ಬಿತ್ತಿದ ಬೆಳೆ ನಾಶ ಮಾಡಿದ ಅನ್ನದಾತರು

ಸಂಪೂರ್ಣ ಕೈಕೊಟ್ಟ ಮುಂಗಾರು ನಷ್ಟದಿಂದ ಪಾರಾಗಲು ತೊಗರಿ, ಹತ್ತಿ, ಸೂರ್ಯಕಾಂತಿ ಬೆಳೆ ನಾಶ ಮಾಡಿದ್ರು

Team Udayavani, Sep 21, 2019, 12:40 PM IST

21-Sepctember–7

ರಾಯಚೂರು: ತಾಲೂಕಿನ ಗೋನಾಲ ಗ್ರಾಮದ ಸೀಮೆಯಲ್ಲಿ ಬಿತ್ತನೆ ಮಾಡಿದ್ದ ತೊಗರಿ ಬೆಳೆ ನಾಶಪಡಿಸಿದ ರೈತರು.

ಸಿದ್ಧಯ್ಯಸ್ವಾಮಿ ಕುಕುನೂರು
ರಾಯಚೂರು: ಮುಂಗಾರಿನಲ್ಲಿ ಬಿತ್ತನೆ ಮಾಡಿ ವರುಣನ ಬರುವಿಕೆಗೆ ಕಾದು ಸುಸ್ತಾದ ರೈತರು ಕೊನೆಗೆ ಮೊಳಕೆ ಬಂದ ಬೆಳೆಯನ್ನೆಲ್ಲ ನಾಶ ಮಾಡಿದ್ದಾರೆ.

ಒಂದೆರಡು ದಿನದಿಂದ ಸುರಿಯುತ್ತಿರುವ ಮಳೆಯಿಂದ ಹಿಂಗಾರು ಮಳೆಯಾದರೂ ಕೈ
ಹಿಡಿಯುವುದೇ ಎಂಬ ಆಶಾಭಾವದಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ ಶೇ.39ರಷ್ಟು
ಮಳೆ ಕೊರತೆ ಕಾಡುತ್ತಿದೆ. ಮುಂಗಾರು ಆರಂಭದಲ್ಲಿ ಬಿತ್ತನೆ ಮಾಡದಿದ್ದರೂ ಮಧ್ಯಂತರದಲ್ಲಿ ಸುರಿದ ಒಂದೆರಡು ಮಳೆ ನಂಬಿ ರೈತರು ಸಾವಿರಾರು ರೂ. ಖರ್ಚು ಮಾಡಿ ತೊಗರಿ, ಹತ್ತಿ, ಸೂರ್ಯಕಾಂತಿ ಬಿತ್ತನೆ ಮಾಡಿದ್ದರು. ಜಿಲ್ಲೆಯಲ್ಲಿ ಶೇ.70ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಕ್ರಮೇಣ ಬೆಳೆಗೆ ಅಗತ್ಯದಷ್ಟು ಮಳೆ ಬಾರದೆ ಇಳುವರಿ
ಕುಂಠಿತಗೊಂಡಿದೆ. ಬೆಳೆಗಿಂತ ಕಳೆಯೇ ಹೆಚ್ಚಾಗಿ ಬಂದ ಕಾರಣ ರೈತರು ವಿಧಿ  ಇಲ್ಲದೇ ಬೆಳೆ ನಾಶಕ್ಕೆ ಮುಂದಾಗಿದ್ದಾರೆ.

ತಾಲೂಕಿನ ಗೋನಾಲ ಗ್ರಾಮದಲ್ಲಿ ಶೇ.50ರಷ್ಟು ರೈತರು ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಸೂರ್ಯಕಾಂತಿ ನಾಶಪಡಿಸಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲೂ ರೈತರು ಇದೇ ದಾರಿ ಹಿಡಿದಿದ್ದಾರೆ. ಕೆಲವೆಡೆ ಮಾತ್ರ ತುಸು ಮಳೆಯಾಗಿದ್ದು, ಏನಾದರೂ ಆಗಲಿ ಎಂದು ವರುಣ ದೇವನ ಮೇಲೆ ಭಾರ ಹಾಕಿ ಕಾಯುತ್ತಿದ್ದಾರೆ.

