ಶಾಸಕರ ದಿಕ್ಕೆಡಿಸಿದ ಲೋಕಾ ಫಲಿತಾಂಶ

ಮುನ್ನಡೆ ಸಾಧಿಸುವಲ್ಲಿ ವಿಫಲರಾದ ಮೈತ್ರಿ ಶಾಸಕರು•ದೇವದುರ್ಗದಲ್ಲಿ ಕಾಂಗ್ರೆಸ್‌ಗೆ 5361 ಮತ

Team Udayavani, May 25, 2019, 11:19 AM IST

25-May-13

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ರಾಜಾ ಅಮರೇಶ್ವರ ನಾಯಕ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಶರತ್‌ ಬಿ. ಪ್ರಮಾಣ ಪತ್ರ ವಿತರಿಸಿದರು.

ರಾಯಚೂರು: ಲೋಕಸಭೆ ಚುನಾವಣೆ ದೇಶದ ವಿಚಾರಗಳ ಮೇಲೆ ನಡೆಯುವುದು ಸಾಮಾನ್ಯ. ಅದರ ಜತೆಗೆ ಆಯಾ ಕ್ಷೇತ್ರಗಳ ಶಾಸಕರ ಪ್ರಾಬಲ್ಯ ಪ್ರದರ್ಶನಕ್ಕೂ ಇದು ವೇದಿಕೆಯಾಗಿರುತ್ತದೆ. ಆದರೆ, ಮೇ 23ರಂದು ಬಂದ ಫಲಿತಾಂಶ ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ವಿಪಕ್ಷಗಳ ಶಾಸಕರ ದಿಕ್ಕೆಡಿಸಿದ್ದು ಸುಳ್ಳಲ್ಲ.

ರಾಯಚೂರು ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಬರೋಬ್ಬರಿ 1,17,716 ಮತಗಳ ಭಾರೀ ಮುನ್ನಡೆ ಸಾಧಿಸಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಏಳರಲ್ಲಿ ಸಾವಿರಾರು ಮತಗಳ ಮುನ್ನಡೆ ಸಾಧಿಸಿರುವುದು ವಿಶೇಷ. ಆದರೆ, ಆ ಏಳರಲ್ಲಿ ಮೂರು ಕಾಂಗ್ರೆಸ್‌ ಮತ್ತು ಒಂದು ಜೆಡಿಎಸ್‌ ಕ್ಷೇತ್ರ ಕೂಡ ಇದೆ. ಆ ಶಾಸಕರು ಏನೇ ಶತಪ್ರಯತ್ನ ನಡೆಸಿದರೂ ಮುನ್ನಡೆ ಸಾಧಿಸುವುದಿರಲಿ, ಸಮಬಲದ ಸೆಣಸಾಟ ನಡೆಸಲು ಅವಕಾಶವಿಲ್ಲದ ರೀತಿ ಫಲಿತಾಂಶ ಬಂದಿದೆ. ಇದು ಆ ಶಾಸಕರ ಭವಿಷ್ಯದ ಚಿಂತನೆಗೆ ಅನುವು ಮಾಡಿಕೊಟ್ಟಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಳೆದಕೊಂಡ ಕ್ಷೇತ್ರಗಳಲ್ಲಿ ಈಗ ಭರ್ಜರಿ ಮುನ್ನಡೆ ಸಾಧಿಸಿದೆ. ಇದು ಬಿಜೆಪಿ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಆದರೆ, ಈ ಫಲಿತಾಂಶದಿಂದ ತಳಮಟ್ಟದಲ್ಲಿ ಬಿಜೆಪಿ ಬಲಗೊಂಡಲ್ಲಿ ಉಳಿದ ಪಕ್ಷಗಳಿಗೆ ಮುಂಬರುವ ದಿನಗಳಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು.

