ನಂಬಿದ ಶಕ್ತಿಗಳೇ ಕೈ ಹಿಡಿಯಲಿಲ್ಲ

ಕದನ ಕಣದಲ್ಲಿ ಒಂಟಿಯಾಗಿಯೇ ಹೋರಾಡಿದರೆ ಬಿ.ವಿ.ನಾಯಕ..?

Team Udayavani, May 24, 2019, 1:37 PM IST

24-May-21

ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತ ಪಡೆದಿದ್ದ ಜೆಡಿಎಸ್‌ ಬೆಂಬಲದೊಂದಿಗೆ ಕಣಕ್ಕಿಳಿದ ಹಾಲಿ ಸಂಸದ ಬಿ.ವಿ.ನಾಯಕರಿಗೆ ಹೀನಾಯ ಸೋಲಾಗಿದೆ. ಅಂದುಕೊಂಡ ಮಟ್ಟಿಗೆ ಮೈತ್ರಿ ಯಶಸ್ವಿಯಾಗಿಲ್ಲ ಎಂಬುದು ಒಂದೆಡೆಯಾದರೆ, ಸ್ವಂತ ಪಕ್ಷದ ನಾಯಕರೇ ಕೈ ಹಿಡಿದಿಲ್ಲ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಹೇಳಿದ್ದೊಂದು ಮಾಡಿದ್ದಿನ್ನೊಂದು ಎನ್ನುವಂತೆ ಜೆಡಿಎಸ್‌ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಹೆಸರಿನಲ್ಲಿ ನಡೆಸಿದ ಪ್ರಹಸನ ಬಯಲಾಗಿದೆ. ಈ ಫ‌ಲಿತಾಂಶ ಬಿಜೆಪಿಯವರು ಬೀಗುವಂತೆ ಮಾಡಿದರೆ ಜೆಡಿಎಸ್‌ ಕಾಂಗ್ರೆಸ್‌ ನಾಯಕರು ತಲೆ ತಗ್ಗಿಸುವಂತೆ ಮಾಡಿದೆ. ಮೇಲ್ನೋಟಕ್ಕೆ ನಾಯಕರು ಸಮಜಾಯಿಷಿ ನೀಡಿ ನುಣುಚಿಕೊಳ್ಳುತ್ತಿದ್ದರೂ ಒಳಗೊಳಗೆ ಹೇಳಿಕೊಳ್ಳಲಾಗದ ತಳಮಳ ಅನುಭವಿಸುತ್ತಿರುವುದಂತೂ ಸತ್ಯ.

ಬಿ.ವಿ.ನಾಯಕರ ಪರ ಕಾಂಗ್ರೆಸ್‌ನ ಕೆಲ ನಾಯಕರು ಶ್ರದ್ಧೆ ವಹಿಸಿ ಕೆಲಸ ಮಾಡಿದ್ದರೆ ಸೋಲಿನ ಪ್ರಮಾಣ ಇಷ್ಟೊಂದು ತೀವ್ರವಾಗಿ ಇರುತ್ತಿರಲಿಲ್ಲವೇನೋ. ಆದರೆ, ನಂಬಿದ ಶಕ್ತಿಗಳೇ ಕೈ ಕೊಟ್ಟಿರುವ ಲಕ್ಷಣ ನಿಚ್ಚಳವಾಗಿ ಕಾಣುತ್ತಿದೆ. ಅದರಲ್ಲೂ ಕಾಂಗ್ರೆಸ್‌ ಕೈ ಹಿಡಿಯಬೇಕಿದ್ದ ಕ್ಷೇತ್ರಗಳೇ ಕೈ ತಪ್ಪಿರುವುದು ಹೇಳಿಕೊಳ್ಳಲಾಗದ ವೇದನೆ ಸೃಷ್ಟಿಸಿರುವುದಂತೂ ಸತ್ಯ.

