ವಿಘ್ನೇಶ್ವರನಿಗೆ ವಿಜೃಂಭಣೆಯ ವಿದಾಯ

5ನೇ ದಿನ ಜಿಲ್ಲೆಯಲ್ಲಿ 790ಕ್ಕೂ ಅಧಿಕ ಗಣೇಶಗಳ ವಿಸರ್ಜನೆ •ನಿಷೇಧದ ಮಧ್ಯೆಯೂ ಡಿಜೆ ಅಬ್ಬರ •ಕುಣಿದು ಕುಪ್ಪಳಿಸಿದ ಯುವಕರು

Team Udayavani, Sep 8, 2019, 12:00 PM IST

8-Sepctember-8

ರಾಯಚೂರು: ಗಣೇಶ ಚತುರ್ಥಿ ನಿಮಿತ್ತ ಜಿಲ್ಲೆಯಲ್ಲಿ ವಿವಿಧೆಡೆ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಐದನೇ ದಿನವಾದ ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ವಿಸರ್ಜಿಸಲಾಯಿತು. ಸೂಕ್ತ ಪೊಲೀಸ್‌ ಭದ್ರತೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸಡಗರ ಸಂಭ್ರಮದಿಂದ ಗಣೇಶನಿಗೆ ವಿದಾಯ ಹೇಳಲಾಯಿತು.

ಐದನೇ ದಿನ 790ಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ನಗರದ ಬಹುತೇಕ ಗಣೇಶ ಮೂರ್ತಿಗಳನ್ನು ಖಾಸಬಾವಿಯಲ್ಲಿ ವಿಸರ್ಜಿಸಲ್ಪಟ್ಟರೆ, ಗ್ರಾಮೀಣ ಭಾಗದ ಗಣೇಶ ಮೂರ್ತಿಗಳನ್ನು ಕೃಷ್ಣ, ತುಂಗಭದ್ರಾ ನದಿ ಹಾಗೂ ಕೆರೆ ಕಟ್ಟೆಗಳಲ್ಲಿ, ಬಾವಿಗಳಲ್ಲಿ ವಿಸರ್ಜಿಸಲಾಯಿತು. ಶುಕ್ರವಾರ ಸಂಜೆಯಿಂದಲೇ ಅಲಂಕರಿಸಿದ ತೆರೆದ ವಾಹನಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿಕೊಂಡ ಗಣೇಶ ಸಮಿತಿಗಳು; ಡೊಳ್ಳು, ಡ್ರಮ್ಸ್‌, ನಾಸಿಕ್‌ ಡೋಲ್ ಸೇರಿ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ನಡೆಸಿದವು. ಶುಕ್ರವಾರ ರಾತ್ರಿ ಶುರುವಾದ ಮೆರವಣಿಗೆ ಶನಿವಾರ ಮಧ್ಯಾಹ್ನದವರೆಗೂ ನಡೆದಿದ್ದು ವಿಶೇಷವಾಗಿತ್ತು.

3ನೇ ದಿನ 200ಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿತ್ತು. ಐದನೇ ದಿನ ರಾಯಚೂರು ಉಪವಿಭಾಗದಲ್ಲಿ 5 ಅತೀ ಸೂಕ್ಷ್ಮ , 84 ಸೂಕ್ಷ್ಮ ಮತ್ತು 207 ಸಾಧಾರಣ ಸೇರಿ ಒಟ್ಟು 296 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಲಿಂಗಸುಗೂರು ಉಪವಿಭಾಗದಲ್ಲಿ ಲಿಂಗಸುಗೂರು, ದೇವದುರ್ಗ ತಾಲೂಕುಗಳಲ್ಲಿ 6 ಅತೀ ಸೂಕ್ಷ್ಮ , 20 ಸೂಕ್ಷ್ಮ ಮತ್ತು 67 ಸಾಧಾರಣ ಸೇರಿ ಒಟ್ಟು 93 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಇನ್ನು ಸಿಂಧನೂರು ಉಪವಿಭಾಗದಲ್ಲಿ ಸಿಂಧನೂರು, ಮಸ್ಕಿ ತಾಲೂಕುಗಳಲ್ಲಿ 40 ಅತೀ ಸೂಕ್ಷ್ಮ , 115 ಸೂಕ್ಷ್ಮ ಮತ್ತು 246 ಸಾಧಾರಣ ಸೇರಿ ಒಟ್ಟು 401 ವಿನಾಯಕ ಮೂರ್ತಿಗಳನ್ನು ವಿಸರ್ಜಿಸಲಾಯಿತು.

ಕ್ರೇನ್‌ ವ್ಯವಸ್ಥೆ: ಗಣೇಶ ಮೂರ್ತಿಗಳ ವಿಸರ್ಜನೆಗೆ ಕ್ರೇನ್‌ ವ್ಯವಸ್ಥೆ ಮಾಡಲಾಗಿತ್ತು. ಖಾಸಬಾವಿ ಬಳಿ ಒಂದರ ಬಳಿ ಒಂದರಂತೆ ಗಣೇಶ ಮೂರ್ತಿಗಳನ್ನು ಕ್ರೇನ್‌ ಸಹಾಯದಿಂದ ವಿಸರ್ಜಿಸಲಾಯಿತು. ಬಾವಿಗೆ ಇಳಿಯಲು ಯಾರಿಗೂ ಅವಕಾಶ ನೀಡಲಿಲ್ಲ. ಇನ್ನೂ 7, 9 11ನೇ ದಿನ ಕೂಡ ಗಣೇಶಗಳ ವಿಸರ್ಜನೆ ಬಾಕಿ ಇದೆ.

ಬಿಗಿ ಬಂದೋಬಸ್ತ್: ಇನ್ನು ಎಲ್ಲೆಡೆ ಪೊಲೀಸ್‌ ಇಲಾಖೆ ಬಿಗಿ ಬಂದೋಬಸ್ತ್ ಜತೆಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಯಾವುದೇ ಅಹಿತಕರ ಘಟನೆಗೆ ಆಸ್ಪದೆ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಪೊಲೀಸ್‌ ವಾಹನಗಳು ನಿರಂತರವಾಗಿ ಪೆಟ್ರೋಲಿಂಗ್‌ ಮಾಡಿದವು. ಪ್ರತಿಯೊಂದು ಗಣೇಶ ಮೂರ್ತಿಗಳ ಮುಂದೆ ಪೊಲೀಸ್‌ ಪೇದೆ, ಗೃಹರಕ್ಷಕ ದಳ ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಸೂಕ್ಷ ್ಮ ಪ್ರದೇಶದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿತ್ತು. ಇದರ ಜೊತೆಗೆ ಪೊಲೀಸ್‌ ಅಧಿಕಾರಿಗಳು ವಾಹನಗಳಲ್ಲಿ ಇಡೀ ರಾತ್ರಿ ಗಸ್ತು ತಿರುಗುತ್ತಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.