ಅಕ್ಷರಗಳಿಗಿಂತ ವ್ಯಂಗ್ಯಚಿತ್ರ ಪ್ರಭಾವಶಾಲಿ
Team Udayavani, Nov 18, 2019, 6:30 PM IST
ರಾಯಚೂರು: ವ್ಯಂಗ್ಯಚಿತ್ರಗಳು ಅಕ್ಷರಗಳಿಗಿಂತ ಪ್ರಭಾವಶಾಲಿ. ಸಾವಿರಾರು ಪದಗಳು ಹೇಳುವ ವಿಚಾರವನ್ನು ಒಂದು ವ್ಯಂಗ್ಯಚಿತ್ರ ಪರಿಣಾಮಕಾರಿಯಾಗಿ ಹೇಳಬಲ್ಲದು ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡ ವ್ಯಂಗ್ಯಚಿತ್ರಕಾರ ಈರಣ್ಣ ಬೆಂಗಾಲಿ ಅವರ ವ್ಯಂಗ್ಯಚಿತ್ರಗಳ ಪ್ರದರ್ಶನ ಮತ್ತು ಬೆಂಗಾಲಿ ರೇಖೆಗಳು ವ್ಯಂಗ್ಯಚಿತ್ರ ಸಂಕಲನ ಕೃತಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಸ್ಯೆಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ವ್ಯಂಗ್ಯಚಿತ್ರ ಹೆಚ್ಚು ಪರಿಣಾಮಕಾರಿಯಾಗಬಲ್ಲವು. ಅಂಥ ಕಲೆಯನ್ನು ಕರಗತ ಮಾಡಿಕೊಂಡ ಈರಣ್ಣ ಬೆಂಗಾಲಿ ಸಾಧನೆ ಶ್ಲಾಘನೀಯ ಎಂದು ಬಣ್ಣಿಸಿದರು.
ಬರಹಗಾರರಿಗೆ, ವ್ಯಂಗ್ಯ ಚಿತ್ರಕಲಾವಿದರಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು. ಅವರ ಈ ಸೇವೆಯನ್ನು ಇನ್ನೂ ಹೆಚ್ಚಾಗಿ ಬಳಸಿಕೊಳ್ಳಬೇಕು. ಈ ವಿಚಾರದಲ್ಲಿ ಏನೇ ನೆರವು ಬೇಕಾದರೂ ನೀಡಲು ನಾನು ಸಿದ್ಧ ಎಂದರು. ಕಲಾವಿದ ಎಚ್.ಎಚ್.ಮ್ಯಾದಾರ ಅವರು ಬೆಂಗಾಲಿ ರೇಖೆಗಳು ಕೃತಿ ಲೋಕಾರ್ಪಣೆ ಮಾಡಿದರು. ಮೂರು ದಿನ ನಡೆಯಲಿರುವ ವ್ಯಂಗ್ಯಚಿತ್ರಗಳ ಪ್ರದರ್ಶನಕ್ಕೆ ಲಲಿತಾ ಕಲಾ ಅಕಾಡೆಮಿ ಸದಸ್ಯ ಅನೀಸ್ ಫಾತಿಮಾ ಚಾಲನೆ ನೀಡಿದರು.
ಹೋರಾಟಗಾರರಾದ ಪ್ರಸನ್ನ ಮಂಡಲಗಿರಿ, ಅಂಬಣ್ಣ ಅರೋಲಿ, ಸಾಹಿತಿ ವೀರಹನುಮಾನ, ಡಾ| ರಾಜಾಶ್ರೀ ಕಲ್ಲೂರಕರ್, ದೇವೇಂದ್ರ ಹುಡಾ, ಎಂ.ಯಲ್ಲಪ್ಪ ಮರ್ಚೆಡ್, ಕೊಂಡಾ ವೆಂಕಟೇಶ, ಚಂದ್ರಕಾಂತ, ಗಂಗಾಧರ ಪಳಾರಿಮಠ, ಜಿ.ಸುರೇಶ, ಸೈಯ್ಯದ್ ಹಫಿಜುಲ್ಲಾ ಸೇರಿದಂತೆ ಅನೇಕರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