ಹೊಸ ತಾಲೂಕಾದರೂ ತಪ್ಪದ ತಾಪತ್ರಯ

ಸಿರವಾರ ಕಟ್ಟಡದ್ದೇ ಚಿಂತೆ: ಬಾರದ ಅನುದಾನಬರೀ ಘೋಷಣೆಗೆ ಅಭಿವೃದ್ಧಿ ಸೀಮಿತಹಳೇ ತಾಲೂಕುಗಳಿಗೆ ಪೀಕಲಾಟ

Team Udayavani, Sep 28, 2019, 12:14 PM IST

28-Sepctember-7

ಮಹೇಶ ಪಾಟೀಲ
ರಾಯಚೂರು (ಸಿರವಾರ): ಕಳೆದೆರಡು ವರ್ಷಗಳ ಹಿಂದೆ ಕಾಂಗ್ರೆಸ್‌ ಸರ್ಕಾರ ಘೋಷಿಸಿದ್ದ ಹೊಸ ತಾಲೂಕುಗಳ ಸಾಲಿನಲ್ಲಿ ಜಿಲ್ಲೆಯ ಸಿರವಾರ ಕೂಡಾ ಇದೆ.

ತಾಲೂಕು ರಚನೆಯಾದಾಗ ಆ ಭಾಗದ ಜನರಲ್ಲಿ ಎಷ್ಟು ಖುಷಿಯಾಗಿತ್ತೋ ಈಗ ಅಷ್ಟೇ ಬೇಸರವೂ ಆವರಿಸಿದೆ.

ಸರ್ಕಾರ ನೂತನ ಸಿರವಾರ ತಾಲೂಕಿಗೆ ಅಗತ್ಯ ಹಣಕಾಸಿನ ನೆರವು ನೀಡಿಲ್ಲ. ನಾನಾ ಸಂಕಷ್ಟಗಳ ಮಧ್ಯೆ ಆಡಳಿತ ನಡೆಯುತ್ತಿದೆ.

2017ರ ಜುಲೈನಲ್ಲಿ ತಾಲೂಕು ಘೋಷಣೆಯಾಗಿದ್ದು, 2018ರ ಜನವರಿಯಲ್ಲಿ ಅಧಿಕೃತವಾಗಿ ಅನುಷ್ಠಾನಕ್ಕೆ ತರಲಾಯಿತು. ಆದರೆ, ತಹಶೀಲ್ದಾರ್‌ ಒಬ್ಬರನ್ನು ಬಿಟ್ಟರೆ ಮತ್ಯಾವುದೇ ಇಲಾಖೆಗಳಿಗೆ ಕಾಯಂ ಅಧಿಕಾರಿಗಳಿಲ್ಲ.

ಆಡಳಿತಾತ್ಮಕವಾಗಿ ಈ ಹಿಂದೆ ಹೇಗೆ ಜನ ದೂರದ ತಾಲೂಕಿಗೆ ಹೋಗಬೇಕಿತ್ತೋ ಈಗಲೂ ಅದೇ ಸನ್ನಿವೇಶ ಮುಂದುವರಿದಿದೆ. ಇದರಿಂದ ಹೊಸ ತಾಲೂಕು ಮಾಡಿದ್ದಾದರೂ ಏಕೆ ಎಂಬ ಪ್ರಶ್ನೆ ಜನರದ್ದು.

