ಬೆಂಗಳೂರಿನಲ್ಲಿ ಬಂಧಿಯಾದ ಮಂದಿ!


Team Udayavani, Mar 29, 2020, 2:56 PM IST

rc-tdy-1

ಸಾಂದರ್ಭಿಕ ಚಿತ್ರ

ರಾಯಚೂರು: ಕೃಷಿ ಚಟುವಟಿಕೆ ಮುಗಿಯುತ್ತಿದ್ದಂತೆ ದುಡಿಯಲು ಬೆಂಗಳೂರು ಸೇರಿ ವಿವಿಧೆಡೆ ಸೇರಿಕೊಂಡ ಉತ್ತರ ಕರ್ನಾಟಕ ಭಾಗದ ಜನ ಈಗ ಅಲ್ಲೇ ಬಂಧಿಯಾಗಿದ್ದಾರೆ. ಊರಿಗೆ ಬರಬೇಕು ಎಂದರೂ ವಾಹನಗಳು ಸಿಗದೆ ಪರದಾಡುವಂತಾಗಿದೆ.

ಇದೇ ಕಾರಣಕ್ಕೆ ಊರುಗಳಿಗೆ ಕರೆ ಮಾಡಿ ಯಾವುದಾದರೂ ವಾಹನ ವ್ಯವಸ್ಥೆ ಮಾಡಿಕೊಂಡು ಬರುವಂತೆ ತಿಳಿಸುತ್ತಿದ್ದಾರೆ. ಆದರೆ, ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಿರುವ ಪೊಲೀಸರು ಅನಗತ್ಯ ಸಂಚಾರಕ್ಕೆ ಅವಕಾಶ ನೀಡದಿರುವುದು ಸಂಕಷ್ಟಕ್ಕೀಡು ಮಾಡಿದೆ.

ಇಂಥದ್ದೇ ಸಮಸ್ಯೆಗೆ ಸಿಲುಕಿದ ತಾಲೂಕಿನ ಗಂಜಳ್ಳಿ ಗ್ರಾಮದ ಕೂಲಿ ಕಾರ್ಮಿಕರನ್ನು ಎಂಎಲ್‌ಸಿ ಎನ್‌.ಎಸ್‌.ಬೋಸರಾಜ್‌ ಸ್ವಗ್ರಾಮಕ್ಕೆ ಬರಲು ನೆರವು ನೀಡಿದ್ದಾರೆ. ಬೆಂಗಳೂರಿಣ ಕಾಮಾಕ್ಷಿಪಾಳ್ಯದಲ್ಲಿ ಸಿಲುಕಿದವರನ್ನು ವಾಹನದ ವ್ಯವಸ್ಥೆ ಮಾಡಿ ಊರಿಗೆ ತಲುಪಲು ನೆರವಾಗಿದ್ದಾರೆ. ಈ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ನಮ್ಮವರಿಗೂ ವಾಹನ ವ್ಯವಸ್ಥೆ ಮಾಡಿ ಕರೆ ತನ್ನಿ ಎಂದು ಕೇಳುವವರು ಹೆಚ್ಚಾಗಿದ್ದಾರೆ.

ಬೈಕ್‌ನಲ್ಲೇ ಬಂದ್ರು ಗುಳೆ ಹೋದವರು: ರಾಜಧಾನಿಗೆ ಗುಳೆ ಹೋಗಿದ್ದ ಈ ಭಾಗದ ಶುಕ್ರವಾರ 8-10 ಜನ ಬೈಕ್‌ಗಳಲ್ಲೇ ಆಗಮಿಸಿದ್ದು ಕಂಡು ಬಂತು. ಯಾದಗಿರಿ ಜಿಲ್ಲೆಯ ಸೈದಾಪುರ ಮೂಲದ ಯುವಕರುಕಳೆದ ಏಳೆಂಟು ವರ್ಷದಿಂದ ಬೆಂಗಳೂರಿನ ಯಲಹಂಕದಲ್ಲಿ ವಾಸವಾಗಿದ್ದರು. ಗಾರೆ ಕೆಲಸ, ಕಟ್ಟಡ ನಿರ್ಮಾಣ ಸೇರಿ ನಾನಾ ಕೆಲಸಗಳಲ್ಲಿ ತೊಡಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಒಂದೆಡೆ ಕೆಲಸ ಸಿಗದಾಗಿದ್ದರೆ ಮತ್ತೂಂದೆಡೆ ಕಾಯಿಲೆ ಭೀತಿ ಕಾಡುತ್ತಿದೆ.

ಅಲ್ಲದೇ ಊಟಕ್ಕೂ ಸಮಸ್ಯೆ ಎದುರಾದ ಕಾರಣ ಎಲ್ಲರೂ ತಮ್ಮೂರಿಗೆ ಆಗಮಿಸುತ್ತಿದ್ದಾರೆ. ಶುಕ್ರವಾರ ಬೆಂಗಳೂರು ಬಿಟ್ಟಿದ್ದು, ಶನಿವಾರ ಮಧ್ಯಾಹ್ನ ಸಮೀಪದ ಸಾಥಮೈಲ್‌ ಬಳಿ ಆಗಮಿಸಿದ್ದರು. ಅವರನ್ನು ತಡೆದು ತಪಾಸಣೆ ಮಾಡಿದ ಪೊಲೀಸರು. ನಿಮ್ಮ ನಿಮ್ಮಲ್ಲಿ ಅಂತ ಕಾಯ್ದುಕೊಳ್ಳಬೇಕು. ಊರಿಗೆ ಹೋದ ಬಳಿಕ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿ ಹೇಳಿ ಕಳುಹಿಸಿದರು.

 

-ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.