ಕಳ್ಳರ ಕಿಸೆಗೆ ಕೈ ಹಾಕಿ ರೈತರಿಗೆ ನೀಡುತ್ತೇವೆ

ನ್ಯಾಯ್‌ ಯೋಜನೆಗೆ ಹಣದ ಕೊರತೆ ಆಗಲ್ಲದೆಹಲಿಯಿಂದ ಮೋದಿ ಓಡಿಸಲು ಎಲ್ಲರೂ ಒಗ್ಗಟ್ಟು

Team Udayavani, Apr 20, 2019, 11:03 AM IST

20-April-5

ರಾಯಚೂರು: ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾತನಾಡಿದರು.

ರಾಯಚೂರು: ನಮ್ಮ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸುತ್ತಾರೆ. ಅಂಬಾನಿಯಂಥ ಕಳ್ಳರ ಜೇಬಿನಿಂದ ಕಿತ್ತು ಬಡವರಿಗೆ ಹಂಚುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಪ್ರತ್ಯುತ್ತರ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎರಡು ವಿಚಾರದ ಮೇಲೆ ಚುನಾವಣೆ ನಡೆಯುತ್ತಿದೆ. ಒಂದು ನ್ಯಾಯ, ಸತ್ಯ, ಪ್ರೀತಿಯ ಸಿದ್ಧಾಂತವಾದರೆ ಮತ್ತೊಂದು ಅನ್ಯಾಯ, ಸುಳ್ಳು, ದ್ವೇಷದ ಸಿದ್ಧಾಂತ. ನಾವು ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದೇವೆ. ದೇಶದ ಬಡ ಜನರ ಖಾತೆಗೆ ವರ್ಷಕ್ಕೆ 72 ಸಾವಿರ ರೂ. ನೀಡುವ ನ್ಯಾಯ್‌ ಯೋಜನೆ ಘೋಷಣೆ ಮಾಡಿದ್ದೇವೆ. ಕಳೆದ ಐದು ವರ್ಷದಲ್ಲಿ ಮೋದಿ ಬಡವರಿಗೆ ಅನ್ಯಾಯ ಮಾಡಿದ್ದಾರೆ. ನಾವು ಬಡವರ ಬಗ್ಗೆ ಮಾತನಾಡಿದರೆ ಸಾಕು ಅವರಿಗೆ ಹಣದ ವಿಚಾರ ಬರುತ್ತದೆ. ಆದರೆ,
ದೇಶದಲ್ಲಿ ಹಣದ ಕೊರತೆ ಇಲ್ಲ. ಅಂಬಾನಿ, ವಿಜಯ್‌ ಮಲ್ಯ, ಲಲಿತ್‌ ಮೋದಿ, ನೀರವ್‌ ಮೋದಿಯಂಥ ಕಳ್ಳ ಉದ್ಯಮಿಗಳಿಂದ ಕಿತ್ತು ಬಡವರಿಗೆ ನೀಡುತ್ತೇವೆ ಎಂದರು.

ಪ್ರಧಾನಿ ಮೋದಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇನೆಂದು ಕಳೆದ ಐದು ವರ್ಷದಲ್ಲಿ ಒಂದು ರೂ. ಹಾಕಲಿಲ್ಲ. ಆದರೆ, ನಾವು
ಸುಳ್ಳು ಹೇಳಲು ಬಂದಿಲ್ಲ. ಆಡಿದ್ದನ್ನು ಮಾಡಿ ತೋರಿಸುತ್ತೇವೆ. ಅ ಧಿಕಾರಕ್ಕೆ ಬಂದ 10 ದಿನದೊಳಗೆ ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್‌ನಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ರಾಜ್ಯದಲ್ಲೂ ಸಮ್ಮಿಶ್ರ ಸರ್ಕಾರ 40 ಸಾವಿರ ಕೋಟಿ ಸಾಲಮನ್ನಾ ಮಾಡಿದೆ ಎಂದರು.

ಚೌಕಿದಾರ್‌ ಚೋರ್‌ ಹೈ: ದೇಶದ ಯಾವ ಮೂಲೆಗೆ ಹೋದರೂ ಚೌಕಿದಾರ್‌ ಚೋರ್‌ ಹೈ ಎನ್ನುವ ಮಾತನ್ನು ಜನರೇ ಹೇಳುತ್ತಾರೆ. ಅವರು ಬಡವರ ಹಣ ಕದ್ದು ಉದ್ಯಮಿಗಳ ಜೇಬಿಗೆ ಹಾಕಿದ್ದಾರೆ. ಅಂಬಾನಿ, ಅದಾನಿಯಂಥ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುತ್ತಾರೆ. ರಫೆಲ್‌ ಒಪ್ಪಂದವನ್ನು ಎಚ್‌ಎಎಲ್‌ಗೆ ತಪ್ಪಿಸಿ ಅಂಬಾನಿಗೆ ಏಕೆ ನೀಡಲಾಯಿತು? ಅಂಬಾನಿ ಅಕೌಂಟ್‌ ಗೆ 30 ಸಾವಿರ ಕೋಟಿ ಏಕೆ ಬಂತು ಎಂಬುದನ್ನು ಎಂದು ದೇಶದ ಜನರಿಗೆ ತಿಳಿಸಲಿ. ಯುಪಿಎ ಸರ್ಕಾರ ರಫೇಲ್‌ ಯುದ್ಧ ವಿಮಾನ ನಿರ್ಮಾಣ
ಹೊಣೆ ಎಚ್‌ಎಎಲ್‌ ನೀಡಿ ಇಲ್ಲಿಯೇ ಕಾರ್ಖಾನೆ ನಿರ್ಮಿಸಲು ನಿರ್ಧರಿಸಿತ್ತು. ಇದರಿಂದ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಸಿಗುತ್ತಿತ್ತು. ಪ್ರಧಾನಿ ದೇಶದ ಭದ್ರತೆ ಬಗ್ಗೆ ಮಾತನಾಡುತ್ತಾರೆ.

ನೋಟ್‌ ಬ್ಯಾನ್‌ ಮೂಲಕ 50 ಲಕ್ಷ ಜನ ಉದ್ಯೋಗ ಕಳೆದುಕೊಂಡರು. ಯುವಕರಿಗೆ ಉದ್ಯೋಗ ಇಲ್ಲದಿದ್ದರೆ ದೇಶ ಬಲಿಷ್ಠವಾಗದು ಎಂಬ ತಿಳಿವಳಿಕೆ ಇಲ್ಲವೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.