ಕಟ್ಟಡದ್ದೇ ಚಿಂತೆ: ಸಿರವಾರ ತಾಲೂಕು ಕೇಂದ್ರವಾಗಿ
ಮೇಲ್ದರ್ಜೆಗೇರಿದರೂ ತಹಶೀಲ್‌ ಕಚೇರಿಗೆ ಇಂದಿಗೂ
ಸ್ಥಳಾಭಾವ ನೀಗಿಲ್ಲ. ಹಿಂದಿನ ನಾಡ ಕಚೇರಿಯ ಶಿಥಿಲಾವಸ್ಥೆ ಕಟ್ಟಡದಲ್ಲೇ ಹೊಸ ತಾಲೂಕು ಕಾರ್ಯ ಕಲಾಪಗಳು ನಡೆಯುತ್ತಿವೆ. ಹೊಸ ತಾಲೂಕು ವ್ಯಾಪ್ತಿಗೆ 12 ಗ್ರಾಮ ಪಂಚಾಯಿತಿಗಳು, 2 ಜಿಪಂ ಕ್ಷೇತ್ರಗಳು ಮತ್ತು 59 ಗ್ರಾಮಗಳು ಒಳಗೊಂಡಿವೆ. ತಹಶೀಲ್ದಾರ ಹೊರತುಪಡಿಸಿ ಇನ್ಯಾವುದೇ ಇಲಾಖೆಗೆ ಕಾಯಂ ಅಧಿಕಾರಿಗಳನ್ನು ನಿಯೋಜಿಸಿಲ್ಲ. ಹೀಗಾಗಿ ತಾಲೂಕು ಕೇಂದ್ರ ಘೋಷಣೆಗೂ ಮುನ್ನ ಹೇಗೆ ಕೆಲಸ ಕಾರ್ಯ ನಡೆದಿದ್ದವೋ ಇಂದಿಗೂ ಅದೇ ಮಾದರಿ ಮುಂದುವರಿದಿದೆ. ಹೊಸ ತಾಲೂಕು ಘೋಷಣೆಯ ಬಳಿಕ ಪಟ್ಟಣದಲ್ಲಿ ಸರ್ಕಾರದ ಎಲ್ಲ ಸೇವೆಗಳು ಸಿಗುತ್ತವೆ. ಪಟ್ಟಣವು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಈಗ ನಿರಾಸೆ ಮೂಡಿದೆ.

ಅನುದಾನವೇ ಬಂದಿಲ್ಲ: ರಾಜ್ಯ ಸರ್ಕಾರ ಹೊಸ ತಾಲೂಕುಗಳನ್ನು ಘೋಷಿಸಿ, ಪ್ರತಿ ತಾಲೂಕಿಗೆ 2 ಕೋಟಿ ಅನುದಾನ ನೀಡುವುದಾಗಿ ತಿಳಿಸಿತ್ತು. ಆದರೆ, ಈವರೆಗೂ ಸಿರವಾರ ತಾಲೂಕಿಗೆ ಬಿಡಿಗಾಸು ಬಂದಿಲ್ಲ. ಅನುದಾನವೇ ಇಲ್ಲ ಎಂದ ಮೇಲೆ ಅಭಿವೃದ್ಧಿ ನಿರೀಕ್ಷಿಸುವುದಾದರೂ ಹೇಗೆ ಎಂಬುದು ತಾಲೂಕು ಹೋರಾಟ ಸಮಿತಿ ಪ್ರಶ್ನೆ. ಸಿರವಾರದಲ್ಲಿ ಈಗ ತಹಶೀಲ್ದಾರ್‌ ಕಚೇರಿ ಬಿಟ್ಟರೆ ಮತ್ಯಾವ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿಲ್ಲ.

ಇನ್ನು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಗೆ ಕಟ್ಟಡಗಳನ್ನು ಮಾತ್ರ ಗುರುತಿಸಿದ್ದು, ಪ್ರಭಾರ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹೀಗಾಗಿ ಜನ ವಿಧಿ ಇಲ್ಲದೇ ಮುಂಚಿನಂತೆ ಪ್ರತಿಯೊಂದಕ್ಕೂ ಮಾನ್ವಿಗೆ ಓಡಾಡಬೇಕಿದೆ.

ಕಟ್ಟಡಗಳ ಕೊರತೆ: ನೂತನ ತಾಲೂಕಿನಲ್ಲಿ ಅನೇಕ
ಇಲಾಖೆಗಳು ಕಟ್ಟಡದ ಕೊರತೆಯಿಂದ ಸೇವೆ ಆರಂಭಿಸದೇ ಹಾಗೆಯೇ ಉಳಿದಿವೆ. ತಹಶೀಲ್ದಾರ್‌ ಕಚೇರಿ ಪ್ರಸ್ತುತ ಹಳೆ ಕಟ್ಟಡದಲ್ಲಿ ನಡೆಯುತ್ತಿದ್ದು, ಅದರಲ್ಲಿ ತಹಶೀಲ್ದಾರ್‌ ಹಾಗೂ ಸಿಬ್ಬಂದಿಗೆ ಸ್ಥಳಾಭಾವವಿದೆ. ಈಗಾಗಲೇ ತಹಶೀಲ್‌ ಕಚೇರಿ ನಿರ್ಮಿಸಲು 8 ಎಕರೆ ಸ್ಥಳ ಗುರುತಿಸಿದ್ದು, ಅನುದಾನ
ಬಿಡುಗಡೆಗಾಗಿ ಕಾದು ಕೂರುವಂತಾಗಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.