ರೈತ ಸಂಘದಿಂದ ವಿಧಾನಸೌಧ ಖಾಲಿ ಮಾಡಿ ಹೋರಾಟ

ಜು.21ರಂದು ರೈತ ಬಂಡಾಯ ಹೋರಾಟದ ಹುತಾತ್ಮ ರೈತರ ಹೆಸರಿನಲ್ಲಿ ಬರಮುಕ್ತ ಕರ್ನಾಟಕ ಆಂದೋಲನ ಆರಂಭ: ನಾಗೇಂದ್ರ

Team Udayavani, Jun 14, 2019, 4:18 PM IST

Udayavani Kannada Newspaper

ರಾಯಚೂರು: ಸತತ ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದರೆ ಆಳುವ ಸರ್ಕಾರ ಹಾಗೂ ವಿಪಕ್ಷ ಅಧಿಕಾರಕ್ಕಾಗಿ ಹಪಾಹಪಿಸುತ್ತಿವೆ. ಎಲ್ಲ ಪಕ್ಷಗಳ ಧೋರಣೆ ಖಂಡಿಸಿ ವಿಧಾನಸೌಧ ಖಾಲಿ ಮಾಡಿ ಹೋರಾಟ ಹಮ್ಮಿಕೊಂಡಿರುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೀಕರ ಕ್ಷಾಮದಿಂದ ರೈತರಿಗೆ ಸಂಕಷ್ಟ ಕಾಲ ಎದುರಾಗಿದೆ. ತೀವ್ರ ಬರ ಎದುರಿಸುವ ರಾಜ್ಯಗಳಲ್ಲಿ ರಾಜ್ಯಕ್ಕೆ 2ನೇ ಸ್ಥಾನವಿದೆ. ಇಡೀ ದೇಶದಲ್ಲಿ ಶೇ.45ರಷ್ಟು ಬರ ಇದ್ದರೆ ರಾಜ್ಯದಲ್ಲಿ ಶೇ.16ರಷ್ಟಿದೆ. ಜಲಾಶಯಗಳೆಲ್ಲ ಖಾಲಿಯಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಆದರೆ, ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್‌, ಜೆಡಿಎಸ್‌ ಮತ್ತು ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ದಿನಬೆಳಗಾದರೆ ಖುರ್ಚಿಗಾಗಿ ಕಚ್ಚಾಡುವುದನ್ನೇ ನೋಡುವಂತಾಗಿದೆ. ಹೀಗಾಗಿ ವಿಧಾನಸೌಧ ಖಾಲಿ ಮಾಡಿ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದರು.

ರಾಜ್ಯ ರೈತ ಸಂಘ ಪ್ರಸಕ್ತ ವರ್ಷದಿಂದ ಸಾಕಷ್ಟು ಹೋರಾಟಗಳನ್ನು ರೂಪಿಸುತ್ತಿದೆ. ಜು.21ರಂದು ರೈತ ಬಂಡಾಯ ಹೋರಾಟದ ಹುತಾತ್ಮ ರೈತರ ಹೆಸರಿನಲ್ಲಿ ಬರಮುಕ್ತ ಕರ್ನಾಟಕ ಆಂದೋಲನ ಶುರು ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ 100 ಜನರನ್ನು ತಯಾರು ಮಾಡಿ ನಮ್ಮ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಂದಾಗುವುದಾಗಿ ತಿಳಿಸಿದರು.

ಬರ ನಿರ್ವಹಣೆಗೆ ಸರ್ಕಾರಕ್ಕೆ ಏನು ಸಲಹೆ ಸೂಚನೆ ನೀಡಬೇಕು ಎಂಬ ಬಗ್ಗೆ ಕರಡು ಸಮಿತಿ ರಚಿಸಲಾಗುವುದು. ಶಿರಾದ ಮರಡಿಗುಡ್ಡದಲ್ಲಿ ಜೂ.29ಕ್ಕೆ 1 ಸಾವಿರ ಸಸಿ ನೆಡಲಾಗುವುದು. 30ಕ್ಕೆ ಚಿತ್ರದುರ್ಗದಲ್ಲಿ ತುಂಗಾ ಕಣಿವೆಯ ವ್ಯಾಪ್ತಿಯಲ್ಲಿ ಮಳೆ ಕೊಯ್ಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕೆರೆ ಒತ್ತುವರಿ ತೆರವು ಮಾಡುವುದು, ಮರಳು ದಂಧೆಗೆ ಕಡಿವಾಣ ಹಾಕುವಂಥ ಕೆಲಸಗಳನ್ನು ಮಾಡಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಸಂಘದ ಸದಸ್ಯರಿಗೆ ಕಟ್ಟುನಿಟ್ಟಿನ ಸಂದೇಶ ನೀಡಿದ್ದು, ರೈತ ಸಂಘದ ಸದಸ್ಯರು ಕೆರೆ ಒತ್ತುವರಿ ಮಾಡಿದ್ದರೆ ತಕ್ಷಣವೇ ತೆರವು ಮಾಡಬೇಕು. ಮರಳು ದಂಧೆ ನಡೆಸುತ್ತಿದ್ದರೆ ಕೂಡಲೇ ಕೈಬಿಡುವಂತೆ ಒತ್ತಾಯಿಸಿರುವುದಾಗಿ ತಿಳಿಸಿದರು.

ಭೂ ಸ್ವಾಧೀನ ಮಸೂದೆ ಪ್ರತಿಯನ್ನು ಸುಡುವ ಮೂಲಕ ಆರಂಭದಲ್ಲಿ ಹೋರಾಟಕ್ಕೆ ಚಾಲನೆ ನೀಡಿದ್ದೇ ನಮ್ಮ ಸಂಘ. ಆದರೆ, ಈಗ ಬೇರೆ ಸಂಘಟನೆಯವರು ಹೋರಾಟ ನಡೆಸಿರುವುದಕ್ಕೆ ನಾವು ಬೆಂಬಲ ನೀಡಲಿಲ್ಲ. ಆದರೆ, ವಿರೋಧಿಸಿಲ್ಲ. ನಮ್ಮ ಸಂಘದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇತ್ತು. ಈಗ ಎಲ್ಲ ಬಗೆ ಹರಿದಿದೆ ಎಂದು ತಿಳಿಸಿದರು.

ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿ.ಟಿ. ರಾಮಸ್ವಾಮಿ, ಗೋಪಾಲ, ರಾಮು ಚನ್ನಪಟ್ಟಣ ಇದ್ದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.