ಜನ ಸೇವಕನಾಗಿ ಕೆಲಸ ಮಾಡುವೆ: ಶಾಸಕ ನಾಯಕ
Team Udayavani, Apr 26, 2022, 2:37 PM IST
ಸಿರವಾರ: ಚುನಾವಣೆ ಪೂರ್ವದಲ್ಲಿ ತಿಳಿಸಿದಂತೆ ನಾಯಕರಾಗಿರದೇ ಜನಗಳ ಸೇವಕನಾಗಿ ಕೆಲಸ ಮಾಡುತ್ತಿರುವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜೆಡಿಎಸ್ ಅಧಿಕಾರದಲ್ಲಿದ್ದಾಗ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡಿದರು. 5 ವರ್ಷದಲ್ಲಿ ಒಬ್ಬ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ದೇವೇಗೌಡರಿಂದ ದೇವದುರ್ಗ, ಲಿಂಗಸುಗೂರು, ಸುರಪುರ, ಶಾಹಪೂರ ಇನ್ನೂ ಅನೇಕ ತಾಲೂಕುಗಳು ನೀರಾವರಿಯಾಗಿವೆ ಎಂದರು.
ತುಂಗಭದ್ರಾ ಜಲಾಶಯ 30 ಟಿಎಂಸಿ ಅಡಿ ಹೂಳು ತುಂಬಿದರಿಂದ ಸಮನಾಂತರ ಜಲಾಶಯ ನಿರ್ಮಾಣ ಮಾಡುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಕಾಲಹರಣ ಮಾಡುತ್ತಿವೆ. ಜೆಡಿಎಸ್ ಪೂರ್ಣಬಹುಮತ ನೀಡಿದರೆ 5 ವರ್ಷದಲ್ಲಿ ನವಲಿ ಜಲಾಶಯ ನಿರ್ಮಾಣ ಮಾಡಿ ಪೂರ್ಣಗೊಳಿಸುವ ಬಯಕೆ ಹೊಂದಿದ್ದಾರೆ. ಪಟ್ಟಣದ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ತಂದಿದ್ದು, ಡಿವೈಡರ್, ಬಸ್ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ರೀಡಾಂಗಣ, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ಜೆಡಿಎಸ್ ಮಾನ್ವಿ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಹಿರಿಯ ಮುಖಂಡ ಜಿ.ಲೋಕರೇಡ್ಡಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಜಂಬುನಾಥ ಯಾದವ್, ಪಿ.ರವಿಕುಮಾರ ವಕೀಲ ಮಾತನಾಡಿದರು. ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಚಂದ್ರಶೇಖರಯ್ಯ ಸ್ವಾಮಿ, ಈಶಪ್ಪ ಹೂಗಾರ, ಕಾಶಿನಾಥ ಸರೋದೆ, ವಿಜಯಲಕ್ಷ್ಮೀ ಆದೆಪ್ಪ, ನಾಗರಾಜಗೌಡ, ದಾನಪ್ಪ, ಆಂಜನೇಯ ಬಿಚ್ಚಾಲಿ, ಎಂ.ಪ್ರಕಾಶ, ಗ್ಯಾನಪ್ಪ, ಯಲ್ಲಪ್ಪದೊರೆ, ಚಂದ್ರಶೇಖರ ಯಲ್ದರ್ತಿ, ಅರಳಪ್ಪ ಯದಲದಿನ್ನಿ, ಬಂದೇನವಾಜ್, ನಾಗರಾಜ, ಏಸುಮಿತ್ರ, ಹನುಮಂತ, ರವಿಗೌಡ ಜಕ್ಕಲದಿನ್ನಿ, ರಾಜೇಶ ನಾಯಕ ನವಲಕಲ್, ಆದೇಪ್ಪ ಸಾಹುಕಾರ, ಶಾಂತಪ್ಪ ಪಿತಗಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