ಬಾಕಿ ಪ್ರೋತ್ಸಾಹಧನ ಪಾವತಿಸಿ
ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಆಗ್ರಹ • ವಿವಿಧ ಸರ್ವೇ ಕಾರ್ಯಕ್ಕೆ ದಿನಕ್ಕೆ 300 ರೂ. ಕೊಡಿ
Team Udayavani, May 31, 2019, 4:59 PM IST
ರಾಯಚೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ರಾಯಚೂರು: ಎಂಟು ತಿಂಗಳಿಂದ ಬಾಕಿ ಇರುವ ಎಸಿಟಿಎಸ್ ಸೇವೆಗಳ ಪ್ರೋತ್ಸಾಹ ಧನ ಸೇರಿ ಬಾಕಿ ಪ್ರೋತ್ಸಾಹಧನಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತಾ ಆಶಾ ಕಾರ್ಯಕರ್ತೆಯರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಳಿಕ ಜಿಲ್ಲಾಮಟ್ಟದ ಅಧಿಕಾರಿ ಮೂಲಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. 3-4 ತಿಂಗಳ ಫಿಕ್ಸ್ ಪೇಮೆಂಟ್ ಜಾರಿಗೊಳಿಸದೆ ಸತಾಯಿಸಲಾಗುತ್ತಿದೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸಾಕಷ್ಟು ಮಹತ್ತರ ಕಾರ್ಯಕ್ರಮಗಳಲ್ಲಿ ಆಶಾ ಕಾರ್ಯಕರ್ತರ ಪಾತ್ರ ಬಹಳ ಮುಖ್ಯವಾಗಿದೆ. ಆದರೆ, ಸೌಲಭ್ಯದ ವಿಚಾರದಲ್ಲಿ ಅವರನ್ನು ಸದಾ ಕಡೆಗಣಿಸಲಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸುತ್ತಲೇ ಬರಲಾಗಿದೆ ಎಂದು ತಿಳಿಸಿದರು.
ಕಳೆದ 2-3 ತಿಂಗಳಿಂದ ಹೊಸ ರೀತಿಯ ವೇತನ ವಿಧಾನ ಪದೇಪದೆ ಬದಲಿಸುತ್ತಿರುವುದು, ಆಶಾ ಕಾರ್ಯಕರ್ತೆಯರ ಮೇಲೆ ಗದಾ ಪ್ರಹಾರ ಮಾಡಿದಂತಾಗುತ್ತಿದೆ. ಹೊಸ ಯೋಜನೆಗಳನ್ನು ಜಾರಿ ಮಾಡುವಾಗ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಆಶಾ ಕಾರ್ಯಕರ್ತೆಯರು ಅನಗತ್ಯ ಗೊಂದಲಕ್ಕೆ ಸಿಲುಕುವಂತಾಗುತ್ತದೆ ಎಂದು ದೂರಿದರು.
ಮಾಸಿಕ 3 ಸಾವಿರ ರೂ.ದಂತೆ ಎಂಟು ತಿಂಗಳ ಎಸಿಟಿಎಸ್ ಪ್ರೋತ್ಸಾಹಧನವನ್ನು ಕೂಡಲೇ ಪಾವತಿಸಬೇಕು. ಆಶಾ ಕಾರ್ಯಕರ್ತೆಯರು ಎಷ್ಟು ಕೆಲಸ ಮಾಡುವರೊ ಅಷ್ಟು ವೇತನ ಜಾರಿಗೊಳಿಸಬೇಕು. ಲಾರ್ವಾ ಸೇರಿ ವಿವಿಧ ಸರ್ವೆಗಳ ಕಾರ್ಯಕ್ಕೆ ಪ್ರತಿ ದಿನಕ್ಕೆ 300 ರೂ. ನಿಗದಿ ಮಾಡಬೇಕು. ಈ ಹಿಂದೆ ಭರವಸೆ ನೀಡಿದಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಕಷ್ಟಕಾಲದಲ್ಲಿ ನೆರವಾಗಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ವೀರೇಶ ಎನ್.ಎಸ್., ಜಿಲ್ಲಾ ಕಾರ್ಯದರ್ಶಿ ಈರಮ್ಮ, ತಾಲೂಕು ಗೌರವಾಧ್ಯಕ್ಷ ಮಹೇಶ, ಲಕ್ಷ್ಮೀ, ಮಂಜುಳಾ, ಪ್ರಭಾವತಿ, ಮಲ್ಲಮ್ಮ ಸೇರಿ ಅನೇಕ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು