ಮಸ್ಕಿಯಲ್ಲಿ ಯಡಿಯೂರಪ್ಪರೇ ಅಭ್ಯರ್ಥಿ

ವಿಜಯೇಂದ್ರ ಚಿಂತೆಯಲ್ಲಿರುವ ಕಾಂಗ್ರೆಸ್‌ನವರಿಗೆ ಮೊದಲು ತಾಯತ ಕಟ್ಟಿಸಬೇಕಿದೆ

Team Udayavani, Apr 8, 2021, 6:13 PM IST

BJP

ಸಿಂಧನೂರು: ಪ್ರತಿಪಕ್ಷದಲ್ಲಿದ್ದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸಲು ಪ್ರತಾಪ್‌ ಗೌಡ ಪಾಟೀಲ್‌ ರಾಜೀನಾಮೆ ನೀಡಿದ್ದರು. ಆದರೆ,
ಪ್ರತಿಪಕ್ಷಗಳು ಹಣಕ್ಕಾಗಿ ಮಾರಾಟವಾಗಿದ್ದಾರೆಂಬ ಆರೋಪದಲ್ಲಿ ಹುರುಳಿಲ್ಲ. ಈ ಕ್ಷೇತ್ರದ ನಿಜವಾದ ಅಭ್ಯರ್ಥಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಅವರು ತಾಲೂಕಿನ ವಿರೂಪಾಪುರ ಗ್ರಾಮದಲ್ಲಿ ಬುಧವಾರ ನಡೆದ ಚುನಾವಣೆ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇತಿಹಾಸದಲ್ಲಿ ಪ್ರತಿಪಕ್ಷದಲ್ಲಿದ್ದಾಗ ರಾಜೀನಾಮೆ ಸಹಜ. ಆದರೆ, ಆಡಳಿತ ಪಕ್ಷದಲ್ಲಿದ್ದುಕೊಂಡು ಸಚಿವರಾಗಿದ್ದಾಗಲೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರತಿಪಕ್ಷದಲ್ಲಿದ್ದ ಯಡಿಯೂರಪ್ಪ ಅವರನ್ನು ಬೆಂಬಲಿಸಿದ ಇತಿಹಾಸ ಈ ದೇಶದಲ್ಲೇ ಮೊದಲು.

ಅಲ್ಲಿ ತಮ್ಮ ಕ್ಷೇತ್ರದ ಕೆಲಸಗಳಾಗುತ್ತಿರಲಿಲ್ಲ. ಅಲ್ಲಿ ತಮಗೆ ಬೆಲೆ ಇಲ್ಲವೆಂದು ಗೊತ್ತಾದ ಮೇಲೆ ರಾಜೀನಾಮೆ ನೀಡಿ ಬಂದಿದ್ದಾರೆ. ಹಣಕ್ಕಾಗಿ ಮಾರಾಟವಾಗಿದ್ದಾರೆ ಎಂಬುದು ಸುಳ್ಳು. ಅತಿ ಹೆಚ್ಚು ಸೀಟುಗಳು ಬಿಜೆಪಿಗೆ ಬಂದಿದ್ದವು. ಕಡಿಮೆ ಸೀಟು ಬಂದರೂ ವಾಮಮಾರ್ಗದಲ್ಲಿ ಜೆಡಿಎಸ್‌, ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚಿಸಿತ್ತು. ಜನರ ಮನಸ್ಸನ್ನು ಅರಿತಿದ್ದ ಪ್ರತಾಪ್‌ಗೌಡರು, ಜನರಿಗೆ ಬೆಲೆ ಕೊಡುವುದರ ಜತೆಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸಲು ರಾಜೀನಾಮೆ ನೀಡಿದರು. ಯಾವುದೇ ಹಣದ ಆಮಿಷಕ್ಕಲ್ಲ ಎಂದರು.

