ಪೌರತ್ವ ಕಾಯ್ದೆ -ಎನ್ಆರ್ಸಿಗೆ ವಿರೋಧ
Team Udayavani, Dec 22, 2019, 1:10 PM IST
ರಾಯಚೂರು: ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದರೂ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಸಂಘಟನೆ ಕಾರ್ಯಕರ್ತರು ಶನಿವಾರ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು 15 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಭಗತ್ಸಿಂಗ್ ವೃತ್ತದಲ್ಲಿ ಸಂಘಟನೆ ನೇತೃತ್ವದಲ್ಲಿ ನೂರಾರು ಜನ ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ರಸ್ತೆಗಿಳಿದು ಹೋರಾಟ ಮಾಡಿದರು. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಘೋಷಣೆ ಕೂಗಿದರು. ಕೆಲಕಾಲ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಿಲ್ಲೆಯಲ್ಲಿ ಇಂದು ಕೂಡ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹೋರಾಟ ಮೊಟಕು ಗೊಳಿಸುವಂತೆ ಸೂಚಿಸಿದರು. ಆದರೆ, ಪ್ರತಿಭಟನಾಕಾರರು ಮಾತ್ರ ಪೊಲೀಸರ ಮಾತಿಗೆ ಮನ್ನಣೆ ನೀಡದೆ ಹೋರಾಟ ಮುಂದುವರಿಸಿದರು. ಈ ವೇಳೆ ಬಲವಂತವಾಗಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು.
ಡಿ.19ರಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರತಿಭಟನೆ, ಧರಣಿ ನಡೆಸುವುದು, ಗುಂಪು ಚರ್ಚೆ ನಡೆಸುವುದನ್ನು ನಿಷೇಧಿಸಲಾಗಿದೆ. ಆದರೆ, ಪೊಲೀಸರ ಅನುಮತಿ ಪಡೆಯದೆ ಹೋರಾಟ ನಡೆಸಿದ್ದಕ್ಕಾಗಿ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. 144ಕಲಂ ನಿಷೇಧಾಜ್ಞೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಸದರ್ ಬಜಾರ್ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತದಿಂದ ವ್ಯಾನ್ ಹತ್ತಿಸಿದರು. 15 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 71ರ ಪ್ರಕಾರ ಪ್ರಕರಣ ದಾಖಲಿಸಿಕೊಂಡರು.
ಇದಕ್ಕೂ ಮುನ್ನ ಮಾತನಾಡಿದ ಸಂಘಟನೆ ಮುಖಂಡರು, ದೇಶದಲ್ಲಿ ಒಂದೆಡೆ ಆರ್ಥಿಕ ಬಿಕ್ಕಟ್ಟು ಎದುರಾಗಿ ಯುವಕರಿಗೆ ಕೆಲಸ ಇಲ್ಲದ ಸ್ಥಿತಿ ಎದುರಾಗಿದೆ. ಇಂಥ ವೇಳೆ ಅನಗತ್ಯ ಮಸೂದೆಗಳನ್ನು ಜಾರಿಗೊಳಿಸಿ ದೇಶದಲ್ಲಿ ಅಶಾಂತಿ ನೆಲೆಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡಜನರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ ಎಂದು ದೂರಿದರು.
ಇಂಥ ವೇಳೆ ದೇಶದ ನಾಗರಿಕರು ನೆಮ್ಮದಿಯಿಂದ ಬಾಳಲು ಆಗದಂತ ಕಾನೂನು ಜಾರಿ ಮಾಡುತ್ತಿರುವುದು ಖಂಡನೀಯ. ಇದರಿಂದ ಜನ ಆತಂಕದಲ್ಲೇ ದಿನದೂಡಬೇಕಿದ್ದು, ಕೂಡಲೇ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡರಾದ ಚಂದ್ರಗಿರೀಶ, ಶರಣಪ್ಪ ಉದ್ಬಾಳ, ಎನ್.ಎಸ್.ವೀರೇಶ, ಚನ್ನಬಸವ ಜಾನೇಕಲ್, ಮಹೇಶ, ಪ್ರಮೋದ ಕುಮಾರ, ಮಲ್ಲನಗೌಡ, ಆಂಜನೇಯ, ಸಲೀಂ, ಮಹ್ಮದ್ ಇಕ್ಬಾಲ್, ನಿಸಾರ್ ಅಹ್ಮದ್, ಈಶ್ವರ, ಗಣೇಶ, ಚೋಟುಬಾಯಿ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