ರಾಯಚೂರು ಲೋಕಸಭೆ ಕ್ಷೇತ್ರ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಎಂಟರಲ್ಲಿ ನಾಲ್ಕರಲ್ಲಿ ಬಿಜೆಪಿ ಶಾಸಕರಿದ್ದರೆ, ಉಳಿದ ಮೂರರಲ್ಲಿ ಕಾಂಗ್ರೆಸ್‌ ಹಾಗೂ ಒಂದರಲ್ಲಿ ಜೆಡಿಎಸ್‌ ಅಧಿಕಾರದಲ್ಲಿದೆ. ಬಿಜೆಪಿ ಶಾಸಕ ಇರುವ ದೇವದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಸಿದ್ದು ಬಿಟ್ಟರೆ ಉಳಿದ ಏಳು ಕ್ಷೇತ್ರಗಳಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಿದೆ.

ಇದರಿಂದ ಗೆಲುವಿನ ಹೊಣೆ ಹೊರಬೇಕಾದ ಆಯಾ ಕ್ಷೇತ್ರಗಳ ಶಾಸಕರು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನದಲ್ಲಿದ್ದಾರೆ. ಚುನಾವಣೆ ಪೂರ್ವದಲ್ಲಿ ಬೇರೆಯದ್ದೇ ಲೆಕ್ಕಾಚಾರದಲ್ಲಿದ್ದ ನಾಯಕರು ಈಗ ಮಗ್ಗಲು ಬದಲಿಸಿ ಮಾತನಾಡುತ್ತಿದ್ದಾರೆ. ಎಲ್ಲ ಕಡೆ ಇಂಥದ್ದೇ ಫಲಿತಾಂಶ ಬಂದಿದೆ ಎಂದು ಸಮಜಾಯಿಷಿ ನೀಡುತ್ತಿದ್ದಾರೆ. ಹಿಂದಿನ ವಿಧಾನಸಭೆ ಚುನಾಣೆಯಲ್ಲಿ ಜೆಡಿಎಸ್‌ಗೆ ಎರಡು ಲಕ್ಷಕ್ಕಿಂತ ಅಧಿಕ ಮತ ಲಭಿಸಿದ್ದವು. ಮಾನ್ವಿ, ಲಿಂಗಸೂಗೂರು, ಗ್ರಾಮೀಣ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಆ ಪಕ್ಷದ ಮತಗಳು ಕೈ ಹಿಡಿಯಲಿವೆ ಎಂಬ ನಿರೀಕ್ಷೆ ಹುಸಿಯಾಗಿದೆ. ಇನ್ನೂ ಅಲ್ಪಸಂಖ್ಯಾತ ಮತಗಳು ಹೆಚ್ಚಾಗಿರುವ ರಾಯಚೂರು ನಗರ ಕ್ಷೇತ್ರವೂ ಕೈ ಕೊಟ್ಟಿದೆ. ಪ್ರಭಾವಿ ನಾಯಕ ಎನಿಸಿಕೊಂಡ ಎನ್‌.ಎಸ್‌.ಬೋಸರಾಜ್‌ರ ತವರು ಕ್ಷೇತ್ರವಾದ ಮಾನ್ವಿಯಲ್ಲಿ ಹೀನಾಯ ಸೋಲಾಗಿದೆ. ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲು ನೆರವಾಗಬೇಕಿದ್ದ ಮಾಜಿ ಶಾಸಕ ಸೈಯ್ಯದ್‌ ಯಾಸಿನ್‌ ಕೂಡ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.

ಕಾಂಗ್ರೆಸ್‌ ಪಕ್ಷದೊಳಗಿನ ಆಂತರಿಕೆ ಕಚ್ಚಾಟ ಬಿ.ವಿ.ನಾಯಕ ಭವಿಷ್ಯ ಬಲಿ ಪಡೆದಿರುವುದನ್ನು ಅಲ್ಲಗಳೆಯಲಾಗದು. ಆದರೆ, ಸಂಸದರಾಗಿ ಅವರು ಇನ್ನೂ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿದ್ದರೆ ಸ್ವಂತ ಬಲದಿಂದಲೇ ಹೋರಾಟ ನಡೆಸಬಹುದಿತ್ತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.