ಬೇಸಿಗೆಯಲ್ಲಿ ನೀಗದ ಜನರ ಜಲದಾಹ!


Team Udayavani, Apr 24, 2021, 3:05 PM IST

You have the summer water!

ದೇವದುರ್ಗ: ತಾಲೂಕು ಕೃಷ್ಣಾ ನದಿ ದಂಡೆಗೆಹೊಂದಿಕೊಂಡಿದ್ದರೂ ಬೇಸಿಗೆಯಲ್ಲಿ ಜನ-ಜಾನುವಾರು ಜಲದಾಹಕ್ಕೆ ಮುಕ್ತಿ ಸಿಕ್ಕಿಲ್ಲ. ಇನ್ನೊಂದೆಡೆನಾರಾಯಣಪುರ ಬಲದಂಡೆ ನಾಲೆ ವರ್ಷದ8 ತಿಂಗಳು ಹರಿದರೂ ಕುಡಿಯುವ ನೀರಿಗೆ ತತ್ವಾರತಪ್ಪಿಲ್ಲ.

ಬೇಸಿಗೆ ಬಂದರೆ ಸಾಕು ತಾಲೂಕಿನ 40ಕ್ಕೂಹೆಚ್ಚು ಹಳ್ಳಿ, ದೊಡ್ಡಿ, ತಾಂಡಾಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಎದುರಾಗುತ್ತಿದೆ. ಎನ್‌ಆರ್‌ಬಿ ನಾಲೆ ಕೊನೆ ಭಾಗ, ಗುಡ್ಡಗಾಡು ಪ್ರದೇಶ,ರಸ್ತೆ ಸಂಚಾರವಿಲ್ಲದ ತಾಂಡಾ, ದೊಡ್ಡಿಗಳಲ್ಲಿನೀರಿನ ಅಭಾವ ದಿನೇ ದಿನೇ ಹೆಚ್ಚಾಗುತ್ತಿದೆ.

ಜನರ ದಾಹ ನೀಗಿಸಲು ತಾಪಂ ಹಾಗೂ ಜಿಪಂಹತ್ತಾರು ಯೋಜನೆಗಳನ್ನು ಜಾರಿಗೆ ತಂದರೂಜನರ ದಾಹ ನೀಗುತ್ತಿಲ್ಲ. ನೀರಿನಂತೆ ಅನುದಾನಖರ್ಚಾದರೂ ಶಾಶ್ವತ ಪರಿಹಾರ ಎನ್ನುವುದುಮರೀಚಿಕೆಯಾಗಿದೆ.ಬಹುಗ್ರಾಮ ಯೋಜನೆ, ಜಲ ನಿರ್ಮಾಲಯೋಜನೆ, ಶುದ್ಧೀಕರಣ ಯೋಜನೆ, ರಾಷ್ಟ್ರೀಯಗ್ರಾಮೀಣ ಕುಡಿವ ನೀರಿನ ಯೋಜನೆ ಸೇರಿವಿವಿಧ ಯೋಜನೆಗಳನ್ನು ಗ್ರಾಪಂ ವ್ಯಾಪ್ತಿಯಲ್ಲಿಜಾರಿಗೊಳಿಸಲಾಗಿದೆ.

ಯೋಜನೆಗೆ ಕೋಟ್ಯಂತರಅನುದಾನ ಖರ್ಚಾದರೂ ನಿರ್ವಹಣೆ ಕೊರತೆಯಿಂದಹಳ್ಳಹಿಡಿದಿವೆ. ತಾಲೂಕಿನ ಸೋಮನಮರಡಿ,ಹೇಮನಾಳ, ಕೋಳ್ಳೂರು, ಊಟಿ, ಸಲಿಕ್ಯಾಪುರ,ಚಿಕ್ಕಬೂದೂರು, ಜೇರಬಂಡಿ, ಹೊಸೂರು ಸಿದ್ದಾಪುರ,ವಂದಲಿ ಸೇರಿ ತಾಂಡಾ, ದೊಡ್ಡಿಗಳಲ್ಲಿ ಕುಡಿವನೀರಿನ ಬವಣೆಯಿದೆ. ಬೇಸಿಗೆ ಬಂದರೆ ಖಾಸಗಿಬೋರ್‌ವೆಲ್‌, ಹಳ್ಳಕೊಳ್ಳ ಅಲೆಯುವಂತಸ್ಥಿತಿಯಿದೆ.ಕೃಷ್ಣಾ ನದಿಯಿಂದಪಟ್ಟಣಕ್ಕೆ 24×7 ನೀರುಒದಗಿಸಲು ಯೋಜನೆಜಾರಿಗೊಳಿಸಿದ್ದರೂ, ಅದರ ಉದ್ದೇಶಸಕರಾತ್ಮಕವಾಗಿ ಈಡೇರಿಲ್ಲ.

