ಅಭಿಪ್ರಾಯ ಸಂಗ್ರಹಿಸಿ ವರದಿ ಕೊಡಿ
ಭೂ ಒಡೆತನ ಯೋಜನೆ ಅನುಷ್ಠಾನ ಸಭೆಯಲ್ಲಿ ಡಿಸಿ ವೆಂಕಟೇಶಕುಮಾರ ಸೂಚನೆ
Team Udayavani, Jan 2, 2020, 2:51 PM IST
ರಾಯಚೂರು: ಭೂ ಒಡೆತನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಮೀನಿಗೆ ದರ ನಿಗದಿಪಡಿಸುವ ಕುರಿತು ಜಮೀನು ಮಾಲೀಕರಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾ ಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ 2018-19 ಮತ್ತು 2019-20ನೇ ಸಾಲಿನ ಭೂ ಒಡೆತನ ಯೋಜನೆಯ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಯೋಜನೆಯಡಿ ಫಲಾನುಭವಿಗಳ ಕುಟುಂಬದ ವಂಶಾವಳಿ ಪ್ರಮಾಣಪತ್ರ ಪಡೆಯಬೇಕು. ಫಲಾನುಭವಿಗಳ ಕುಟುಂಬಸ್ಥರಿಗೆ ಯಾವುದೇ ಜಮೀನು ಇಲ್ಲದಿರುವ ಬಗ್ಗೆ ತಹಶೀಲ್ದಾರ್ರಿಂದ ಜಮೀನು ಸರ್ವೇ ಮಾಡಿಸಿ ವರದಿ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಒಂದು ಎಕರೆ ನೀರಾವರಿ ಭೂಮಿ ಅಥವಾ ಎರಡು ಎಕರೆ ಒಣ ಭೂಮಿ ಖರೀದಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರ ಮತ್ತು ನಿಗಮದ ನಿಯಮಾನುಸಾರ ಹಾಗೂ ಮಾರ್ಗಸೂಚಿಗಳನ್ವಯ ಭೂಮಿ ಮಾರಾಟ ಮಾಡುವವರು ಅಥವಾ ಖರೀದಿಗೆ ಸಂಬಂಧಿ ಸಿ 31 ಅರ್ಜಿ ಸಲ್ಲಿಕೆಯಾಗಿವೆ. ಸುಮಾರು 151 ಎಕರೆ ಭೂಮಿಯನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಕೇವಲ 20 ಗುಂಟೆ ಜಮೀನು ನೀಡಿದರೆ ಅದರಲ್ಲಿ ಏನೂ ಬೆಳೆಯಲು ಸಾಧ್ಯವಿಲ್ಲ. ಆದ್ದರಿಂದ ನೀರಾವರಿಗೆ 1 ಎಕರೆ ಮತ್ತು ಖುಷ್ಕಿಗೆ 2 ಎಕರೆ ನೀಡಬೇಕೆಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗೆ ಸೂಚಿಸಿದರು.
ಪ್ರತಿ ಜಮೀನುದಾರರಿಂದ ಭೂಮಿ ಖರೀದಿಸುವ ಬಗ್ಗೆ ಅಭಿಪ್ರಾಯ
ಸಂಗ್ರಹಿಸಿದರು. ಭೂಮಿಯನ್ನು ಯಾವ ಬೆಲೆಗೆ ಖರೀದಿಸಬೇಕು ಎಂದು ಜಿಲ್ಲಾ ಉಪನೋಂದಣಾಧಿಕಾರಿ ನೀಡುವ ವರದಿ ಮೇಲೆ ದರವನ್ನು ಮೂರು ಪಟ್ಟು ಹೆಚ್ಚಿಸಲಾಗುತ್ತದೆ. ಅಂತಿಮವಾಗಿ ದರ ನಿಗದಿಪಡಿಸುವುದು ಜಿಲ್ಲಾಧಿಕಾರಿ ವಿವೇಚನೆಗೆ ಬಿಡಲಾಗುವುದು ಎಂದು ವಿವರಿಸಿದರು.
ಸಹಾಯಕ ಆಯುಕ್ತ ಸಂತೋಷ ಕಾಮಗೌಡರ, ಲಿಂಗಸುಗೂರು ಸಹಾಯಕ ಆಯುಕ್ತ ದಿಲೀಪ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