ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ


Team Udayavani, Jul 14, 2017, 3:19 PM IST

14-RAI-3.jpg

ಲಿಂಗಸುಗೂರು: ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆ. ಅವರಪ್ಪನಾಣೆ ಬಿ.ಎಸ್‌. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲಿಂಗಸುಗೂರು ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಸ್ತಾರಕರ ಮೂಲಕ ಬಿಜೆಪಿ ಸಮಾಜದಲ್ಲಿ ಜಾತಿ ಬೀಜ ಬಿತ್ತಲು ಮುಂದಾಗಿದೆ. ಆ ಮೂಲಕ ಅಧಿಕಾರ
ಹಿಡಿಯಲು ಮುಂದಾದ ಬಿಜೆಪಿಗೆ ವೈಫಲ್ಯ ಕಟ್ಟಿಟ್ಟ ಬುತ್ತಿ ಎಂದರು.

ನಾವೂ ಹಿಂದುಗಳೇ. ನಾವು ಶ್ರೀರಾಮ, ಆಂಜನೇಯ, ವಿಷ್ಣುವಿನ ಪೂಜೆ ಮಾಡುತ್ತೇವೆ. ಆದರೆ, ಬಿಜೆಪಿಯವರು ಹಿಂದುಗಳನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಜಾತಿ ಬೀಜ ಬಿತ್ತಿಯೇ ಬಿಜೆಪಿ ಗೆಲುವು ಸಾ ಧಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ಅಂಥ ಆಟ ನಡೆಯುವುದಿಲ್ಲ ಎಂದರು. ಅಧಿಕಾರದಲ್ಲಿದ್ದಾಗ ಬಿಜೆಪಿಯವರು ದಲಿತರಿಗೆ ಏನೂ ಮಾಡಲಿಲ್ಲ. ಆದರೆ, ಈಗ ದಲಿತರ ಕಡೆಗೆ ನಮ್ಮ ನಡೆ ಎನ್ನುತ್ತಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ದಲಿತರಿಗೆ ಖರ್ಚು ಮಾಡಿದ್ದು ಕೇವಲ 25 ಸಾವಿರ ಕೋಟಿ ರೂ. ಆದರೆ, ನಮ್ಮ ಸರ್ಕಾರ 85 ಸಾವಿರ ಕೋಟಿ ರೂ. ಖರ್ಚು ಮಾಡಿದೆ ಎಂದು ಹೇಳಿದರು.

ಸಾಲ ಮನ್ನಾ ಮಾಡಿಸಲಿ: ಬಿ.ಎಸ್‌. ಯಡಿಯೂರಪ್ಪನವರು ಉತ್ತರನ ಪೌರುಷ ತೋರದೆ ಪ್ರಧಾನಿಗೆ ಹೇಳಿ ರಾಷ್ಟ್ರೀಕೃತ ಬ್ಯಾಂಕ್‌
ಗಳಲ್ಲಿನ ರೈತರ ಸಾಲ ಮನ್ನಾ ಮಾಡಿಸಲಿ. ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹದಗೆಡುತ್ತಿದೆ ಎಂದು ಕೇಂದ್ರ ಸಚಿವ ಅರುಣ ಜೇಟ್ಲಿ ಹೇಳುತ್ತಿದ್ದಾರೆ. ಆದರೆ, ಕಾರ್ಪೋರೇಟ್‌ ವಲಯದ ಸಾವಿರಾರು ಕೋಟಿ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಚನ್ನಾಗಿರುತ್ತದಾ? ಯಡಿಯೂರಪ್ಪನವರೇ ತಾಕತ್ತಿದ್ದರೆ ಸಂಸತ್‌ಗೆ ಮುತ್ತಿಗೆ ಹಾಕಿ ನರೇಂದ್ರ ಮೋದಿ ಮೂಗು
ಹಿಡಿದು ರೈತರ ಸಾಲ ಮನ್ನಾ ಮಾಡಿಸಿ ಎಂದು ಸವಾಲೆಸೆದರು. ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್‌ ಆಯೇಗಾ ಎನ್ನುತ್ತಿದ್ದರು. ಆದರೆ, ಮೂರು ವರ್ಷ ಕಳೆಯಿತು. ಯಾರಿಗಾದರೂ ಅಚ್ಛೇ ದಿನ್‌ ಬಂದಿದೆಯಾ? ಅಚ್ಛೇ ದಿನ್‌ ನಹಿ ಆಯೇಗಾ ಎಂದು ಟೀಕಿಸಿದರು. ನಾಲ್ಕು ವರ್ಷದಲ್ಲಿ ನಾವೇನು ಮಾಡಿದ್ದೇವೆ ಹಾಗೂ ಮೂರು ವರ್ಷದಲ್ಲಿ ಕೇಂದ್ರ ಸರ್ಕಾರ
ಏನೇನು ಮಾಡಿದೆ ಎಂಬುದರ ಬಗ್ಗೆ ಚರ್ಚಿಸಲು ಬಹಿರಂಗ ಚರ್ಚೆಗೆ ಬಿಜೆಪಿಯವರಿಗೆ ಪಂಥಾಹ್ವಾನ ನೀಡುತ್ತೇನೆ. ಬಿ.ಎಸ್‌. ಯಡಿಯೂರಪ್ಪನವರಿಗೆ ತಾಕತ್ತಿದ್ದರೆ ಬರಲಿ ಎಂದು ಸವಾಲೆಸೆದರು. 

ಉದ್ಯೋಗ ಸೃಷ್ಟಿ ಎಲ್ಲಿದೆ?: ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿದ್ದರು. ಆದರೆ, ಈವರೆಗೆ ಕೇವಲ ನಾಲ್ಕು ಲಕ್ಷ ಹುದ್ದೆ ನಿರ್ಮಿಸಿದ್ದಾರೆ. ಅಧಿಕಾರಕ್ಕೆ ಬಂದು 100 ದಿನದಲ್ಲಿ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದಿದ್ದರು. ಆದರೆ, 15 ಪೈಸೆ ಕೂಡ ಹಾಕಿಲ್ಲ. ಬಿಜೆಪಿಯವರ ಬಾಯಿ ಬಡಾಯಿದ್ದಂತೆ. ಮಾಜಿ ಸಿಎಂ ಯಡಿಯೂರಪ್ಪ
ಹೋದಲ್ಲೆಲ್ಲ ಬರೀ ಮಾತಾಡುತ್ತಿದ್ದಾರೆ. ಅವರ ತಾಳಕ್ಕೆ ಶೋಭಾ ಕರಂದ್ಲಾಜೆ ಮೇಳದಂತಿದ್ದಾರೆ ಎಂದು ವ್ಯಂಗ್ಯವಾಡಿದರು.ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ, ನೀರಾವರಿ ಸಚಿವ ಎಂ.ಬಿ. ಪಾಟೀಲ, ಸಂಸದ ಬಿ.ವಿ. ನಾಯಕ ಸೇರಿ ಜಿಲ್ಲೆಯ ಜನಪ್ರತಿನಿ  
ಧಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.