ದೋಸ್ತಿ ಜಂಜಾಟದಲ್ಲಿ ರಾಯಚೂರಗೆ ತಪ್ಪುವುದೇ ಸಚಿವ ಸ್ಥಾನ?

ಅತೃಪ್ತರ ಶಮನಕ್ಕೆ ಸಚಿವ ಸ್ಥಾನ ಬಿಡುವರೇ ನಾಡಗೌಡ ?

Team Udayavani, Jul 12, 2019, 4:17 PM IST

Udayavani Kannada Newspaper

ರಾಯಚೂರು: ಒಂದೆಡೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯುವುದೋ ಅಳಿಯುವುದೋ ಎನ್ನುವ ಕುತೂಹಲ ಮೂಡಿದೆ. ಅದರ ಮಧ್ಯೆ ಸರ್ಕಾರ ಉಳಿದರೂ, ಅಳಿದರೂ ಜಿಲ್ಲೆಗೆ ದಕ್ಕಿದ ಸಚಿವ ಸ್ಥಾನಕ್ಕೆ ಕುತ್ತುಂಟಾಗುವುದೇ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಜಿಲ್ಲೆಯ ಹಿರಿಯ ನಾಯಕ, ಜೆಡಿಎಸ್‌ ಶಾಸಕ ವೆಂಕಟರಾವ್‌ ನಾಡಗೌಡರಿಗೆ ಸಚಿವ ಸ್ಥಾನ ನೀಡಿ ಬಹುದಿನಗಳ ಬೇಡಿಕೆ ಈಡೇರಿಸಿತ್ತು. ಸರ್ಕಾರ ಈಚೆಗೆ ಒಂದು ವರ್ಷ ಪೂರೈಸಿದ್ದು, ಆಗಲೇ ಸರ್ಕಾರದ ಸ್ಥಿತಿ ಡೋಲಾಯಮಾನವಾಗಿದೆ. ಅತೃಪ್ತರ ಮನವೊಲಿಕೆಗೆ ಅನೇಕ ಕಸರತ್ತು ನಡೆಸಿರುವ ದೋಸ್ತಿ ಪಕ್ಷಗಳ ವರಿಷ್ಠರು ಅವರು ಏನೇ ಕೇಳಿದರೂ ಇಲ್ಲ ಎನ್ನುವ ಸ್ಥಿತಿಯಲ್ಲಿಲ್ಲ. ಅದರಲ್ಲಿ ಸಚಿವ ಸ್ಥಾನದ ಬೇಡಿಕೆ ಎದುರಾದಲ್ಲಿ ಕೆಲ ಸಚಿವರು ರಾಜೀನಾಮೆ ನೀಡಬೇಕಾಗಬಹುದು. ಅಂಥ ವೇಳೆ ಉಭಯ ಪಕ್ಷಗಳ ನಿಷ್ಠಾವಂತ ನಾಯಕರೇ ಟಾರ್ಗೆಟ್ ಆಗಬಹುದು.

