ಕೊಳಂಕಿಗೆ ಸದ್ಭಾವನಾ ಪಾದಯಾತ್ರೆ
Team Udayavani, Sep 9, 2019, 7:39 PM IST
ರಾಯಚೂರು: ಜೀವೈಕ್ಯ ಕೊಳಂಕಿ ಗುರುಪಾದ ಶಿವಯೋಗಿ ಶಿವಾಚಾರ್ಯರ 968ನೇ ವರ್ಷದ ಜಯಂತಿಯ ಪರ್ವು ಸಮಾರಾಧನೆ ಪ್ರಯುಕ್ತ ನಗರದ ಕಿಲ್ಲೇ ಬೃಹನ್ಮಠದಿಂದ ಕೊಳಂಕಿಯವರೆಗೆ ಹಮ್ಮಿಕೊಂಡ 13ನೇ ವರ್ಷದ ಸದ್ಭಾವನಾ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ರಾಯಚೂರು: ಜೀವೈಕ್ಯ ಕೊಳಂಕಿ ಗುರುಪಾದ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳ 968ನೇ ವರ್ಷದ ಜಯಂತಿಯ ಪರ್ವು ಸಮಾರಾಧನೆ ಅಂಗವಾಗಿ ನಗರದ ಕಿಲ್ಲೇ ಬೃಹನ್ಮಠದಿಂದ ಕೊಳಂಕಿಯವರೆಗೆ ಹಮ್ಮಿಕೊಂಡ13ನೇ ವರ್ಷದ ಸದ್ಭಾವನಾ ಪಾದಯಾತ್ರೆಗೆ ಉತ್ತರಾಖಂಡ ರಾಜ್ಯದ ಊಖೀ ಮಠದ ಜಗದ್ಗುರು ಕೇದಾರನಾಥ ರಾವಲ್ ಭೀಮಾ ಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ರವಿವಾರ ಚಾಲನೆ ನೀಡಿದರು.
ತನ್ನಿಮಿತ್ತ ನಗರದ ಕಿಲ್ಲೇ ಬೃಹನ್ಮಠದಲ್ಲಿ ರವಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದ ನಂತರ ಸದ್ಭಾವನಾ ಪಾದಯಾತ್ರೆಗೆ ಶ್ರೀಗಳು ಚಾಲನೆ ನೀಡಿದರು. ಅದಕ್ಕೂ ಮುನ್ನ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು. ಜಗದ್ಗುರುಗಳಿಂದ ಶಾಸಕರು, ಮುಖಂಡರು, ಭಕ್ತರು ಆಶೀರ್ವಾದ ಪಡೆದರು. ಶ್ರೀಮಠದಿಂದ ಕೊಳಂಕಿವರೆಗೆ ಸಾಗುವ ಸದ್ಭಾವನಾ ಪಾದಯಾತ್ರೆಯಲ್ಲಿ ಸಾರೋಟಿನಲ್ಲಿ ಕುಳಿತ ಜಗದ್ಗುರುಗಳ ಸಾನಿಧ್ಯದಲ್ಲಿ ಮೆರವಣಿಗೆ ಜರುಗಿತು.
ಕಿಲ್ಲೇ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಪ್ರಕಾಶ ಸ್ವಾಮೀಜಿ, ಶ್ರೀ ಕಲ್ಯಾಣ ಸ್ವಾಮೀಜಿ, ಶ್ರೀ ಗುರುಲಿಂಗ ಸ್ವಾಮೀಜಿ, ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಶಾಸಕರಾದ ಡಾ| ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಮುಖಂಡರಾದ ಬಸವನಗೌಡ ಬ್ಯಾಗವಾಟ, ತ್ರಿವಿಕ್ರಮ ಜೋಶಿ ಇತರರು ಇದ್ದರು.
ರಾಜಕೀಯ ಬೇಡ: ಮಠಾಧೀಶರು ರಾಜಕೀಯ ಮಾಡದೇ ಧರ್ಮ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಉತ್ತರಾಖಂಡ ರಾಜ್ಯ ಊಖೀ ಮಠದ ಜಗದ್ಗುರು ಕೇದಾರನಾಥ ರಾವಲ್ ಭೀಮಾ ಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…