ಬರ ಕಾಮಗಾರಿಗೆ ನೀತಿ ಸಂಹಿತೆ ನೆಪ

ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು •ನಗರ-ಗ್ರಾಮೀಣ ಶಾಸಕರ ಬೇಸರ •ತುರ್ತು ಕಾಮಗಾರಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ತಾಕೀತು

Team Udayavani, May 10, 2019, 11:05 AM IST

10-May-7

ರಾಯಚೂರು: ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಜಿಲ್ಲಾಧಿಕಾರಿಗೆ ಬರೆದ ಪತ್ರ.

ರಾಯಚೂರು: ಒಂದೆಡೆ ಭೀಕರ ಬರದಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ, ತುರ್ತು ಕ್ರಮ ಕೈಗೊಳ್ಳಲು ಜನಪ್ರತಿನಿಧಿಗಳಿಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಆದರೆ, ಅಗತ್ಯ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳೇ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಜನಪ್ರತಿನಿಧಿಗಳು ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಜಿಲ್ಲೆಯಲ್ಲಿ ಎರಡು ನದಿಗಳಿದ್ದರೂ ರಾಯಚೂರು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ತಪ್ಪಿಲ್ಲ. ಟಾಸ್ಕ್ಫೋರ್ಸ್‌ ಸಮಿತಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ನಗರ ಮತ್ತು ಗ್ರಾಮೀಣ ಶಾಸಕರು ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರ ಶಾಸಕ ಡಾ| ಶಿವರಾಜ ಪಾಟೀಲ ನಗರಸಭೆ ಸದಸ್ಯರ ನಿಯೋಗದೊಂದಿಗೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ತಾಕೀತು ಮಾಡಿದರೆ, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಜಿಲ್ಲಾಧಿಕಾರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ನೀತಿ ಸಂಹಿತೆ ಇರುವ ಕಾರಣ ಶಾಸಕರಿಗೆ ಟಾಸ್ಕ್ಫೋರ್ಸ್‌ ಸಭೆ ನಡೆಸುವ ಅಧಿಕಾರ ಇಲ್ಲದಾಗಿದೆ. ಆದರೆ, ಇದೇ ನೆಪದಲ್ಲಿ ಅಧಿಕಾರಿಗಳು ತಮಗೆ ಮನಬಂದಂತೆ ವರ್ತಿಸುತ್ತಿದ್ದು, ಎಲ್ಲಿಯೂ ಬರ ನಿವಾರಣೆಗೆ ಕಾಮಗಾರಿಗಳನ್ನು ಸರಿಯಾಗಿ ನಡೆಸುತ್ತಿಲ್ಲ. ಆದರೆ, ಇದ್ಯಾವುದರ ಪರಿವಿಲ್ಲದ ಜನ ಶಾಸಕರು ಬಂದಾಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಜಿಲ್ಲಾಡಳಿತ ಕುಡಿಯುವ ನೀರು, ಮೇವು ಪೂರೈಕೆಗೆ ಕ್ರಮ ಕೈಗೊಂಡಿದೆ ಎಂದು ಹೇಳುತ್ತಿದೆಯಾದರೂ ವಾಸ್ತವದಲ್ಲಿ ಚಿತ್ರಣವೇ ಬೇರೆಯಾಗಿದೆ. ಸಮೀಪದ ತುಂಗಭದ್ರ ಗ್ರಾಮದಲ್ಲಿ ಖಾಸಗಿ ಬೋರ್‌ ಮಾಲೀಕರಿಗೆ ಹಣ ಪಾವತಿಸಿಲ್ಲ ಎಂಬ ಕಾರಣಕ್ಕೆ ಜನರಿಗೆ ನೀರು ನೀಡುವುದನ್ನು ನಿಲ್ಲಿಸಿದ್ದಾರೆ ಎಂಬ ದೂರುಗಳಿವೆ.

ಜಿಲ್ಲಾಡಳಿತ ಕಾಲಕ್ಕೆ ತಕ್ಕಂತೆ ಬರ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿ, ಸಿಬ್ಬಂದಿಗೆ ಸೂಚಿಸಬೇಕು. ಸಭೆ ನಡೆಸಿ ವಾಸ್ತವ ವರದಿ ಪಡೆಯಬೇಕು. ಇದ್ಯಾವುದು ಸರಿಯಾಗಿ ನಡೆಯದ ಕಾರಣಕ್ಕೆ ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಒಂದು ವೇಳೆ ಜಿಲ್ಲಾಧಿಕಾರಿ ಸೂಚಿಸಿದ್ದರೂ ತಳಮಟ್ಟದ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂಬ ಟೀಕೆಗಳಿವೆ.

ನಗರದಲ್ಲೂ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿತ್ತು. ಹೊಸ ಪೈಪ್‌ಲೈನ್‌ ಕೆಲಸ ಮುಗಿದ ಬಳಿಕ ತುಸು ನಿರಾಳವಾಗಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಎಷ್ಟೇ ಬೋರ್‌ಗಳನ್ನು ಕೊರೆದರೂ ನೀರು ಲಭ್ಯವಾಗುತ್ತಿಲ್ಲ. ಇರುವ ಬೋರ್‌ಗಳು ಕೂಡ ಕೈ ಕೊಟ್ಟು ನೀರಿಲ್ಲದ ಸ್ಥಿತಿ ಇದೆ. ಕಿಮೀಗಟ್ಟಲೇ ಸಾಗಿ ಬೈಕ್‌, ಸೈಕಲ್ಗಳ ಮೇಲೆ ಕುಡಿಯುವ ನೀರು ತರುವ ಚಿತ್ರಣ ಸಹಜವಾಗಿದೆ.

ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿಯೇ ಜಿಲ್ಲಾಧಿಕಾರಿ ಅಧಿಕಾರಿಗಳ ಸಭೆ ನಡೆಸಿ ತುರ್ತು ಕ್ರಮಗಳ ನಿರ್ದೇಶನ ನೀಡಿರುವ ಮಾಹಿತಿ ಇದೆ. ಆದರೆ, ನೀತಿ ಸಂಹಿತೆ ನೆಪವೊಡ್ಡಿ ಬರ ಕಾಮಗಾರಿಗಳಿಗೆ ಒತ್ತು ನೀಡದಿರುವ ನಿರ್ಲಕ್ಷ್ಯ ಧೋರಣೆ ಇನ್ನಾದರೂ ಕಡಿಮೆ ಮಾಡುವರೇ ನೋಡಬೇಕು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.