ಕೃಷಿ ಮೇಳದ ಆಕರ್ಷಣೆ ಜಫರದಾರಿ, ಮುರ್ರಾ ಎಮ್ಮೆ


Team Udayavani, Dec 16, 2019, 10:40 AM IST

16-December-1

„ಸಿದ್ಧಯ್ಯಸ್ವಾಮಿ ಕುಕನೂರು
ರಾಯಚೂರು:
ಹೈನುಗಾರಿಕೆ ಈಗ ಲಾಭದಾಯಕ ವಲಯ. ಆದರೆ, ಅದನ್ನು ಮಾಡುವುದು ಕಷ್ಟದ ಕೆಲಸ. ಆದರೆ, ಇಲ್ಲೊಬ್ಬ ರೈತ ಜಫರದಾರಿ ತಳಿಗಳ ಎಮ್ಮೆಗಳನ್ನು ಸಾಕುವ ಮೂಲಕ ಭರ್ಜರಿ ಲಾಭದ ಸವಿ ಉಣ್ಣುತ್ತಿದ್ದಾನೆ. ಈ ಬಾರಿ ರಾಯಚೂರು ಕೃಷಿ ವಿವಿ ಮೇಳದ ಆಕರ್ಷಣೆಗಳಲ್ಲಿ ಜಫರದಾರಿ, ಮುರ್ರಾ ಎಮ್ಮೆಗಳು ಕೂಡ ಒಂದು. ಮಾನ್ವಿ ತಾಲೂಕಿನ ಕೊರವಿ ಗ್ರಾಮದ ಜನಾರ್ದನ ಕಳೆದ 20 ವರ್ಷಗಳಿಂದ ಈ ಹೈನುಗಾರಿಕೆಯಲ್ಲಿ ತೊಡಗಿದ್ದು, ಭಾರೀ ಗಾತ್ರದ ಈ ಎಮ್ಮೆಗಳನ್ನು ಸಾಕಿಕೊಂಡಿದ್ದಾರೆ. ಜಫರದಾರಿ ತಳಿಗಳು ಕನಿಷ್ಠ 20 ಸೂಲುಗಳನ್ನು ನೀಡುತ್ತಿದ್ದು, ರೈತರಿಗೆ ಇದರಿಂದ ನಷ್ಟದ ಮಾತೇ ಇಲ್ಲ ಎನ್ನುತ್ತಾರೆ ಜನಾರ್ದನ. ಆದರೆ, ನಿರ್ವಹಣೆ ಕೂಡ ಅಷ್ಟೇ ಪ್ರಮಾಣದ್ದಾಗಿರುತ್ತದೆ.

ದಿನಕ್ಕೆ 25 ಲೀಟರ್‌ ಹಾಲು: ಈ ಎಮ್ಮೆಗಳು ನಿತ್ಯ ಕನಿಷ್ಠ 25 ಲೀಟರ್‌ ಹಾಲು ನೀಡುತ್ತಿದ್ದು, ರೈತರಿಗೆ ಲಾಭ ಖಚಿತ. ಸುಮಾರು 20 ಎಮ್ಮೆಗಳನ್ನು ಸಾಕಿರುವ ಜನಾರ್ದನ ನಿತ್ಯ ಏನಿಲ್ಲವೆಂದರೂ 120 ಲೀಟರ್‌ಗಿಂತ ಅಧಿ ಕ ಹಾಲು ಮಾರಾಟ ಮಾಡುತ್ತಾರೆ. ಸ್ಥಳೀಯವಾಗಿರುವ ಡೈರಿಗೆ ಹಾಲು ಸರಬರಾಜು ಮಾಡುತ್ತಾರೆ. ವರ್ಷಕ್ಕೆ ಏನಿಲ್ಲವೆಂದರೂ ಒಂದು ಎಮ್ಮೆಯಿಂದ ಒಂದೂವರೆ ಲಕ್ಷ ರೂ. ಆದಾಯ ನಿರೀಕ್ಷೆಯಿದೆ.

ಉತ್ತಮ ಆಹಾರ: ಈ ಎಮ್ಮೆಗಳು ನೋಡಲು ಭಾರೀ ಗಾತ್ರದಲ್ಲಿವೆ. ಸಾಮಾನ್ಯ ಎಮ್ಮೆಗಳಂತಿರದೆ ತುಸು ಭಿನ್ನವಾಗಿ ಕಾಣಿಸುತ್ತವೆ. ಅವುಗಳ ಗಾತ್ರಕ್ಕೆ ತಕ್ಕಂತೆ ಆಹಾರ ಕೂಡ ಹೆಚ್ಚಾಗಿಯೇ ಬೇಕು. ಈ ಎಮ್ಮೆಗಳಿಗಾಗಿ ಜನಾರ್ಧನ ಮೂರು ಎಕರೆ ಪ್ರದೇಶದಲ್ಲಿ ಬರೀ ಹಸಿ ಹುಲ್ಲು ಬೆಳೆಸುತ್ತಿದ್ದಾರೆ. ಅವು ಎಷ್ಟು ತಿಂದಷ್ಟು ಹಾಲು ಉತ್ಪಾದನೆ ಜಾಸ್ತಿ ಎನ್ನುವ ಕಾರಣಕ್ಕೆ ಉತ್ತಮವಾಗಿ ಮೇಯಿಸಲಾಗುತ್ತದೆ. ಒಂದು ಎಮ್ಮೆಗೆ ಏನಿಲ್ಲವೆಂದರೂ ದಿನಕ್ಕೆ 10 ಕೆಜಿ ಆಹಾರ ಬೇಕು. ಒಣಹುಲ್ಲಿನ ಜತೆಗೆ ಹತ್ತಿ ಕಾಳು, ತೊಗರಿ ಚೆನ್ನಿ, ಗೋದಿ  ಹೊಟ್ಟು, ಸಜ್ಜೆ ಕುದಿಸಿ ತಿನ್ನಿಸಲಾಗುತ್ತದೆ. ಹೀಗಾಗಿ ಅವುಗಳ ನಿರ್ವಹಣೆ ಕೂಡ ತುಸು ದುಬಾರಿಯೇ ಎನ್ನುತ್ತಾರೆ ಅವರು.