ಬಿಜೆಪಿಯಲ್ಲದ ಕ್ಷೇತ್ರಗಳಲ್ಲಿ ನಿರೀಕ್ಷೆ ಮೀರಿ ಮತಗಳು ಲಭಿಸಿವೆ. ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು. ಬಿಜೆಪಿ 79,914 ಮತಗಳು ಪಡೆದರೆ ಕಾಂಗ್ರೆಸ್‌ 63,662 ಪಡೆದಿದೆ. ಅಂದರೆ ಬಿಜೆಪಿಗೆ 16,252 ಮತಗಳ ಮುನ್ನಡೆ ಲಭಿಸಿದೆ. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್‌ ಅಧಿಕಾರದಲ್ಲಿದ್ದು, ಕಾಂಗ್ರೆಸ್‌ ಹಿರಿಯ ಮುಖಂಡ ಎನ್‌ .ಎಸ್‌. ಬೋಸರಾಜ್‌ ಅವರ ಪ್ರಭಾವ ಇದೆ. ಆದರೂ ಇಲ್ಲಿ ಬಿಜೆಪಿ 75,883 ಮತ ಪಡೆದರೆ, ಕಾಂಗ್ರೆಸ್‌ 54,352 ಪಡೆಯುವ ಮೂಲಕ 21,481 ಮತಗಳ ಹಿನ್ನಡೆ ಅನುಭವಿಸಿದೆ. ಇನ್ನೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಲಿಂಗಸುಗೂರು ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಬಿಜೆಪಿ 80,700 ಮತ ಪಡೆದರೆ, ಕಾಂಗ್ರೆಸ್‌ 59,003 ಪಡೆದಿದ್ದು, ಬಿಜೆಪಿಗೆ 21,697 ಭಾರೀ ಲೀಡ್‌ ಲಭಿಸಿದೆ. ಆದರೆ, ಇದು ಬಿಜೆಪಿ ಅಭ್ಯರ್ಥಿ ತವರು ನೆಲವೂ ಆಗಿರುವ ಕಾರಣ ಇಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರಬಹುದು ಎನ್ನಲಾಗಿತ್ತು. ಇನ್ನೂ ಶಾಹಪುರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಅಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು. ಬಿಜೆಪಿ 73,272 ಮತ ಪಡೆದರೆ, ಕಾಂಗ್ರೆಸ್‌ 54,149 ಮತ ಪಡೆಯುವ ಮೂಲಕ 19,123 ಮತಗಳ ಹಿನ್ನಡೆ ಅನುಭವಿಸಿದೆ.

ಅನುಮಾನ ಮೂಡಿಸಿದ ದೇವದುರ್ಗ
ದೇವದುರ್ಗ ಕ್ಷೇತ್ರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಲೀಡ್‌ ತಂದುಕೊಡುವುದಾಗಿ ಬಿಜೆಪಿ ಶಾಸಕ ಕೆ. ಶಿವನಗೌಡ ನಾಯಕ ಆಶ್ವಾಸನೆ ನೀಡಿದ್ದರು. ಆದರೆ, ಅಲ್ಲಿ 5361 ಮತಗಳಿಂದ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಬಿಜೆಪಿ 63,365 ಮತ ಪಡೆದರೆ, ಕಾಂಗ್ರೆಸ್‌ 68,726 ಮತ ಪಡೆದಿದೆ. ವರಸೆಯಲ್ಲಿ ಮಾವ ಅಳಿಯರಾಗುವ ಕಾರಣ ಒಳಒಪ್ಪಂದದ ರಾಜಕಾರಣ ನಡೆದಿದೆ ಎನ್ನುವ ಆರೋಪಗಳಿವೆ. ಚುನಾವಣೆಗೆ ಇನ್ನೆರಡು ದಿನಗಳಿದ್ದಾಗ ಶಾಸಕ ಕೆ.ಶಿವನಗೌಡ ನಾಯಕ ಯಾವುದೇ ಕಾರ್ಯಕರ್ತರ ಕೈಗೆ ಸಿಕ್ಕಿರಲಿಲ್ಲ ಎಂಬ ಆರೋಪಗಳಿವೆ. ಆ ಕ್ಷೇತ್ರದಲ್ಲಿ ಮತಗಳ ಸಂಖ್ಯೆ ಕಡಿಮೆ ಆಗಿರುವುದಕ್ಕೂ ಇಂಥ ಆರೋಪಗಳಿಗೂ ಪುಷ್ಠಿ ನೀಡುವಂತಿದೆ. ಫಲಿತಾಂಶ ಮಾತ್ರ ಬಿಜೆಪಿಗೆ ಆನೆಬಲ ತಂದರೆ ಪ್ರತಿ ಪಕ್ಷಗಳಲ್ಲಿ ತಳಮಳ ಸೃಷ್ಟಿಸಿರುವುದು ಸುಳ್ಳಲ್ಲ. ಆದರೆ, ಈ ಅಲೆ ಮುಂಬರುವ ಚುನಾವಣೆಗಳ ಮೇಲೆ ಪ್ರಭಾವ ಬೀರುವುದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.