ಇಂದಿನಿಂದ ಮುಂಗಾರು ಸಾಂಸ್ಕೃತಿಕ ಹಬ್ಬ

ಮೊದಲ ದಿನ ರಾಜ್ಯದ ಎತ್ತುಗಳಿಂದ 1.5 ಟನ್‌ ಭಾರದ ಕಲ್ಲು ಎಳೆಯುವ ಸ್ಪರ್ಧೆ

Team Udayavani, Jun 16, 2019, 10:53 AM IST

16-June-9

ರಾಯಚೂರು: ಎಪಿಎಂಸಿ ಆವರಣದಲ್ಲಿ ಮುನ್ನೂರು ಕಾಪು ಸಮಾಜದಿಂದ ನಡೆಯುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ.

ರಾಯಚೂರು: ರೈತಾಪಿ ವರ್ಗದ ಹಬ್ಬವೆಂದೇ ಬಿಂಬಿತಗೊಂಡಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಜೂ.16ರಿಂದ 18ರವರೆಗೆ ವೈಭವದಿಂದ ಜರುಗಲಿದೆ. ಮುನ್ನೂರು ಕಾಪು ಸಮಾಜದಿಂದ ಕಳೆದ 19 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಈ ಹಬ್ಬವನ್ನು ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಕೃಷಿ ಬದುಕಿಗೆ ಹೊಂದಿಕೊಂಡಿರುವ ಈ ಹಬ್ಬದ ಜತೆ ಸಂಸ್ಕೃತಿಯೂ ಮೇಳೈಸುವುದರಿಂದ ಅದನ್ನು ಕಣ್ತುಂಬಿಕೊಳ್ಳಲೆಂದೇ ನಾನಾ ಭಾಗಗಳಿಂದ ಜನ ಆಗಮಿಸುತ್ತಾರೆ. ಈ ಮೂರು ದಿನಗಳಲ್ಲಿ ಹಳ್ಳಿ ಸೊಗಡಿನ ಸಾಹಸ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮವಾಗಿರುತ್ತದೆ.

ಸಮೃದ್ಧ ಮಳೆಯಾಗಿ ಉತ್ತಮ ಬೆಳೆ ಬಂದು ರೈತರ ಬದುಕು ಹಸನಾಗಲಿ ಎಂಬ ಮಹತ್ಕಾರ್ಯದಿಂದ ಈ ಕಾರ್ಯಕ್ರಮವನ್ನು ಬಲು ಶ್ರದ್ಧೆಯಿಂದ ನಡೆಸಿಕೊಂಡು ಬರುತ್ತಿರುವುದು ಮುನ್ನೂರು ಕಾಪು ಸಮಾಜದ ಹೆಗ್ಗಳಿಕೆ. ಈಗಾಗಲೇ ಈ ನಿಮಿತ್ತ ಸಾಮೂಹಿಕ ವಿವಾಹಗಳು ಜರುಗಿದರೆ, ಶುಕ್ರವಾರ ಲಕ್ಷ್ಮಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಹೋಮ ಜರುಗಿಸಲಾಯಿತು.

ಮುಂಗಾರು ಶುರುವಿನ ಮುನ್ನ ರೈತರು ಕೃಷಿ ಚಟುವಟಿಕೆಗೆ ಸಿದ್ಧಗೊಳ್ಳುತ್ತಿರುತ್ತಾರೆ. ಇಂಥ ಹೊತ್ತಲ್ಲಿ ಅವರಿಗೆ ಮನರಂಜಿಸುವ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಅದರ ಜತೆಗೆ ಆದಿದೇವತೆ ಲಕ್ಷ್ಮಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ ರೈತರನ್ನು ನೆಮ್ಮದಿಯಿಂದ ಇಡುವಂತೆ ಪ್ರಾರ್ಥಿಸಲಾಗುತ್ತದೆ. ರೈತರು ಕೂಡ ಖುಷಿಯಿಂದಲೇ ಪಾಲ್ಗೊಳ್ಳುತ್ತಾರೆ.