ಭಾರೀ ಬೇಡಿಕೆ: ಜಫರದಾರಿ ಹಾಗೂ ಮುರ್ರಾ ತಳಿಗಳು ನೋಡಲು ಒಂದೇ ತರಹವಿದ್ದರೂ ಕೋಡುಗಳು ಭಿನ್ನವಾಗಿರುತ್ತವೆ. ಜಫರದಾರಿ ಎಮ್ಮೆಗೆ ಮುರ್ರಾ ಕೋಣದಿಂದ ಕ್ರಾಸ್‌ ಮಾಡಿದ್ದರಿಂದ ಸಾಕಷ್ಟು ಎಮ್ಮೆಗಳು ಜನಿಸಿದ್ದು, ಒಂದು ವರ್ಷದ ಎಮ್ಮೆ ಕರುಗಳಿಗೆ 30-40 ಸಾವಿರ ರೂ. ಬೆಲೆ ಸಿಗುತ್ತದೆ. ಅಲ್ಲದೇ, ಐದಾರು ಸೂಲು ಹಾಕಿದ ಎಮ್ಮೆಗಳಾದರೂ ಏನಿಲ್ಲವೆಂದರೂ 10-12 ಲಕ್ಷ ರೂ. ದರಕ್ಕೆ ಮಾರಾಟವಾಗುತ್ತದೆ. ಆಂಧ್ರ, ತೆಲಂಗಾಣದ ಭಾಗದ ರೈತರು ಹೆಚ್ಚಾಗಿ ಬಂದು ಖರೀದಿಸುತ್ತಾರೆ. ಈ ಎಮ್ಮೆಗಳು ಹೆಚ್ಚು ಸೂಲುಗಳನ್ನು ಹಾಕುವುದರಿಂದ ಬೇಡಿಕೆ ಹೆಚ್ಚಾಗಿರುತ್ತದೆ.

ಈಗಾಗಲೇ ಆಂಧ್ರ, ಸಿಂಧನೂರಿನಲ್ಲಿ ನಡೆದ ಪ್ರದರ್ಶನಗಳಲ್ಲಿ ಈ ಎಮ್ಮೆಗಳು ಪ್ರಶಸ್ತಿಯನ್ನು ಬಾಚಿಕೊಂಡಿವೆ. ಮೇಳಕ್ಕೆ ಬಂದವರೆಲ್ಲ ಈ ಎಮ್ಮೆಗಳನ್ನು ಕಂಡು ನಿಬ್ಬೆರಗಾಗುವುದು ಸಹಜ ಎನ್ನುವಂತಾಗಿದೆ. ಅದರ ಜತೆಗೆ ಜನಾರ್ದನ ಅವರಿಂದ ಮಾಹಿತಿ ಪಡೆದು, ಅವರ ಮೊಬೈಲ್‌ ಸಂಖ್ಯೆಯನ್ನು ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ಬೇಕಾದವರು ಜನಾರ್ದನ ಅವರ ಮೊ.ಸಂಖ್ಯೆ 8884706576ಕ್ಕೆ ಕರೆ ಮಾಡಬಹುದು.

ಎಮ್ಮೆಗಳ ಹಾಲು ಮಾರಾಟದಿಂದ ಬರುವ ಆದಾಯವನ್ನು ಅವುಗಳ ನಿರ್ವಹಣೆಗೆ ಖರ್ಚು ಮಾಡುತ್ತಿದ್ದೇನೆ. ಪ್ರತಿ ವರ್ಷ ನಾಲ್ಕಾರು ಕರುಗಳು ಜನಿಸುತ್ತವೆ. ಅವುಗಳನ್ನೇ ಆಂಧ್ರ, ತೆಲಂಗಾಣ ಭಾಗದ ರೈತರು ದುಬಾರಿ ಬೆಲೆಗೆ ಖರೀದಿ ಮಾಡಿಕೊಂಡು ಹೋಗುತ್ತಾರೆ. ಇದರಿಂದ ನನಗೆ ಲಕ್ಷಾಂತರ ರೂ. ಆದಾಯ ಬರುತ್ತಿದೆ.
.ಜನಾರ್ದನ,
ಜಫರದಾರಿ ಎಮ್ಮೆ ಸಾಕಣೆಕಾರ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.