ಆಲ್ದಾಳ್, ಹರೀಶ್, ಹೆಚ್.ಮೌನೇಶ, ಹನುಮನಗೌಡ, ಸುರೇಶ ನಾಡಗೌಡ, ಚಂದ್ರಮೌಳೇಶ್ವರ, ಅಮರೇಶ, ವೈ. ಬಸವನಗೌಡ ಸೇರಿದಂತೆ ಸಮಾಜದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