ರೈತರೇ ಎಚ್ಚರ; ನಕಲಿ ಬೀಜಗಳ ಜಾಲಕ್ಕೆ ಸಿಲುಕದಿರಿ

ಗ್ರಾಮೀಣ ಭಾಗದಲ್ಲಿ ಖಾಸಗಿ ಕಂಪನಿಗಳ ಪ್ರಚಾರ ಜೋರು •ಬಿತ್ತನೆ ಬೀಜ ಖರೀದಿಸಿದ-ಪ್ಯಾಕೆಟ್ ಕಾಯ್ದಿರಿಸಿಕೊಳ್ಳಿ

Team Udayavani, Jun 5, 2019, 10:54 AM IST

5-June-12

ಸಿದ್ಧಯ್ಯಸ್ವಾಮಿ ಕುಕನೂರು
ರಾಯಚೂರು:
ಇನ್ನೇನು ಮುಂಗಾರು ಶುರುವಾಗುತ್ತಿದ್ದು ಎಲ್ಲೆಡೆ ರೈತಾಪಿ ವರ್ಗ ಕೃಷಿ ಚಟುವಟಿಕೆಗೆ ಭಾರೀ ಸಿದ್ಧತೆ ನಡೆಸುತ್ತಿದೆ. ಅದರ ಜತೆಗೆ ಕೆಲ ಖಾಸಗಿ ಬಿತ್ತನೆ ಬೀಜ ಮಾರಾಟ ಕಂಪನಿಗಳು ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸಿವೆ.

ಆದರೆ, ಅಂಥ ಕಡೆ ಖರೀದಿಸಿದ ಬೀಜಗಳು ಕೆಲವೊಮ್ಮೆ ವಿಫಲಗೊಳ್ಳುತ್ತಿದ್ದು, ರೈತರು ಕೈ ಸುಟ್ಟುಕೊಳ್ಳುವ ಸಾಧ್ಯತೆ ಇದೆ. ಇಲಾಖೆ ಅಂಥ ಬೀಜಗಳನ್ನು ಖರೀದಿಸದಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದೆಯಾದರೂ, ಪಕ್ಕದ ತೆಲಂಗಾಣ, ಆಂಧ್ರದಿಂದ ಕೆಲ ಖಾಸಗಿ ಕಂಪನಿಗಳು ಗಡಿಭಾಗದ ಪ್ರದೇಶಗಳಲ್ಲಿ ತಮ್ಮ ಕಂಪನಿ ಪ್ರಚಾರ ಮಾಡುತ್ತಿವೆ.

ಎಕರೆಗೆ 10-15 ಕ್ವಿಂಟಲ್ ಹತ್ತಿ ಇಳುವರಿ ಬರಲಿದೆ, ಕ್ರಿಮಿನಾಶಕದ ಅಗತ್ಯವಿಲ್ಲ, ದೊಡ್ಡ ದೊಡ್ಡ ಕಾಯಿ ಕಾಯುತ್ತದೆ ಎಂದೆಲ್ಲ ಹೇಳಿ ರೈತರ ಮನವೊಲಿಸುವ ಯತ್ನ ನಡೆದಿದೆ. ಗ್ರಾಮೀಣ ಭಾಗದಲ್ಲಿ ಟಂಟಂ ಆಟೋಗಳಲ್ಲಿ ಮೈಕ್‌ ಹಾಕಿಸಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಅಲ್ಲದೇ, ಅಂಗಡಿಗಳಲ್ಲಿ ದೊರೆಯುವುದಕ್ಕಿಂತ ಕಡಿಮೆ ದರದಲ್ಲಿ ಸಿಗುತ್ತವೆ ಎಂದೆಲ್ಲ ಪ್ರಚಾರ ನಡೆಸಲಾಗುತ್ತಿದೆ.

ಕೈ ಕೊಡುವ ಇಳುವರಿ: ಇಂಥದ್ದೇ ಬೀಜಗಳನ್ನು ಖರೀದಿಸಿ ಈ ಹಿಂದೆ ರೈತರು ಸಾಕಷ್ಟು ಮೋಸ ಹೋಗಿರುವ ಉದಾಹರಣೆಗಳಿವೆ. ಮೊಳಕೆಯೇ ಬಾರದೆ ಬೆಳೆಯನ್ನು ರೈತರು ಕೈಯ್ನಾರೆ ಕೆಡಿಸಿದ ನಿದರ್ಶನಗಳಿವೆ. ಕೆಲ ನಕಲಿ ಬಿತ್ತನೆ ಬೀಜ ಕಂಪನಿಗಳು ರೈತರನ್ನು ವಂಚಿಸುತ್ತವೆ. ಕೆಜಿಗೆ 5-6 ನೂರು ಮಾತ್ರ ಎಂದು ಪುಸಲಾಯಿಸಿ ಮಾರಾಟ ಮಾಡಿದವರು ಪುನಃ ಕಾಣುವುದೇ ಇಲ್ಲ. ಆದರೆ, ಅಂಥ ಬಿತ್ತನೆ ಬೀಜ ಖರೀದಿಸಿದ ರೈತರು ಅತ್ತ ಹಣವೂ ಉಳಿಯದೆ, ಇತ್ತ ಇಳುವರಿಯೂ ಬಾರದೆ ಸಂದಿಗ್ಧ ಸ್ಥಿತಿ ಎದುರಿಸಿದ್ದೂ ಇದೆ.

