ಕೃಷ್ಣಾ ಸೇತುವೆ ಮತ್ತೆ ಶಿಥಿಲ!

ರಾಯಚೂರು- ಹೈದರಾಬಾದ್‌ ಸಂಪರ್ಕ ಕೊಂಡಿ•ಭಾರೀ ವಾಹನ ಸಂಚಾರದಿಂದ ಕಾದಿದೆ ಆಪತ್ತು

Team Udayavani, Sep 1, 2019, 10:10 AM IST

1-September-3

ರಾಯಚೂರು: ದೇವಸುಗೂರು ಸಮೀಪದ ಕೃಷ್ಣಾ ನದಿಗೆ ನಿರ್ಮಿಸಿದ ಸೇತುವೆ ಮೇಲ್ಪದರ ಕಿತ್ತು ಹೋಗಿರುವುದು.

ರಾಯಚೂರು: ಸುಮಾರು ಏಳೂವರೆ ದಶಕದಿಂದ ರಾಯಚೂರು-ಹೈದರಾಬಾದ್‌ಗೆ ಸಂಪರ್ಕ ಕೊಂಡಿಯಾಗಿರುವ ದೇವಸುಗೂರು ಸಮೀಪದ ಕೃಷ್ಣಾ ನದಿ ಸೇತುವೆ ಮತ್ತೆ ಶಿಥಿಲಗೊಂಡಿದ್ದು, ಭಾರೀ ವಾಹನಗಳ ಸಂಚಾರದಿಂದ ದಿನೇದಿನೇ ಆತಂಕ ಹೆಚ್ಚಾಗುತ್ತಿದೆ. ಕಳೆದೆರಡು ವರ್ಷಗಳ ಹಿಂದೆ ತಾತ್ಕಾಲಿಕ ದುರಸ್ತಿ ಮಾಡಿದ್ದರೂ ಈಗ ಮತ್ತದೇ ಸ್ಥಿತಿ ನಿರ್ಮಾಣವಾಗಿದೆ.

ರಾಯಚೂರಿನಿಂದ ಮಕ್ತಾಲ್, ಮೆಹಬೂಬ್‌ನಗರ, ಹೈದರಾಬಾದ್‌, ಯಾದಗಿರಿ ಸೇರಿದಂತೆ ವಿವಿಧೆಡೆಗೆ ಈ ಸೇತುವೆ ಮಾರ್ಗವಾಗಿಯೇ ತೆರಳಬೇಕಿದೆ. ಹೀಗಾಗಿ ನಿತ್ಯ ಸರಕು ಸರಂಜಾಮು ತುಂಬಿದ ಸಾವಿರಾರು ಭಾರೀ ವಾಹನಗಳು ಎಡೆಬಿಡದೆ ಓಡಾಡುತ್ತವೆ. ಇದರಿಂದ ಸೇತುವೆಗೆ ಒತ್ತಡ ಹೆಚ್ಚುತ್ತಿದೆ.

ಎರಡು ವರ್ಷಗಳ ಹಿಂದೆ ಸೇತುವೆ ಮೇಲ್ಪದರು ಸಂಪೂರ್ಣ ಕಿತ್ತು ಹೋಗಿತ್ತು. ಆಗ ಹೆದ್ದಾರಿ ಪ್ರಾಧಿಕಾರದವರು ಡಾಂಬರ್‌ ಹಾಕಿಸಿ ತಾತ್ಕಾಲಿಕ ದುರಸ್ತಿ ಕೈಗೊಂಡಿದ್ದರು. ಸುಮಾರು 45 ದಿನಗಳ ಕಾಲ ಈ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ, ಅದಾಗಿ ಕೇವಲ ಎರಡು ವರ್ಷ ಕೂಡ ಕಳೆದಿಲ್ಲ. ಆಗಲೇ ಮತ್ತೆ ಸೇತುವೆ ಮೇಲೆ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ರಾಡ್‌ಗಳು ತೇಲಿದ್ದು, ಪ್ರಯಾಣಿಕರಿಗೆ ಕಂಟಕವಾಗಿ ಮಾರ್ಪಟ್ಟಿದೆ.

ಈಚೆಗೆ ಬಂದ ನೆರೆಯಿಂದ ಸಾಕಷ್ಟು ಪ್ರಮಾಣದ ನೀರು ಸೇತುವೆ ಮೇಲೆ ಹರಿದು ಹೋಗಿದ್ದು, ಸೇತುವೆ ಮೇಲೆ ಒತ್ತಡ ಬಿದ್ದಿದೆ. ಅಲ್ಲದೇ, ಕಲ್ಲಿನ ಕಟ್ಟಡ ಕೂಡ ಅಲಲ್ಲಿ ಬಿರುಕು ಬಿಟ್ಟಿದ್ದು, ಆತಂಕಕ್ಕೆಡೆ ಮಾಡಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸೇತುವೆ ದುರಸ್ತಿ ಮಾಡುವುದರ ಜತೆಗೆ ನೂತನ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಬೇಕಿದೆ.

ನಿಜಾಮರ ಕಾಲದ ಸೇತುವೆ: ನಿಜಾಮರ ಕಾಲದ ರಾಜಕುಮಾರ ನವಾಬ್‌ ಜವ್ವಾಹಜಾಹ್‌ ಬಹಾದ್ದೂರ್‌ ಅವರ ರಾಯಚೂರು ಪ್ರಯಾಣ ನಿಮಿತ್ತ ಈ ಸೇತುವೆ ನಿರ್ಮಿಸಲಾಗಿತ್ತು. 1933ರಲ್ಲಿ ಆರಂಭವಾದ ಈ ಸೇತುವೆ ಕಾಮಗಾರಿ 1944ರಲ್ಲಿ ಮುಕ್ತಾಯಗೊಂಡಿತ್ತು. ಆಗಿನ ಕಾಲದಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ಸಂಪರ್ಕ ಸಾಧಿಸುವ ಸೇತುವೆ ಎಂದೇ ಇದನ್ನು ಬಣ್ಣಿಸಲಾಗಿತ್ತು. ಜೋದಿ ಸೇತುವೆ (ಸಿರಾತ್‌-ಎ-ಜೋದಿ) ಎಂದೇ ನಾಮಕರಣ ಮಾಡಲಾಗಿತ್ತು. 2488 ಅಡಿ ಉದ್ದ, 20 ಅಡಿ ಅಗಲ, 60 ಅಡಿ ಎತ್ತರದ ಈ ಸೇತುವೆ ಸಂಪೂರ್ಣ ಕಲ್ಲಿನಿಂದ ನಿರ್ಮಾಣಗೊಂಡಿದೆ. ಆಗಿನ ಕಾಲಕ್ಕೆ 13,28,500 ಹಾಲಿ ನಾಣ್ಯಗಳ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗಿತ್ತು.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.