ಹಿಂದಿನ ಸರ್ಕಾರದಲ್ಲೂ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ವಂಚಿಸಲಾಗಿತ್ತು. ಏಳು ಕ್ಷೇತ್ರಗಳಲ್ಲಿ ಮೂವರು ಕಾಂಗ್ರೆಸ್‌ ಶಾಸಕರಿದ್ದರು. ಹಂಪನಗೌಡ ಬಾದರ್ಲಿಯಂಥ ಹಿರಿಯ ಶಾಸಕರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ, ಈ ಬಾರಿಯೂ ಮೂವರು ಕಾಂಗ್ರೆಸ್‌, ಇಬ್ಬರು ಜೆಡಿಎಸ್‌ ಶಾಸಕರಿದ್ದು, ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಜೆಡಿಎಸ್‌ನ ನಿಷ್ಠಾವಂತ ನಾಯಕರೆನಿಸಿಕೊಂಡಿದ್ದ ವೆಂಕಟರಾವ್‌ ನಾಡ ಗೌಡರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜಿಲ್ಲೆಗೂ ನ್ಯಾಯ ಸಲ್ಲಿಸಿದ್ದರು. ಆದರೆ, ಈಗ ಎದುರಾಗಿರುವ ಬಿಕ್ಕಟ್ಟು ಶಮನ ಮಾಡಲು ಸರ್ಕಾರ ಸಚಿವ ಸಂಪುಟ ಪುನಾರಚನೆ ಮಾಡಿದಲ್ಲಿ ಜಿಲ್ಲೆಗೆ ನೀಡಿರುವ ಸಚಿವ ಸ್ಥಾನ ಹಿಂಪಡೆಯಬಹುದೇ ಎಂಬ ಅನುಮಾನ ಶುರುವಾಗಿದೆ. ಪಕ್ಷಕ್ಕೆ ನಿಷ್ಠರಾಗಿರುವ ವೆಂಕಟರಾವ್‌ ನಾಡಗೌಡ ಅವರು ವರಿಷ್ಠರ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುವವರಲ್ಲ ಎಂಬುದು ಸತ್ಯ. ಒಂದು ವೇಳೆ ಸ್ಥಾನ ತ್ಯಜಿಸುವಂತೆ ಹೇಳಿದರೆ ಅನಿವಾರ್ಯವಾಗಿ ಕೈ ಬಿಡಬೇಕಾಗುತ್ತದೆ. ಇಲ್ಲವೇ ಸರ್ಕಾರವೇ ವಿಸರ್ಜನೆಯಾದರೆ ಮುಂದಿನ ಸರ್ಕಾರ ಜಿಲ್ಲೆಗೆ ಸಚಿವ ನೀಡುವುದೇ ಎಂಬ ಅನುಮಾನವೂ ಇದೆ.

ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ ಸರ್ಕಾರದ ಧೋರಣೆ ಖಂಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದು ಕ್ರಮಬದ್ಧವಾಗಿದೆ ಎಂದು ಸ್ಪೀಕರ್‌ ತಿಳಿಸಿಯಾಗಿದೆ. ಅದರ ಜತೆಗೆ ಪ್ರತಾಪಗೌಡ ಕೂಡ ಬಿಜೆಪಿ ಸೇರುವುದು ನಿಶ್ಚಿತ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಮುಂದೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದರೂ ಅವರು ಪುನಃ ಚುನಾವಣೆ ಎದುರಿಸಬೇಕಿದೆ. ಆರಂಭದಲ್ಲೇ ಸಚಿವ ಸ್ಥಾನ ಸಿಗುವುದೇ ಎಂಬ ಖಚಿತತೆ ಇಲ್ಲ.

ಒಂದು ವೇಳೆ ಎಲ್ಲ ಬಿಕ್ಕಟ್ಟು ಶಮನಗೊಂಡು ಸಮ್ಮಿಶ್ರ ಸರ್ಕಾರ ಯಥಾ ಸ್ಥಿತಿಯಲ್ಲಿ ಮುಂದುವರಿದರೆ ಜಿಲ್ಲೆಯ ಸಚಿವ ಸ್ಥಾನಕ್ಕೆ ಯಾವುದೇ ಆತಂಕವಿಲ್ಲ. ಆಪರೇಷನ್‌ ಕಮಲ ಯಶಸ್ವಿಯಾಗಿದ್ದೇ ಆದಲ್ಲಿ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆಯೇ ಹೆಚ್ಚು ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯ ರಾಜಕೀಯದಲ್ಲಿ ಏನಾಗುತ್ತಿದೆ ಎನ್ನುವುದನ್ನು ದಿನ ಬೆಳಗಾದರೆ ಮಾಧ್ಯಮಗಳಲ್ಲಿ ರಾಜ್ಯದ ಜನ ನೋಡುತ್ತಿದ್ದಾರೆ. ಆದರೆ, ಈ ಬಗ್ಗೆ ನಾನು ಏನೂ ಹೇಳಲಾರೆ. ಕಾಯ್ದು ನೋಡಿ ಎಂದಷ್ಟೇ ಹೇಳುವೆ.
ವೆಂಕಟರಾವ್‌ ನಾಡಗೌಡ,
ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.