ಕ್ಷೇತ್ರದಲ್ಲಿ ಈಗ ಬಿಜೆಪಿ ಅಲೆ: ಯಾವ ಕೆ.ಆರ್ .ಪೇಟೆ, ಶಿರಾದಲ್ಲಿ ನಾವು ಐತಿಹಾಸಿಕ ಗೆಲುವು ದಾಖಲಿಸಿದ್ದೇವು. ಅದೇ ಫಲಿತಾಂಶ ಮಸ್ಕಿಯಲ್ಲಿ ಬರಲಿದೆ. ವಾರದ ಹಿಂದೆ ಕಾಂಗ್ರೆಸ್‌ನವರು ತಾವೇ ಗೆದ್ದು ಬಿಟ್ಟಿದ್ದೇವೆ ಎಂಬಂತೆ ಭಾವಿಸಿದ್ದರು. ಈಗ ನೋಡಿ ಕ್ಷೇತ್ರದಲ್ಲಿ ಬಿಜೆಪಿ ಅಲೆ ಎದ್ದಿದೆ. ನಾಲ್ಕೈದು ದಿನಗಳಿಂದ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಯನ್ನು ನೀವು ನೋಡಬಹುದು. ಸುನಾಮಿ ಎದ್ದಿದೆ. ಕಾಂಗ್ರೆಸ್ ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ ಕೊಚ್ಚಿ ಹೋದಂತೆ ಮಸ್ಕಿಯಲ್ಲೂ ಧೂಳೀಪಟವಾಗಲಿದೆ.ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಸಚಿವ ಬೈರತಿ ಬಸವರಾಜ್‌ ಮಾತನಾಡಿ, ಮಸ್ಕಿ ಕ್ಷೇತ್ರಕ್ಕೆ ಬೇಕಾದ ಎಲ್ಲ ಕೆಲಸಗಳನ್ನು ಮಾಡಿಕೊಡಲು ಬಿಜೆಪಿ ಸರಕಾರ ಬದ್ಧವಾಗಿದೆ. ನನ್ನ ಇಲಾಖೆ ಅಲ್ಲ;
ಬೇರೆ ಇಲಾಖೆ ಕೆಲಸಗಳಿದ್ದರೂ ಸುಲಭವಾಗಿ ಆಗಲಿವೆ ಎಂದರು.

ಕಾಂಗ್ರೆಸ್‌ನವರಿಗೆ ನಿದ್ದೆ ಬರುತ್ತಿಲ್ಲ: ಮಾಜಿ ಸಚಿವ ರಾಜುಗೌಡ ಸುರಪುರ ಮಾತನಾಡಿ, ಕಾಂಗ್ರೆಸ್‌ನವರಿಗೆ ಸರಿಯಾಗಿ ನಿದ್ರೆ ಬರುತ್ತಿಲ್ಲ. ಸಿದ್ದರಾಮಯ್ಯ, ಡಿ.ಕೆ.
ಶಿವಕುಮಾರ್‌ ಅವರು ತಡರಾತ್ರಿ ಕೂಡ ವಿಜಯೇಂದ್ರ ಹೆಸರು ಹೇಳುತ್ತಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಬೈರತಿ ಬಸವರಾಜ್‌ ಅಂತಹ ಕೋಟ್ಯಾ ಧೀಶರಿದ್ದಾರೆ. ಅವರನ್ನು ಖರೀದಿಸುವ ಶಕ್ತಿ ಕಾಂಗ್ರೆಸ್‌ ಇದೆಯಾ? ವಿಜಯೇಂದ್ರ ಚಿಂತೆಯಲ್ಲಿರುವ ಕಾಂಗ್ರೆಸ್‌ನವರಿಗೆ ಮೊದಲು ತಾಯತ ಕಟ್ಟಿಸಬೇಕಿದೆ ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮರೇಗೌಡ ವಿರೂಪಾಪುರ ಮಾತನಾಡಿದರು. ಸಂಸದ ಸಂಗಣ್ಣ ಕರಡಿ, ಶಾಸಕ ಹಾಲಪ್ಪ ಆಚಾರ್‌, ಮಸ್ಕಿ ಮಂಡಲ
ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ್‌, ಪ್ರಸನ್ನ ಪಾಟೀಲ್‌, ವಿಶ್ವನಾಥ ತೋರಣದಿನ್ನಿ, ವೀರೇಶ ಸಾಲೋನಿ,
ಮಂಜುನಾಥ ಸಾಹುಕಾರ್‌ ಕುರುಕುಂದಾ ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.