ಕೃಷ್ಣೆ ಸದ್ದಡಗುವ ಮುನ್ನವೇ ತುಂಗಭದ್ರೆ ಆರ್ಭಟ ಶುರು

905 ಕುಟುಂಬಗಳ 4,481 ಜನ ಸ್ಥಳಾಂತರ •ಕೃಷ್ಣಾ ನದಿಗೆ ರವಿವಾರ 6.18 ಲಕ್ಷ ಕ್ಯೂಸೆಕ್‌ ನೀರು

Team Udayavani, Aug 12, 2019, 5:16 PM IST

12-Agust-48

ರಾಯಚೂರು: ದೇವದುರ್ಗ ತಾಲೂಕಿನ ಕೊಪ್ಪರದಲ್ಲಿ ನದಿ ನೀರು ನುಗ್ಗಿ ಜಲಾವೃತವಾದ ಮನೆ.

ರಾಯಚೂರು: ಕೃಷ್ಣಾ ನದಿ ಆರ್ಭಟ ಮುಗಿಯುವ ಮುನ್ನವೇ ತುಂಗಭದ್ರಾ ನದಿಗೆ ನೆರೆ ಮುನ್ಸೂಚನೆ ಸಿಕ್ಕಿದ್ದು, ಉಭಯ ನದಿಗಳ ಪಾತ್ರದಲ್ಲಿರುವ ಹಳ್ಳಿಗಳ ಜನ ಮತ್ತಷ್ಟೂ ಆತಂಕಕ್ಕೀಡಾಗಿದ್ದಾರೆ. ಕೃಷ್ಣಾ ನದಿ ನೆರೆಗೆ ಸಿಲುಕಿದವರ ರಕ್ಷಣೆ ಕಾರ್ಯ ಮುಗಿಯುವ ಮುನ್ನವೇ ತುಂಗಭದ್ರಾ ನದಿಗೆ 2.22 ಲಕ್ಷ ಕ್ಯೂಸೆಕ್‌ ನೀರು ಹರಿಸಿದ್ದು, ಮತ್ತಷ್ಟು ಭಯಕ್ಕೆ ಕಾರಣವಾಗಿದೆ.

ಕೃಷ್ಣಾ ನದಿಗೆ ರವಿವಾರ ಕೂಡ 6.11 ಲಕ್ಷ ಕ್ಯೂಸೆಕ್‌ ನೀರು ಹರಿಸಿದ್ದರಿಂದ ಶನಿವಾರ ಖಾಲಿ ಮಾಡಿಸಿದ್ದ ಬಹುತೇಕ ಹಳ್ಳಿಗಳಿಗೆ ನೀರು ನುಗ್ಗಿದೆ. ರವಿವಾರ ಮಧ್ಯಾಹ್ನ 3ರ ಹೊತ್ತಿಗೆ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 6.11 ಲಕ್ಷ ಕ್ಯೂಸೆಕ್‌ ಹಾಗೂ ಭೀಮಾ ನದಿಯ ಸನ್ನತಿ ಜಲಾಯಶದಿಂದ 2.85 ಸೇರಿ 9 ಕ್ಯೂಸೆಕ್‌ ನೀರು ಹರಿಸಲಾಗಿದೆ.

ರಾಯಚೂರು, ದೇವದುರ್ಗ ಮತ್ತು ಲಿಂಗಸುಗೂರು ತಾಲೂಕಿನ 26 ಹಳ್ಳಿಗಳ 905 ಕುಟುಂಬಗಳು ನೆರೆಗೆ ತುತ್ತಾಗಿದ್ದು, 4481 ಜನರಿಗೆ ಜಿಲ್ಲಾಡಳಿತ ಪರಿಹಾರ ಕೇಂದ್ರಗಳಲ್ಲಿ ಅನ್ನ ನೀರು, ವಸತಿ ಸೌಲಭ್ಯ ಕಲ್ಪಿಸಿದೆ. ಇನ್ನು ಇದಕ್ಕೆ ಭೀಮಾ ನದಿ ಪ್ರವಾಹವೂ ಜತೆಯಾಗಿದ್ದು, ಸನ್ನತಿಯಿಂದ 2.85 ಲಕ್ಷ ಕ್ಯೂಸೆಕ್‌ ನೀರು ಹರಿಸಿದ ಪರಿಣಾಮ ರಾಯಚೂರು ತಾಲೂಕಿನ ನಡುಗಡ್ಡೆಗಳಾದ ಕುರ್ವಕುದಾ, ಕುರ್ವಕುಲಾ ಗ್ರಾಮಗಳವರೆಗೂ ನೀರು ತಲುಪಿದೆ. ಇನ್ನೂ ಸ್ವಲ್ಪ ನೀರಿನ ಹರಿವು ಹೆಚ್ಚಾದಲ್ಲಿ ಈ ನಡುಗಡ್ಡೆಗಳಲ್ಲಿ ವಾಸಿಸುವ ನೂರಾರು ಕುಟುಂಬಗಳ ಸ್ಥಳಾಂತರ ಕೂಡ ಅನಿವಾರ್ಯವಾಗಲಿದೆ.

ಏತನ್ಮಧ್ಯೆ ಟಿಬಿ ಡ್ಯಾಂನಿಂದ ನದಿಗೆ 2.22 ಲಕ್ಷ ಕ್ಯೂಸೆಕ್‌ ನೀರು ಬಿಟ್ಟಿದ್ದು, ನದಿ ಪಾತ್ರಗಳ ಜನತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ವಿವಿಧ ಗ್ರಾಮಗಳಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡುತ್ತಿದ್ದಾರೆ. ಪಶ್ಚಿಮ ವಾಹಿನಿಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರೆಗೆ ಒಳಹರಿವು ಹೆಚ್ಚಾಗಿದೆ. 2,15,505 ಕ್ಯೂಸೆಕ್‌ ಒಳಹರಿವಿದ್ದು, 2,30,767 ಕ್ಯೂಸೆಕ್‌ ಹೊರ ಹರಿವಿದೆ. ಅದರಲ್ಲಿ 4,280 ಕ್ಯೂಸೆಕ್‌ ಕಾಲುವೆಗಳಿಗೆ ಹರಿಸಿದರೆ, ಉಳಿದ ನೀರು ನದಿಗೆ ಬಿಡಲಾಗುತ್ತಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.