ಕಾಪು ಎಂದರೆ ರಕ್ಷಕ: ಆಂಧ್ರ ಮೂಲದ ಕಾಪು ಸಮಾಜದ ಸಾಕಷ್ಟು ಜನ ಗಡಿಭಾಗವಾದ ರಾಯಚೂರಿನಲ್ಲಿ ನೆಲೆ ನಿಂತಿದ್ದಾರೆ. ಬಲಿಜ, ಬಲಿಜ ನಾಯ್ದು, ತೆಲಗ ಒಂಟಾರಿ ಹಾಗೂ ತುರಪುಕಾಪು ಎಂಬಿತ್ಯಾದಿ ಹೆಸರುಗಳಿಂದಲೂ ಈ ಜನರನ್ನು ಕರೆಯಲಾಗುತ್ತದೆ. ರಕ್ಷಕ ಎಂಬ ಅರ್ಥ ನೀಡುವ ಕಾಪು ಜನಾಂಗ ರೈತರ ಹಿತ ಕಾಯುವ ಕಾಯಕಕ್ಕೆ ಮುಂದಾಗಿರುವುದು ವಿಶೇಷ. ಕೃಷಿ ಮತ್ತು ಕೃಷಿಗೆ ಸಂಬಂಧಿತ ವ್ಯವಹಾರಗಳಲ್ಲೇ ತೊಡಗಿದ ಈ ಸಮಾಜ ಇಂದಿಗೂ ಅದರೊಂದಿಗಿನ ನಂಟು ಕಳೆದುಕೊಂಡಿಲ್ಲ. ತಮಿಳುನಾಡು, ಕೇರಳ, ಓರಿಸ್ಸಾ, ಕರ್ನಾಟಕ, ಮಹಾರಾಷ್ಟ ಹಾಗೂ ಛತ್ತೀಸಘಡ ರಾಜ್ಯಗಳಲ್ಲೂ ಈ ಸಮಾಜದ ಜನರನ್ನು ಕಾಣಬಹುದು. ಸ್ವಾತಂತ್ರ್ಯ ಸಂಗ್ರಾಮದಲ್ಲೂ ಮುನ್ನೂರು ಕಾಪು ಸಮಾಜದ ಪಾತ್ರ ಸ್ಮರಣೀಯ. ಗಾಂಧೀಜಿಯವರ ಚಳವಳಿಗೆ ಮಾರು ಹೋಗಿ ಅದೆಷ್ಟೋ ಕಾಪು ಸಮಾಜದ ಯುವಕರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ನಿದರ್ಶನಗಳಿವೆ.

ಎಪಿಎಂಸಿಯಲ್ಲಿ ವ್ಯಾಪಾರ ಹಿಡಿತ ಹೊಂದಿರುವ ಈ ಸಮಾಜದ ಜನ, ಶಿಕ್ಷಣ ಸಂಸ್ಥೆ, ಕಲ್ಯಾಣ ಮಂಟಪ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಂಡಿದೆ. ಈ ಸಮಾಜದ ನಾಯಕ, ಹಬ್ಬದ ರೂವಾರಿಯಾಗಿರುವ ಎ.ಪಾಪಾರೆಡ್ಡಿ ಹಿಂದೆ ನಗರದ ಶಾಸಕರಾಗಿಯೂ ಅಧಿಕಾರ ನಡೆಸಿದ್ದರು. ಸಮಾಜದ ಮುಖಂಡರಾದ ಬೆಲ್ಲಂ ನರಸರೆಡ್ಡಿ, ಜಿ.ಬಸವರಾಜ ರೆಡ್ಡಿ ಅನೇಕರು ತಮ್ಮದೇ ಕೊಡುಗೆ ನೀಡುತ್ತ ಬಂದಿರುವುದು ವಿಶೇಷ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.