ಉಭಯ ನದಿಗಳಲ್ಲೂ ತಗ್ಗಿದ ಪ್ರವಾಹ


Team Udayavani, Aug 14, 2019, 11:37 AM IST

14-AGUST-11

ಲಿಂಗಸುಗೂರು: ನಗರದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ಪರಿಹಾರ ನಿಧಿ ಸಂಗ್ರಹಿಸಲಾಯಿತು.

ರಾಯಚೂರು: ದೇವದುರ್ಗ ತಾಲೂಕಿನ ಕರ್ಕಿಹಳ್ಳಿ ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನುಗ್ಗಿದ ನೀರು ಇನ್ನೂ ತೆರವಾಗಿಲ್ಲ.

ರಾಯಚೂರು: ಜಿಲ್ಲೆಯ ಎರಡು ನದಿಗಳಾದ ಕೃಷ್ಣೆ, ತುಂಗಭದ್ರೆಯಲ್ಲಿ ಪ್ರವಾಹ ಇಳಿಮುಖವಾಗಿದ್ದು, ಸಂತ್ರಸ್ತರು, ನದಿ ಪಾತ್ರದ ಜನ ನಿಟ್ಟುಸಿರು ಬಿಡುತ್ತಿದ್ದಾರೆ. ಎರಡೂ ನದಿಗಳಿಗೆ ಜಲಾಶಯದಿಂದ ಹರಿಸುವ ನೀರಿನ ಪ್ರಮಾಣ ತುಸು ಕಡಿಮೆ ಮಾಡಲಾಗಿದೆ.

ನಾರಾಯಣಪುರ ಜಲಾಶಯದಿಂದ ಮಂಗಳವಾರ 5.90 ಲಕ್ಷ ಕ್ಯೂಸೆಕ್‌ ಹರಿಸಿದ್ದು, ಸನ್ನತಿಯಿಂದ ಭೀಮಾ ನದಿಗೆ 1.10 ಲಕ್ಷ ಕ್ಯೂಸೆಕ್‌ ಹರಿಸಲಾಗಿದೆ. ಇದರಿಂದ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಪ್ರವಾಹ ತಗ್ಗಿದೆ. ಆದರೆ, ಇನ್ನೆರಡು ದಿನಗಳ ಕಾಲ ಭೀಮಾ ನದಿಗೆ ಒಂದು ಲಕ್ಷ ಕ್ಯೂಸೆಕ್‌ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ತಿಳಿಗೊಳ್ಳಲು ಇನ್ನೊಂದೆರಡು ದಿನಗಳು ಬೇಕಾಗಬಹುದು ಎನ್ನಲಾಗುತ್ತಿದೆ.

ಇನ್ನು ತುಂಗಭದ್ರಾ ಜಲಾಶಯದಿಂದಲೂ ಮಂಗಳವಾರ ಬೆಳಗ್ಗೆ 1.15 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಿದ ಪರಿಣಾಮ ಪ್ರವಾಹ ತಗ್ಗಿದ್ದು, ನದಿ ಪಾತ್ರದ ಜನರಲ್ಲಿ ಸಮಾಧಾನ ಮೂಡಿದೆ. ಆದರೆ, ಪ್ರವಾಹದಿಂದ ನೀರು ನುಗ್ಗಿದ ಗ್ರಾಮಗಳಲ್ಲಿ ವಾತಾವರಣ ತಿಳಿಗೊಂಡಿಲ್ಲ. ಎಲ್ಲ ಗ್ರಾಮಗಳಲ್ಲೂ ಇನ್ನೂ ನೀರು ನಿಂತಿದೆ. ಹೀಗಾಗಿ ಜನ ಪರಿಹಾರ ಕೇಂದ್ರಗಳಲ್ಲೇ ಉಳಿದುಕೊಂಡಿದ್ದಾರೆ. ಯಾರೂ ಕೂಡ ಊರುಗಳಿಗೆ ಹಿಂದಿರುಗುವ ಧೈರ್ಯ ತೋರುತ್ತಿಲ್ಲ. ಗ್ರಾಮಗಳು ಬಿಕೋ ಎನ್ನುತ್ತಿವೆ. ಕೆಲವೊಂದು ಹಳೇ ಮನೆಗಳ ಬುನಾದಿಗಳಿಗೆ ನೀರು ನಿಂತ ಕಾರಣ ಧಕ್ಕೆ ಆಗುತ್ತಿದೆ.

ಪಶ್ಚಿಮ ವಾಹಿನಿಗಳಲ್ಲಿ ಮಳೆ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿತ್ತು. ಇದರಿಂದ ನದಿ ತೀರದ ಸಿಂಧನೂರು ಹಾಗೂ ಮಾನ್ವಿ, ರಾಯಚೂರು ತಾಲೂಕು ವ್ಯಾಪ್ತಿಯ 34 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿತ್ತು. 30 ಗ್ರಾಮದ 602 ಜನರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೇ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿತ್ತು. ಸೋಮವಾರ ಪ್ರವಾಹದ ಹಿನ್ನೆಲೆಯಲ್ಲಿ ಚೀಕಲಪರ್ವಿ ವಿಜಯದಾಸರ ಕಟ್ಟೆವರೆಗೆ ನೀರು ಬಂದಿತ್ತು. ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯ ರಾಯರ ಜಪದಕಟ್ಟೆ ಜಲಾವೃತಗೊಂಡಿತ್ತು.

ಜಿಲ್ಲಾಡಳಿತ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದಢೇಸುಗೂರು ಗ್ರಾಮದ ಜನರಿಗೆ ಸರ್ಕಾರಿ ಶಾಲೆಗಳು, ಗ್ರಾಪಂ ಕಚೇರಿಯಲ್ಲಿ ಹಾಗೂ ಸಿಂಗಾಪುರ ಗ್ರಾಮದ ಜನರಿಗೆ ಸಮೀಪದ ಮುಕ್ಕುಂದ ಸರ್ಕಾರಿ ಶಾಲೆ ಹಾಗೂ ಬಾಲಾಜಿ ಕ್ಯಾಂಪ್‌ನ ಸರ್ಕಾರಿ ಶಾಲೆಯಲ್ಲಿ ಗಂಜಿ ಕೇಂದ್ರವನ್ನು ಸ್ಥಾಪನೆ ಮಾಡಿದೆ. ಮಾನ್ವಿ ತಾಲೂಕಿನ ಚೀಕಲಪರ್ವಿ, ದದ್ದಲ್, ಕಾತರಕಿ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಪ್ರವಾಹ ಇಳಿಮುಖವಾಗಿದ್ದು, ಜಿಲ್ಲಾಡಳಿತವು ಹೈಅಲರ್ಟ್‌ ಮುಂದುವರಿಸಿದೆ. ನೀರಿನ ಹರಿವು ಕಡಿಮೆಯಾಗಿರುವ ಕಾರಣ ಜನ ಕೂಡ ನಿರಾಳವಾಗಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.