ಗಣತಿ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿ

•ಪ್ರತಿ ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ನವೀಕರಿಸಲು ಸೂಚನೆ

Team Udayavani, Jul 13, 2019, 3:23 PM IST

13-July-32

ರಾಯಚೂರು: ಪಂ| ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಏಳನೇ ಆರ್ಥಿಕ ಜನಗಣತಿ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಸಿದರು.

ರಾಯಚೂರು: ಏಳನೇ ಆರ್ಥಿಕ ಗಣತಿಯಲ್ಲಿ ಸಮಗ್ರ ಮಾಹಿತಿ ದಾಖಲಿಸುವ ಮೂಲಕ ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಏಳನೇ ಆರ್ಥಿಕ ಜನಗಣತಿ-2019ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊದಲ ಹಂತದ ತರಬೇತಿ ಕಾರ್ಯಾಗಾರ ಇದಾಗಿದ್ದು, ಸಿಎಸ್‌ಸಿ ತರಬೇತುದಾರರು ಚೆನ್ನಾಗಿ ತಿಳಿದುಕೊಂಡು ತಮಗೆ ವಹಿಸಿದ ಕಾರ್ಯ ಯಶಸ್ಸುಗೊಳಿಸಬೇಕು ಎಂದು ಹೇಳಿದರು.

ಪ್ರತಿ ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ದಿನನಿತ್ಯ ನವೀಕರಿಸಬೇಕು. ಹತ್ತನೆ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ ಫೋನ್‌ ಹೊಂದಿರುವವರು ಗಣತಿಯಲ್ಲಿ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದರು.

ತರಬೇತಿಯಲ್ಲಿ ಮೊದಲು ಜಿಲ್ಲಾ ಮಟ್ಟದಲ್ಲಿ ನಂತರ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಇದರಲ್ಲಿ ಸರಿಯಾಗಿ ಮಾಹಿತಿ ತಿಳಿದು ನಿಮ್ಮ ಗೆಳೆಯರಿಗೆ ಸಂದೇಶ ರವಾನಿಸಬೇಕು. ಸರ್ವೆ ತರಬೇತುದಾರರು ಕೆಲಸ ಕಾರ್ಯನಿರ್ವಹಿಸಿದ ಬಳಿಕ ನಿಮ್ಮ ಖಾತೆಗೆ ನೇರವಾಗಿ ಹಣ ಸಂಗ್ರಹವಾಗುತ್ತದೆ. ಏಳನೇ ಆರ್ಥಿಕ ಗಣತಿ ಜವಾಬ್ದಾರಿಯುತವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳು ನಿಮ್ಮ ವ್ಯಾಪ್ತಿಗೆ ಬರುತ್ತವೆ. ಅದಕ್ಕಾಗಿ ಎಲ್ಲ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ತರಬೇತುದಾರರು ಗಣತಿ ಕಾರ್ಯ ಯಶಸ್ವಿಯಾಗಿ ಕೈಗೊಂಡು ರಾಯಚೂರು ಜಿಲ್ಲೆಯನ್ನು ಪ್ರಥಮ ಸ್ಥಾನದಲ್ಲಿ ತರಲು ಪ್ರಯತ್ನಿಸಬೇಕು ಎಂದು ಹೇಳಿದರು.

ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ ಮಾತನಾಡಿ, ದೇಶಾದ್ಯಂತ 7ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದ್ದು, ಇದು ದೇಶದ ಎಲ್ಲ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವವರಿಗೆ ಅನ್ವಯಿಸುತ್ತದೆ. ಆದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸೂಕ್ತ ಮಾಹಿತಿ ದತ್ತಾಂಶದಲ್ಲಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ಒಪ್ಪಿಸಬೇಕು ಎಂದು ಹೇಳಿದರು.

ಬಳ್ಳಾರಿಯಿಂದ ಆಗಮಿಸಿದ್ದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಚನ್ನಬಸವ ಮಾತನಾಡಿ, ಆರ್ಥಿಕ ಚಟುವಟಿಕೆಗೆ ಸಂಬಂಧಿಸಿದ ಜನಗಣತಿ ಇದಾಗಿದೆ. ಯಾವ ಯಾವ ರಾಜ್ಯಗಳು ಹಾಗೂ ಜಿಲ್ಲೆಗಳು ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿವೆ ಎಂಬುದನ್ನು ಗಣತಿಯಲ್ಲಿ ನೋಡಬಹುದು. ಕುಟುಂಬದಲ್ಲಿ ವಾಸಿಸುವ ಮನೆಗಳು. ಜನವಸತಿ ಇಲ್ಲದ ಮನೆಗಳು ಮತ್ತು ವಾಣಿಜ್ಯ ಮನೆಗಳಿರುತ್ತವೆ. ಅದಕ್ಕಾಗಿ ತರಬೇತಿಯಲ್ಲಿ ಚನ್ನಾಗಿ ಮಾಹಿತಿ ಪಡೆದು ಸರ್ವೆ ಮಾಡಬೇಕು ಎಂದು ಹೇಳಿದರು.

ಪ್ರೋಬೇಶನರಿ ಐಎಎಸ್‌ ಅಧಿಕಾರಿ ರಿತೇಶಕುಮಾರ, ರಾಯಚೂರು ತಾಲೂಕು ತಹಶೀಲ್ದಾರ್‌ ಡಾ| ಹಂಪಣ್ಣ, ಕಾರ್ಮಿಕ ನಿರೀಕ್ಷಕ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.