ಭಾರಿ ನಷ್ಟದಿಂದ ಪಾರು: ರೈತರು ಎಕರೆಗೆ ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ್ದಾರೆ. ಈವರೆಗೆ ಏನಿಲ್ಲವೆಂದರೂ 10-15 ಸಾವಿರ ರೂ. ಖರ್ಚಾಗಿದೆ. ಇನ್ನು ಮುಂದೆ ಬೆಳೆಗೆ ಕೀಟ ಬಾಧೆ ಎದುರಾಗುವುದರಿಂದ ಕನಿಷ್ಟ ಮೂರು ಬಾರಿ ಕ್ರಿಮಿನಾಶಕ ಸಿಂಪಡಿಸಬೇಕು. ಕಾಲಕಾಲಕ್ಕೆ ಕಳೆ ಕೀಳುವುದು ಸೇರಿದಂತೆ ನಾನಾ ಖರ್ಚುಗಳು ಎದುರಾಗಲಿದೆ. ಆದರೆ, ಇಷ್ಟೆಲ್ಲ ಮಾಡಿದ ರೈತರಿಗೆ ಎಕರೆಗೆ ಏನಿಲ್ಲವೆಂದರೂ 3-4 ಕ್ವಿಂಟಲ್‌ ಇಳುವರಿ ಬರಲೇಬೇಕು. ಆದರೆ, ಆರಂಭದಲ್ಲೇ ಬೆಳವಣಿಗೆ ಕುಂಠಿತವಾಗಿದ್ದು, 1-2 ಕ್ವಿಂಟಲ್‌ ಬಂದರೆ ಹೆಚ್ಚು ಎನ್ನುವಂತಿದೆ. ಮುಂದೆ ಎದುರಾಗುವ ಭಾರೀ ನಷ್ಟದಿಂದ ಪಾರಾಗಲು ರೈತರು ಈಗಲೇ ಬೆಳೆ ನಾಶ ಮಾಡಿ ಸಣ್ಣ ನಷ್ಟ ಎದುರಿಸುತ್ತಿದ್ದಾರೆ. ಟಿಎಲ್‌ಬಿಸಿ, ಎನ್‌ಆರ್‌ಬಿಸಿ ಕೊನೆ ಭಾಗದ ರೈತರದ್ದೂ ಇದೇ ಸಮಸ್ಯೆಯಾಗಿದೆ.

ಹಿಂಗಾರು ಮೇಲೆ ವಿಶ್ವಾಸ: ಎಲ್ಲೆಡೆ ಭಾರೀ ಮಳೆಯಾಗಿ ಜಿಲ್ಲೆಯ ಎರಡು ಜೀವನದಿಗಳಾದ ಕೃಷ್ಣಾ, ತುಂಗಭದ್ರಾಕ್ಕೆ ಪ್ರವಾಹ ಬಂದರೂ ಜಿಲ್ಲೆಯಲ್ಲಿ ಮಾತ್ರ ಮಳೆ ಸುರಿಯಲಿಲ್ಲ. ಬರದ ಛಾಯೆಗೆ ಜಿಲ್ಲೆಯ ರೈತಾಪಿ ಜನ ಕಂಗಾಲಾಗಿದ್ದರು. ಆದರೆ, ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದ್ದು, ಹಿಂಗಾರು ಬಿತ್ತನೆ ಮಾಡುವವರಿಗೆ ತುಸು ನಿರಾಳಭಾವ ಮೂಡಿಸಿದೆ. ಜೋಳ, ಕಡಲೆ, ಮೆಕ್ಕೆಜೋಳ ಸೇರಿ ಇನ್ನಿತರ ಬೆಳೆ ಬೆಳೆಯುವ
ಚಿಂತನೆಯಲ್ಲಿದ್ದಾರೆ.

ಬೆಳೆ ಉಳಿಸಿಕೊಳ್ಳುವ ಸವಾಲು: ಇಷ್ಟು ದಿನ ಮಳೆಯಿಲ್ಲದೇ ಸಮಸ್ಯೆ ಎದುರಿಸಿದ ರೈತರಿಗೆ ಈಗ
ಮತ್ತೂಂದು ರೀತಿಯ ಸಮಸ್ಯೆ ಕಾಡುತ್ತಿದೆ. ಕೆಲವೆಡೆ ಉತ್ತಮ ಇಳುವರಿ ಬಂದಿದ್ದು, ಈಗ ಅಗತ್ಯಕ್ಕಿಂತ ಜಾಸ್ತಿ ಮಳೆ ಸುರಿದರೂ ಬೆಳೆಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಜಾಗೃತಿ ಮೂಡಿಸುತ್ತಿರುವ ಕೃಷಿ ಇಲಾಖೆ, ಜಮೀನುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ.
ಕಾಲಕಾಲಕ್ಕೆ ರೋಗ ನಿರೋಧಕ ಸಿಂಪರಣೆ ಮಾಡುವಂತೆ ಹೇಳುತ್ತಿದೆ. ಇಲ್ಲವಾದರೆ ತೊಗರಿ
ಹೂ ಕೆಂಪಾಗಿ ಉದುರಿ ಹೋದರೆ, ಹತ್ತಿಗೆ ಗುಲಾಬಿ ಕಾಯಿಕೊರಕ ಬಾ ಧಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.