ಶಹಾಪುರದಲ್ಲಿ ರಾಯಚೂರಿಗಿಂತ ಕಲಬುರಗಿಯದ್ದೇ ಸದ್ದು

ಮೈತ್ರಿ ಸರ್ಕಾರದಿಂದ ಗೊಂದಲ •ಪ್ರಧಾನಿ ಮೋದಿ ಅಲೆ •ಮೈತ್ರಿ ಲಾಭದ ನಿರೀಕ್ಷೆಯಲ್ಲಿ ಬಿಜೆಪಿ

Team Udayavani, May 3, 2019, 11:38 AM IST

3-May-12

ಶಹಾಪುರ ಕ್ಷೇತ್ರ

ಯಾದಗಿರಿ: ರಾಯಚೂರು ಲೋಕಸಭೆ ವ್ಯಾಪ್ತಿಯ ಶಹಾಪುರ ವಿಧಾನಸಭೆ ಕ್ಷೇತ್ರದಲ್ಲಿ ತನ್ನ ಕ್ಷೇತ್ರಕ್ಕಿಂತ ಹೆಚ್ಚು ನೆರೆಯ ಕಲಬುರಗಿ ಲೋಕಸಭೆ ಕ್ಷೇತ್ರದ ಕುರಿತು ಹೆಚ್ಚು ಚರ್ಚೆ ನಡೆಯುತ್ತಿದೆ.

ಶಹಾಪುರದಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿ ವಲಯದಲ್ಲಿ ಖರ್ಗೆ ಅವರು ಡಜನ್‌ ಬಾರಿ ಗೆಲುವು ಸಾಧಿಸಬೇಕು ಎನ್ನುವ ಬಯಕೆ ಇದ್ದು, ಕಲಬುರಗಿಯ ಫಲಿತಾಂಶದ ಮೇಲೆಯೇ ಇಲ್ಲಿನ ಜನ ಚಿತ್ತನೆಟ್ಟಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿ.ವಿ. ನಾಯಕ ಸಂಸದರಾಗಿ ಆಯ್ಕೆಯಾಗಿದ್ದರೂ ಶಹಾಪುರ ಮತಕ್ಷೇತ್ರದಲ್ಲಿ ಅಂದು ಬಿಜೆಪಿಗೆ ಐದು ಸಾವಿರ ಮತಗಳ ಲೀಡ್‌ ಬಂದಿತ್ತು. ಆಗ ಬಿಜೆಪಿ ಅಭ್ಯರ್ಥಿಯಾಗಿ ದೇವದುರ್ಗದ ಶಿವನಗೌಡ ನಾಯಕ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಸೋಲು ಅನುಭವಿಸಿದ್ದು ಬಿಜೆಪಿ ಪರ ಅನುಕಂಪವೂ ಕೆಲಸ ಮಾಡಲಿದೆ ಎನ್ನುವುದು ಇಲ್ಲಿನ ಮತದಾರರ ಲೆಕ್ಕಾಚಾರ.

ಕಳೆದ ಬಾರಿ ಕೆಲವೇ ಮತಗಳ ಅಂತರದಿಂದ ರಾಯಚೂರು ಲೋಕಸಭೆ ಕಳೆದುಕೊಂಡಿದ್ದ ಬಿಜೆಪಿ, ಈ ಬಾರಿ ಭರ್ಜರಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿ ಪ್ರಚಾರ ನಡೆಸಿದ್ದು, ಶಹಾಪುರ ಕ್ಷೇತ್ರದಲ್ಲಿಯೂ ಪ್ರಧಾನಿ ಮೋದಿ ಅಲೆ ಕೆಲಸ ಮಾಡಲಿದೆ ಎನ್ನಲಾಗಿದೆ. ದೇಶದ ವಿಚಾರವೂ ಪ್ರಮುಖ ಪಾತ್ರವಹಿಸಿದ್ದರಿಂದ ಕನಿಷ್ಠ 15 ಸಾವಿರ ಮತಗಳ ಲೀಡ್‌ ಬರಬಹುದು ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ನಗರದ ಹೊಟೇಲ್, ದಾಬಾಗಳಲ್ಲಿ ಕಲಬುರಗಿ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಮತ್ತು ಬಿಜೆಪಿಯ ಡಾ| ಉಮೇಶ ಜಾಧವ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯುತ್ತಿವೆ. ಅಲ್ಲದೇ ಇವರಿಬ್ಬರು ಎಷ್ಟು ಅಂತರದಿಂದ ಗೆಲ್ಲಲ್ಲಿದ್ದಾರೆ ಎನ್ನುವ ಕುರಿತು ಕೆಲವೊಂದು ಕಡೆ ಅಭಿಮಾನಿಗಳು ಬೆಟ್ಟಿಂಗ್‌ನಲ್ಲಿಯೂ ತೊಡಗಿರುವುದು ಕಂಡು ಬಂದಿದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಶಹಾಪುರದಲ್ಲಿ ಮೈತ್ರಿ ಅಭ್ಯರ್ಥಿ ಪರ ಇಲ್ಲಿನ ಜೆಡಿಎಸ್‌ ನಾಯಕರು ಪ್ರಚಾರಕ್ಕೆ ಇಳಿದಿಲ್ಲ. ಹೀಗಾಗಿ ಇಲ್ಲಿ ಮೈತ್ರಿ ಅಭ್ಯರ್ಥಿಗೆ ಹೊಡೆತ ಬೀಳಬಹುದೇ ಎನ್ನುವ ಅಂಶ ಗಮನ ಸೆಳೆದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅಮೀನರಡ್ಡಿ ಯಾಳಗಿ 23 ಸಾವಿರ ಮತಗಳನ್ನು ಪಡೆದಿದ್ದರು. ಅವರನ್ನು ಮನವೊಲಿಸುವಲ್ಲಿ ಬಹುತೇಕ ಕಾಂಗ್ರೆಸ್‌ ವಿಫಲವಾಗಿದೆ. ಹೀಗಾಗಿ ಜೆಡಿಎಸ್‌ ಮತಗಳು ಅನಾಯಾಸವಾಗಿ ಬಿಜೆಪಿಗೆ ಬರಲಿವೆ ಎಂದು ಜನರು ಚರ್ಚೆ ನಡೆಸುತ್ತಿದ್ದಾರೆ.

ಮಾಜಿ, ಹಾಲಿಗಳ ಭರ್ಜರಿ ಪ್ರಚಾರ
ಈ ಚುನಾವಣೆಯನ್ನು ಕಳೆದ ಬಾರಿಗಿಂತ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅವರ ಪ್ರಚಾರದಿಂದ ಕ್ಷೇತ್ರದಿಂದ ಹೆಚ್ಚಿನ ಮತಗಳನ್ನು ಸೆಳೆಯಬಹುದು ಎನ್ನುವ ಮಾತು ಕೇಳಿ ಬರುತ್ತಿದೆ. ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಸಾರ್ವಜನಿಕ ಸ್ಥಳವಾದ ಹೋಟೆಲ್ನಲ್ಲಿ ಮತದಾರರನ್ನು ಆಕರ್ಷಿಸಲು ತಿಂಡಿ ಸೇವಿಸಿ ಸುದ್ದಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ಈ ಬಾರಿ ಬಿಜೆಪಿ ಅಲೆಯಲ್ಲಿ ಹೆಚ್ಚಿನ ಜನರು ಕಮಲದತ್ತ ವಾಲಿರಬೇಕು ಎನ್ನುವ ಮಾತು ಕೇಳಿ ಬರುತ್ತಿದೆ.

ಅನೀಲ ಬಸೂದೆ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.