ಕೆಲ ವಾರ್ಡ್‌ ಗಳಿಗೆದಿನದಲ್ಲಿ 10-20 ನಿಮಿಷನೀರು ಬಿಟ್ಟರೆ, ಕೆಲವುಕಡೆ ಎರಡೂ ಮೂರುದಿನಕ್ಕೊಮ್ಮೆ ನೀರುಪೂರೈಸಲಾಗುತ್ತಿದೆ.ಹೊಸ ಬಡವಣೆಗಳಿಗೆಕುಡಿವ ನೀರಿನಸೌಲಭ್ಯವೇ ಕಲ್ಪಿಸಿಲ್ಲ. ಪ್ರತಿಮನೆಗೆ ನಲ್ಲಿ, ವಾಟರ್‌ಮೀಟರ್‌ ಅಳವಡಿಕೆಕನಸಾಗಿಯೇ ಉಳಿದಿದೆ.ವಿಷಪೂರಿತ ನೀರಿನಿಂದ ಅನಾರೋಗ್ಯ:ಪರಿಸರ ಅಸಮತೋಲನದಿಂದದಿನೇ-ದಿನೇ ಬೋರ್‌ವೆಲ್‌ ನೀರು ವಿಷವಾಗುತ್ತಿದೆ.ವಂದಲಿ, ಊಟಿ, ಸುಣ್ಣದಕಲ್‌, ಬಿ.ಗಣೇಕಲ್‌,ಸೋಮನಮರಡಿ, ಎಚ್‌.ಸಿದ್ದಾಪುರ ಸೇರಿ20ಕ್ಕೂ ಹೆಚ್ಚು ಗ್ರಾಮಗಳ ಬೋರ್‌ವೆಲ್‌ನಲ್ಲಿಆರ್ಶೇನಿಕ್‌ ಹಾಗೂ ಪ್ಲೋರೈಡ್‌ ನೀರಿನ ಅಂಶಹೆಚ್ಚುತ್ತಿದೆ.

ಈ ಬಗ್ಗೆ ಅ ಧಿಕಾರಿಗಳು ಸರ್ಕಾರಕ್ಕೆಮಾಹಿತಿ ನೀಡಿದ್ದು, ಇದರ ನಿರ್ವಹಣೆಗಾಗಿ ಶುದ್ಧಕುಡಿವ ನೀರಿನ ಯೋಜನೆ ಜಾರಿಗೊಳಿಸಲಾಗಿದೆ.ಹಲವು ಕಡೆ ಯೋಜನೆ ನನೆಗುದಿಗೆಬಿದ್ದಿದ್ದರೆ, ಕೆಲಕಡೆ ನಿರ್ವಹಣೆ ಕೊರತೆಯಿಂದಮೂಲೆ ಸೇರಿವೆ.

ಬೆರಳೆಣಿಕೆ ಪ್ಲಾಂಟ್‌ಗಳು ಮಾತ್ರಕಾರ್ಯನಿರ್ವಹಿಸುತ್ತಿವೆ. ಜನರು ಅನಿವಾರ್ಯವಾಗಿಅರ್ಶೇನಿಕ ಹಾಗೂ ಪ್ಲೋರೈಡ್‌ಯುಕ್ತ ನೀರುಕುಡಿಯುತ್ತಿದ್ದಾರೆ. ಮೊಣಕಾಲು ನೋವು, ಕೀಲುಬೇನೆ, ಕಂದು ಹಲ್ಲಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಹ‌ಳ್ಳಹಿಡಿದ ಯೋಜನೆಗಳು

ಕುಡಿವ ನೀರಿನ ಬವಣೆ ನೀಗಿಸಲು ತಾಲೂಕಿನಲ್ಲಿ 30 ಜಲ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ.ಅದರಲ್ಲಿ 17 ಪ್ಲಾಂಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, 13 ಘಟಕಗಳು ನಿರ್ವಹಣೆ ಕೊರತೆಯಿಂದನಿರುಪಯುಕ್ತವಾಗಿವೆ.

ಸುಮಾರು 20ಕ್ಕೂ ಹೆಚ್ಚು ಪ್ಲಾಂಟ್‌ಗಳು ಅರೆಬರೆಯಾಗಿವೆ. ಹೊಸ ಪ್ಲಾಂಟ್‌ಗಳಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದರೂ ಸಂಬಂ ಧಿಸಿದ ಇಲಾಖೆಯಿಂದ ಅನುಮೋದನೆ ದೊರತಿಲ್ಲ.ಆಲ್ಕೋಡ್‌, ಭೂಮನಗುಂಡ, ಕುರ್ಕಿಹಳ್ಳಿ, ಮಾನಸಗಲ್‌, ನೀಲವಂಜಿ, ಸೂಗರಾಳ, ಗಣಜಲಿಗ್ರಾಮಗಳಲ್ಲಿ ಆರ್‌ಒ ಪ್ಲಾಂಟ್‌ ನಿರುಪಯುಕ್ತವಾಗಿವೆ. ಕೊತ್ತದೊಡ್ಡಿ ಗ್ರಾಪಂನ ಹಳ್ಳಿಗಳಿಗೆ ಶಾಶ್ವತಕುಡಿವ ನೀರು ಕಲ್ಪಿಸಲು 4.60 ಕೋಟಿ ರೂ. ವೆಚ್ಚದ ಯೋಜನೆ ಹಳ್ಳ ಹಿಡಿದಿದೆ. ಇದರಿಂದಯಮನೂರು, ಎಲ್‌.ದೊಡ್ಡಿ, ಲಿಂಗನದೊಡ್ಡಿ, ಮಲ್ಲೇನಾಯಕದೊಡ್ಡಿ, ಕರಡೋಣಿಯಲ್ಲಿನೀರಿನ ಸಮಸ್ಯೆಯಿದೆ.

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.