ಎಚ್ಚರಿಕೆ ಮುಖ್ಯ: ಕೃಷಿ ಇಲಾಖೆ ಅಧಿಕಾರಿಗಳು ತಿಳಿಸುವಂತೆ ಬಿತ್ತನೆ ಬೀಜಗಳನ್ನು ಎಲ್ಲಿ ಬೇಕಾದಲ್ಲಿ ಖರೀದಿಸಬಾರದು. ಪ್ರಮಾಣಿತ ಕಂಪನಿಗಳ ಬೀಜಗಳನ್ನೇ ಖರೀದಿಸುವುದು ಸೂಕ್ತ. ಅದರಲ್ಲೂ ಅಂಗಡಿಗಳಿಗೆ ತೆರಳಿ, ರೈತ ಸಂಪರ್ಕ ಕೇಂದ್ರಗಳಿಂದ ಮಾಹಿತಿ ಪಡೆದು ಖರೀದಿಸಬೇಕು ಎನ್ನುತ್ತಾರೆ.

ಗಡಿಭಾಗದ ಹಳ್ಳಿಗಳೇ ಗುರಿ: ಇಂಥ ನಕಲಿ ಕಂಪನಿಗಳು ಹೆಚ್ಚಾಗಿ ಗಡಿಭಾಗದ ಹಳ್ಳಿಗಳನ್ನೇ ಗುರಿಯಾಗಿಸಿಕೊಳ್ಳುತ್ತವೆ. ರಾಯಚೂರು ಹೇಳಿ ಕೇಳಿ ಆಂಧ್ರ ಪ್ರಭಾವಿತ ಜಿಲ್ಲೆಯಾಗಿದ್ದು, ತೆಲುಗು ಭಾಷೆಯಲ್ಲಿಯೇ ಪ್ರಚಾರ ಮಾಡುವ ವಾಹನಗಳು ಓಡಾಡುತ್ತಿವೆ. ಹಾಡಹಗಲು ಹಳ್ಳಿಗಳ ಜಗಲಿ ಕಟ್ಟೆ ಮೇಲೆ ಕುಳಿತ ರೈತರನ್ನು ಮಾತಿಗೆಳೆದು ಬೀಜ ಮಾರುವ ಸಾಧ್ಯತೆಗಳಿವೆ ಎನ್ನುತ್ತಾರೆ ಗ್ರಾಮಸ್ಥರು.

ಪ್ರಚಾರವೂ ಮುಖ್ಯ: ಖಾಸಗಿ ಕಂಪನಿಗಳು ಇಷ್ಟೆಲ್ಲ ಪ್ರಚಾರ ಮಾಡಿದರೆ ಜಿಲ್ಲಾಡಳಿತ ಮಾತ್ರ ಪತ್ರಿಕಾ ಪ್ರಕಟಣೆ ನೀಡಿ ಕೈ ತೊಳೆದುಕೊಳ್ಳುತ್ತದೆ ಎಂದು ದೂರುತ್ತಾರೆ ರೈತ ಮುಖಂಡರು. ಇಲಾಖೆ ಕೂಡ ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ನಕಲಿ ಬೀಜಗಳ ಮೊರೆ ಹೋಗದಂತೆ ಎಚ್ಚರಿಕೆ ನೀಡಬೇಕು. ಅದಕ್ಕೆ ಹೆಚ್ಚು ಪ್ರಚಾರ ನೀಡುವ ಅಗತ್ಯವಿದೆ ಎನ್ನುತ್ತಾರೆ.

ಇತ್ತೀಚೆಗೆ ಕೆಲ ಖಾಸಗಿ ಬಿತ್ತನೆ ಬೀಜ ಕಂಪನಿಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಚಾರ ಮಾಡುತ್ತಿವೆ. ಕಡಿಮೆ ದರ, ಹೆಚ್ಚು ಇಳುವರಿ ಎಂದೆಲ್ಲ ಹೇಳಿ ರೈತರ ಮನವೊಲಿಸುತ್ತಿವೆ. ಅಂಥ ಕಂಪನಿಗಳ ಮೇಲೆ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು.
•ಲಕ್ಷ್ಮಣಗೌಡ ಕಡಗಂದೊಡ್ಡಿ,
ರೈತ ಸಂಘದ ಜಿಲ್ಲಾಧ್ಯಕ್ಷ

ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಕಂಪನಿಗಳ ಬಿತ್ತನೆ ಬೀಜ ಖರೀದಿಸಬಾರದು. ಒಂದು ವೇಳೆ ಖರೀದಿಸಿದರೂ ಕೂಡ ಸೂಕ್ತ ಬಿಲ್ಗಳನ್ನು ಪಡೆಯಬೇಕು. ಇಳುವರಿ ಕೈಗೆ ಬರುವವರೆಗೂ ಪ್ಯಾಕೆಟ್‌ಗಳನ್ನು ಕಾಯ್ದಿಡಬೇಕು. ಒಂದು ವೇಳೆ ನಕಲಿಯಾಗಿದ್ದಲ್ಲಿ ಅಂಥ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ದಾಖಲೆ ಬೇಕಾಗುತ್ತದೆ. ಆದರೆ, ರೈತರು ಅಧಿಕೃತ ಅಂಗಡಿಗಳಲ್ಲಿ ಬಿತ್ತನೆ ಬೀಜ ಖರೀದಿಸುವುದು ಸೂಕ್ತ.
ಚೇತನಾ ಪಾಟೀಲ,
ಜಂಟಿ ನಿರ್ದೇಶಕಿ, ಕೃಷಿ ಇಲಾಖೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.